ಮಂಗಳೂರು: ಲೋಕ ಸುಭಿಕ್ಷೆ ಹಾಗೂ ಕಲ್ಯಾಣಾರ್ಥ, ಭೂಮಿಗೆ ಮಳೆಯ ಕೃಪೆಗಾಗಿ ಶುಕ್ರವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಶುಕ್ರವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶತ ಸೀಯಾಳಾಭಿಷೇಕ, ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು.
ಕರಾವಳಿ ಭಾಗದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಜಲಕ್ಷಾಮದಿಂದ ಕರಾವಳಿಯ ಬಹುತೇಕ ನದಿಮೂಲ, ಬಾವಿ, ಕೆರೆ, ಬೋರ್ವೆಲ್ ಬತ್ತಿದ್ದು, ಕೃಷಿ ಚಟುವಟಿಕೆಗಳ ಜತೆ ಕುಡಿಯುವ ನೀರಿನ ಕೊರತೆಯಾಗಿದೆ. ಇನ್ನೂ ಮಳೆ ವಿಳಂಬವಾಗುವ ಮುನ್ಸೂಚನೆಯಿದ್ದು, ಶೀಘ್ರ ಮಳೆಯಾಗಲಿ ಎಂದು ದೇವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು.
ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ,ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕ್ಷೇತ್ರದ ಕೋಶಾಧಿಕಾರಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಮಹಿಳಾ ಘಟಕದ ನಾಯಕಿ ಶಾಲೆಟ್ ಪಿಂಟೋ, ಕಾರ್ಪೊರೇಟರ್ಗಳಾದ ಭಾಸ್ಕರ್ ಮೊಯ್ಲಿ, ಶಶಿಧರ ಹೆಗ್ಡೆ, ಮಾಜಿ ಕಾರ್ಪೊರೇಟರ್ಗಳಾದ ಡಿ.ಕೆ.ಅಶೋಕ್, ಅಪ್ಪಿ, ಕಾಂಗ್ರೆಸ್ ಮುಖಂಡರಾದ ಸತೀಶ್ ಪ್ರಭು, ಗೆಜ್ಜೆಗಿರಿ ಕ್ಷೇತ್ರದ ಉಪಾಧ್ಯಕ್ಷ ರವಿ ಚಿಲಿಂಬಿ, ವಕ್ತಾರ ರಾಜೇಂದ್ರ ಚಿಲಿಂಬಿ ಸೇರಿದಂತೆ ಹಲವರು ಇದ್ದರು
ನ್ಯೂಸ್ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್ ಪ್ರೈಸಸ್ ಹಾಗೂ ಸ್ಪೇಷಲ್ ಪೇರೆಂಟ್ಸ್ ಸಪೋರ್ಟ್ ಗ್ರೂಪ್ ಅವರ ಸಹಯೋಗದೊಂದಿಗೆ Aibha association…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…
ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…
ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…
17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದನ್ನು ರೆಡ್ ಹ್ಯಾಂಡ್ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…
ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…