Categories: ವಿಶೇಷ

ಇಂದು ಮಹಾತ್ಮ ಗಾಂಧಿ 154ನೇ ಜನ್ಮದಿನಾಚರಣೆ

ದೆಹಲಿ: ಭಾರತದಲ್ಲಿ ಪ್ರತಿ ವರ್ಷವು ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆ ಮಾಡಲಾಗುತ್ತದೆ. ಶಾಲೆ, ಕಾಲೇಜುಗಳು ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿಯೂ ಸಹ ತಪ್ಪದೇ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ದಿನದಂದು ಶಾಲೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ನೆನೆದು ಅವರ ಕೊಡುಗೆ, ಅವರ ತತ್ವ ಸಿದ್ಧಾಂತಗಳನ್ನು ನೆನೆದು ಸ್ಮರಿಸಲಾಗುತ್ತದೆ. ಅವರಿಗೆ ವಿಶೇಷ ಗೌರವವನ್ನು ಈ ದಿನಾಂಕದಂದು ಪ್ರತಿ ವರ್ಷ ಸಲ್ಲಿಸಲಾಗುತ್ತದೆ. ಅವರ ಕುರಿತ ಎಲ್ಲ ಐತಿಹಾಸಿಕ ಮಾಹಿತಿಗಳನ್ನು ಸ್ಮರಿಸುವ ದಿನವು ಹೌದು.

ಸ್ವಾತಂತ್ರ್ಯ ಹೋರಾಟವಲ್ಲದೇ ಸಾಮಾಜಿಕ ಕಳಕಳಿಯನ್ನೂ ಗಾಂಧೀಜಿಯವರು ಹೊಂದಿದ್ದರು. ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ತಾರತಮ್ಯ, ಅಸ್ಪೃಶ್ಯತೆ, ಮದ್ಯ ಸೇವನೆಯನ್ನು ವಿರೋಧಿಸಿದರು. ದಲಿತರು, ಮಹಿಳೆಯರಿಗೆ ಗೌರವ ನೀಡಲು ಹೇಳುತ್ತಿದ್ದರು.

ಸ್ವದೇಶಿ ವಸ್ತುಗಳನ್ನು ಪ್ರೀತಿಸಲು ಸಲಹೆ ನೀಡಿದರು. ಇದರಿಂದ ಸ್ಥಳೀಯ ಕೈಗಾರಿಕೆಗಳಿಗೆ ಉತ್ತೇಜನ ಸಿಕ್ಕಿತು. ಸ್ವಾತಂತ್ರ್ಯ ಸಿಕ್ಕ ಆರೇ ತಿಂಗಳಿಗೆ ಅಂದರೆ 1948 ಜನವರಿ 20 ರಂದು ಗಾಂಧೀಜಿ ಹತ್ಯೆಗೀಡಾದರು.

ಇನ್ನು ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಇದೇ ವೇಳೆ ರಾಜ್‌ಘಾಟ್‌ನಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ಮುಖಂಡರು ಪುಷ್ಪ ನಮನ ಸಲ್ಲಿಸಿದರು.

 

 

 

Ashitha S

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

2 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

19 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

37 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

53 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago