News Karnataka Kannada
Tuesday, May 07 2024
ಸಮುದಾಯ

ಚುಂಚನಕಟ್ಟೆಯಲ್ಲಿ ಶ್ರೀರಾಮ ದೇವರ ಬ್ರಹ್ಮ ರಥೋತ್ಸವ

ಇತಿಹಾಸ ಪ್ರಸಿದ್ಧ ಸಾಲಿಗ್ರಾಮ ತಾಲೂಕು ಚುಂಚನಕಟ್ಟೆ ಗ್ರಾಮದ ಶ್ರೀರಾಮ ದೇವರ ಬ್ರಹ್ಮ ರಥೋತ್ಸವ ನಡೆಯಿತು.
Photo Credit : By Author

ಕೆ.ಆರ್.ನಗರ: ಇತಿಹಾಸ ಪ್ರಸಿದ್ಧ ಸಾಲಿಗ್ರಾಮ ತಾಲೂಕು ಚುಂಚನಕಟ್ಟೆ ಗ್ರಾಮದ ಶ್ರೀರಾಮ ದೇವರ ಬ್ರಹ್ಮ ರಥೋತ್ಸವ ನಡೆಯಿತು.

ಧಾರ್ಮಿಕ ದತ್ತಿ ಇಲಾಖೆ ಮತ್ತು ತಾಲೂಕು ಆಡಳಿತ ವತಿಯಿಂದ ಶ್ರೀ ಕೋದಂಡರಾಮ ದೇವರ ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ಬೆಳಗ್ಗೆ 11.10 ರಿಂದ 12.10 ಕ್ಕೆ ಬ್ರಹ್ಮರಥೋತ್ಸವ ನಡೆಯಿತು. ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ, ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ, ಯಡತೊರೆ ಯೋಗಾನಂದೇಶ್ವರ ಶಂಕರಭಾರತಿ ಸ್ವಾಮೀಜಿ, ಕೆ ಆರ್ ನಗರ ಕಾಗಿನೆಲೆ ಶಾಖಾ ಮಠ ಶಿವಾನಂದಪುರಿ ಸ್ವಾಮೀಜಿ,ಬೆಟ್ಟದಪುರ ವಿರಕ್ತ ಮಠ ಚನ್ನಬಸವದೇಶಿಕೇಂದ್ರ ಸ್ವಾಮಿಜಿ, ಕರ್ಪೂರವಳ್ಳಿ ಜಂಗಮ ಮಠ ಚಂದ್ರಶೇಖರಶಿವಾಚಾರ್ಯ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿದ್ದರು.

ಈಗಾಗಲೇ ರಥ ಚಕ್ರ ಸೇರಿದಂತೆ, ರಥದ ಗುಣಮಟ್ಟವನ್ನು ರಥ ಎಳೆಯುವ ಮೂಲಕ ಪರೀಕ್ಷಿಸಿ, ಕಬ್ಬಿಣದ ಪರಿಕರಗಳನ್ನು ರಥಕ್ಕೆ ಕಟ್ಟಿ, ರಥ ರಸ್ತೆಗೆ ಮರಳನ್ನು ಹರಡಲಾಗಿತ್ತು. ಭದ್ರತೆಗಾಗಿ ದೇಗುಲದಲ್ಲಿ ಮುಖ್ಯ ಪೇದೆ ಸೇರಿದಂತೆ 4 ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಉತ್ಸವ ಮೂರ್ತಿಗಳ ಸ್ವಚ್ಚತೆ, ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ಸರತಿ ಸಾಲು, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು.

ಮುಂಜಾಗ್ರತಾ ಕ್ರಮವಾಗಿ ಸರ್ಕಲ್ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್, ಎಎಸ್ಐ ಒಳಗೊಂಡಂತೆ ಸುಮಾರು 180ಕ್ಕೂ ಹೆಚ್ಚು ವಿಶೇಷ ಪಡೆಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಮಹಿಳಾ ಪೊಲೀಸ್ ಸಿಬ್ಬಂದಿ ಗಳನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು