News Karnataka Kannada
Tuesday, April 30 2024
ಸಮುದಾಯ

ಚಿಕ್ಕಮಗಳೂರು ಲಯನ್ಸ್ ಸಂಸ್ಥೆಗೆ ಅಗ್ರಸ್ಥಾನ: ಸಂಜಿತ್ ಶೆಟ್ಟಿ

Sanjith Shetty: Chikkamagaluru Lions tops the list
Photo Credit : News Kannada

ಚಿಕ್ಕಮಗಳೂರು : ಸಮಾಜ ಮುಖಿ ಸೇವಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಚಿಕ್ಕಮಗಳೂರು ಲಯನ್ಸ್ ಸೇವಾ ಸಂಸ್ಥೆ ಅಗ್ರಸ್ಥಾನದಲ್ಲಿದೆ ಎಂದು ಲಯನ್ ಜಿಲ್ಲಾ ರಾಜ್ಯಪಾಲ ಎಸ್. ಸಂಜಿತ್ ಶೆಟ್ಟಿ ಹೇಳಿದ್ದಾರೆ.

ಚಿಕ್ಕಮಗಳೂರಿನ ಲಯನ್ಸ್ ಸಂಸ್ಥೆಗೆ ಶುಕ್ರವಾರ ಸಂಜೆ ಅಧಿಕೃತ ಭೇಟಿನೀಡಿ ಲಯನ್ಸ್ ಸೇವಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಮಾತು ಕಡಿಮೆ ಮಾಡಿ ಕೆಲಸ ಜಾಸ್ತಿ ಮಾಡಬೇಕು, ಸಮಾಜದ ಲ್ಲಿರುವ ಅಸಹಾಯಕರು ಮತ್ತು ನಿರ್ಗತಿಕರು ಸೇರಿದಂತೆ ಬಡತನ ದಲ್ಲಿರುವ ಕಟ್ಟ ಕಡೆಯ ಮನುಷ್ಯ ಹಾಗೂ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ನೆರವು ನೀಡಬೇಕೆಂದು ತಿಳಿಸಿದರು.

ಹುಟ್ಟು ಆಕಸ್ಮಿಕ, ಸಾವು ಖಚಿತ. ಈ ನಡುವೆ ಲಯನ್ಸ್ ನಂತಹ ಸೇವಾ ಸಂಸ್ಥೆಗಳ ಮೂಲಕ ಒಳ್ಳೆಯ ಕೆಲಸ ಮಾಡಬೇಕು. ನಾವು ಮಾಡುವ ಸಮಾಜಮುಖಿ ಕೆಲಸಗಳು ಅಸಹಾಯಕರಿಗೆ ತಲುಪಬೇಕು. ಇದು ಲಯನ್ಸ್ ಸಂಸ್ಥೆಯ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.

ಚಿಕ್ಕಮಗಳೂರು ಲಯನ್ಸ್ ಸಂಸ್ಥೆ ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದು, ಲಯನ್ಸ್ ಸಂಸ್ಥೆ ಅಧ್ಯಕ್ಷ ಬಿ.ಎನ್. ವೆಂಕಟೇಶ್ ಮತ್ತು ಕಾರ್ಯದರ್ಶಿ ಜಿ. ರಮೇಶ್ ಮತ್ತವರ ತಂಡದ ಕಾರ್ಯಚಟು ವಟಿಕೆಗಳನ್ನು ಶ್ಲಾಘಿಸಿದರು.

ಲಯನ್ಸ್ ಸಂಸ್ಥೆ ಸಮಾಜಮುಖಿ ಚಟುವಟಿಕೆಗಳ ಜೊತೆಗೆ ಪರಿಸರ ಸಂರಕ್ಷಣೆ, ಆರೋಗ್ಯ ಭಾಗ್ಯ ಕುರಿತು ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಹೆಚ್ಚಿನ ಕೆಲಸ ಮಾಡಬೇಕೆಂದರು.

ಲಯನ್ಸ್ ಪ್ರಾಂತೀಯ ಅಧ್ಯಕ್ಷ ಜೆ.ಎನ್.ಜೆ. ಲೋಬೋ, ಲಯನ್ಸ್ ಪ್ರಾಂತೀಯ ಸಂಯೋಜಕ ತಾರಾನಾಥ್, ಅರವಿಂದ್ ಶಣೈ ಸಮಾರಂಭದಲ್ಲಿ ಮಾತನಾಡಿ ಲಯನ್ಸ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಎನ್. ವೆಂಕಟೇಶ್ ಸ್ವಾಗತಿಸಿ ಮಾತನಾಡಿದರು. ಲಯನ್ಸ್ ಕಾರ್ಯದರ್ಶಿ ಜಿ. ರಮೇಶ್ ಲಯನ್ಸ್ ಸಂಸ್ಥೆ ಈವರೆಗೆ ಕೈಗೊಂಡಿರುವ ಕಾರ್ಯಚಟುವಟಿಕೆಗಳನ್ನು ವಿವರಿಸಿದರು.

ಲಯನ್ಸ್ ಜಿಲ್ಲೆ ೩೧೩ಡಿ ಇದರ ಸಂಸ್ಥೆಯ ಪ್ರಥಮ ಮಹಿಳೆ ಪ್ರಗತಿ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಹೆಚ್.ಸಿ. ಶಶಿಪ್ರಸಾದ್, ಜಿಲ್ಲಾ ರಾಜ್ಯಪಾಲ ಸಂಜಿತ್ ಶೆಟ್ಟಿಯವರನ್ನು ಪರಿಚಯಿಸಿದರು. ಲಯನ್ಸ್ ಮಾಜಿ ರಾಜ್ಯಪಾಲ ಹೆಚ್.ಆರ್. ಹರೀಶ್, ಲಿಯೋ ಕ್ಲಬ್ ಅಧ್ಯಕ್ಷೆ ಮೋನಿಷ, ಕಾರ್ಯದರ್ಶಿ ಅಮರ್‌ನಾಥ್, ಖಜಾಂಚಿ ಪ್ರಭು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಲಯನ್ಸ್ ಖಜಾಂಚಿ ಸಿ.ಎನ್. ಕುಮಾರ್ ವಂದಿಸಿದರು. ಲಯನ್ಸ್ ಸದಸ್ಯ ರತ್ನಾಕರ್ ಧ್ವಜವಂದನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಮಾತು ಕಡಿಮೆ ಮಾಡಿ ಕೆಲಸ ಜಾಸ್ತಿ ಮಾಡಬೇಕು, ಸಮಾಜದ ಲ್ಲಿರುವ ಅಸಹಾಯಕರು ಮತ್ತು ನಿರ್ಗತಿಕರು ಸೇರಿದಂತೆ ಬಡತನ ದಲ್ಲಿರುವ ಕಟ್ಟ ಕಡೆಯ ಮನುಷ್ಯ ಹಾಗೂ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ನೆರವು ನೀಡಬೇಕೆಂದು ತಿಳಿಸಿದರು.

ಹುಟ್ಟು ಆಕಸ್ಮಿಕ, ಸಾವು ಖಚಿತ. ಈ ನಡುವೆ ಲಯನ್ಸ್ ನಂತಹ ಸೇವಾ ಸಂಸ್ಥೆಗಳ ಮೂಲಕ ಒಳ್ಳೆಯ ಕೆಲಸ ಮಾಡಬೇಕು. ನಾವು ಮಾಡುವ ಸಮಾಜಮುಖಿ ಕೆಲಸಗಳು ಅಸಹಾಯಕರಿಗೆ ತಲುಪಬೇಕು. ಇದು ಲಯನ್ಸ್ ಸಂಸ್ಥೆಯ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.

ಚಿಕ್ಕಮಗಳೂರು ಲಯನ್ಸ್ ಸಂಸ್ಥೆ ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದು, ಲಯನ್ಸ್ ಸಂಸ್ಥೆ ಅಧ್ಯಕ್ಷ ಬಿ.ಎನ್. ವೆಂಕಟೇಶ್ ಮತ್ತು ಕಾರ್ಯದರ್ಶಿ ಜಿ. ರಮೇಶ್ ಮತ್ತವರ ತಂಡದ ಕಾರ್ಯಚಟು ವಟಿಕೆಗಳನ್ನು ಶ್ಲಾಘಿಸಿದರು.

ಲಯನ್ಸ್ ಸಂಸ್ಥೆ ಸಮಾಜಮುಖಿ ಚಟುವಟಿಕೆಗಳ ಜೊತೆಗೆ ಪರಿಸರ ಸಂರಕ್ಷಣೆ, ಆರೋಗ್ಯ ಭಾಗ್ಯ ಕುರಿತು ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಹೆಚ್ಚಿನ ಕೆಲಸ ಮಾಡಬೇಕೆಂದರು. ಲಯನ್ಸ್ ಪ್ರಾಂತೀಯ ಅಧ್ಯಕ್ಷ ಜೆ.ಎನ್.ಜೆ. ಲೋಬೋ, ಲಯನ್ಸ್ ಪ್ರಾಂತೀಯ ಸಂಯೋಜಕ ತಾರಾನಾಥ್, ಅರವಿಂದ್ ಶಣೈ ಸಮಾರಂಭದಲ್ಲಿ ಮಾತನಾಡಿ ಲಯನ್ಸ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಎನ್. ವೆಂಕಟೇಶ್ ಸ್ವಾಗತಿಸಿ ಮಾತನಾಡಿದರು. ಲಯನ್ಸ್ ಕಾರ್ಯದರ್ಶಿ ಜಿ. ರಮೇಶ್ ಲಯನ್ಸ್ ಸಂಸ್ಥೆ ಈವರೆಗೆ ಕೈಗೊಂಡಿರುವ ಕಾರ್ಯಚಟುವಟಿಕೆಗಳನ್ನು ವಿವರಿಸಿದರು. ಲಯನ್ಸ್ ಜಿಲ್ಲೆ ೩೧೩ಡಿ ಇದರ ಸಂಸ್ಥೆಯ ಪ್ರಥಮ ಮಹಿಳೆ ಪ್ರಗತಿ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಹೆಚ್.ಸಿ. ಶಶಿಪ್ರಸಾದ್, ಜಿಲ್ಲಾ ರಾಜ್ಯಪಾಲ ಸಂಜಿತ್ ಶೆಟ್ಟಿಯವರನ್ನು ಪರಿಚಯಿಸಿದರು. ಲಯನ್ಸ್ ಮಾಜಿ ರಾಜ್ಯಪಾಲ ಹೆಚ್.ಆರ್. ಹರೀಶ್, ಲಿಯೋ ಕ್ಲಬ್ ಅಧ್ಯಕ್ಷೆ ಮೋನಿಷ, ಕಾರ್ಯದರ್ಶಿ ಅಮರ್‌ನಾಥ್, ಖಜಾಂಚಿ ಪ್ರಭು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಲಯನ್ಸ್ ಖಜಾಂಚಿ ಸಿ.ಎನ್. ಕುಮಾರ್ ವಂದಿಸಿದರು. ಲಯನ್ಸ್ ಸದಸ್ಯ ರತ್ನಾಕರ್ ಧ್ವಜವಂದನೆ ನೆರವೇರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು