ಮೈಸೂರು: ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಮೂವರು ಹೊಸ ಅತಿಥಿಗಳು ಬಂದಿದ್ದಾರೆ.ಅಂದರೆ ಬಿಳಿ ಹುಲಿ ತಾರಾ ಮೂರು ಮರಿಗಳಿಗೆ ಜನ್ಮ ನೀಡಿದೆ.
ಕಳೆದ ಏ.26ರಂದು 8 ವರ್ಷದ ತಾರಾ ಹೆಸರಿನ ಹುಲಿ ಹಾಗೂ 4 ವರ್ಷದ ರಾಕಿ ಹೆಸರಿನ ಗಂಡು ಹುಲಿಗೆ ಈ ಮೂರು ಮರಿಗಳು ಜನಿಸಿದ್ದು ತಾಯಿ ತನ್ನ ಮರಿಗಳೊಂದಿಗೆ ಆರೋಗ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಮೈಸೂರು ಚಾಮರಾಜೇಂದ್ರ ಮೃಗಾಲಯದಲ್ಲಿ 9 ಗಂಡು ಹುಲಿ, 7 ಹೆಣ್ಣು ಹುಲಿ ಸೇರಿದಂತೆ ಒಟ್ಟು 16 ಹುಲಿಗಳು ವಾಸಿಸುತ್ತಿವೆ. ಈಗ ಹೊಸದಾಗಿ ಮೂರು ಮರಿಗಳು ಜನಿಸಿರುವುದರಿಂದ ಹುಲಿಗಳ ಸಂಖ್ಯೆ 19ಕ್ಕೆ ಏರಿದಂತಾಗಿದೆ.
ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧಕ್ಷ ಎಲ್.ಆರ್.ಮಹದೇವಸ್ವಾಮಿ ಮಾತನಾಡಿ ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನು ಮೈಸೂರು ಮೃಗಾಲಯ ಹೊಂದಿದೆ. ಈಗ ಮೂರು ಮರಿಗಳು ಜನಿಸಿರುವುದರಿಂದ ಪ್ರವಾಸಿಗರನ್ನು ಹೆಚ್ಚು ಆಕರ್ಷಿಸಲಿವೆ. ಜತೆಗೆ ಪ್ರಾಣಿ ವಿನಿಮಯ ಯೋಜನೆಯಡಿ ಹುಲಿಗಳನ್ನು ನೀಡಿ ಬೇರೆ ಪ್ರಾಣಿಗಳನ್ನು ಈ ಮೃಗಾಲಯಕ್ಕೆ ತರಲು ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.
ಒಟ್ಟಾರೆ ಮೃಗಾಲಯಕ್ಕೆ ಹೊಸ ಅತಿಥಿಗಳು ಬಂದಿದ್ದು, ಇವುಗಳ ಚೆನ್ನಾಟ ಮುಂದಿನ ದಿನಗಳಲ್ಲಿ ಮೃಗಾಲಯಕ್ಕೆ ತೆರಳುವವರಿಗೆ ಲಭ್ಯವಾಗಲಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…