ಅಂಕಣ

ಕೂದಲ ಸೌಂದರ್ಯ ವೃದ್ಧಿಗೆ ಸಹಕಾರಿ ತೆಂಗಿನ ಎಣ್ಣೆ

ಹೆಣ್ಣು ಸೌಂದರ್ಯ ಪ್ರಿಯೆ, ಆಕೆ ತನ್ನ ಸೌಂದರ್ಯ ವೃದ್ಧಿಗೆ ಹಲವಾರು ಹೊಸ ಹೊಸ ಪ್ರಯೋಗಗಳನ್ನು ಅನುಸರಿಸುತ್ತಾಳೆ. ಇದು ಕೆಲವೊಮ್ಮೆ ಉತ್ತಮ ರಿಸಲ್ಟ್ ಕೊಡಬಹುದು, ಕೆಲವೊಮ್ಮೆ ಸಮಸ್ಯೆಗಳನ್ನು ತಂದೊಡ್ಡುವ ಪರಿಸ್ಥಿತಿಯೂ ನಿರ್ಮಾಣವಾಗಬಹುದು. ಸೌಂದರ್ಯ ಎಂದಾಗ ಯುವತಿಯರು ಕೇಶದ ಬಗ್ಗೆಯೂ ಅತೀವ ಕಾಳಜಿವಹಿಸುತ್ತಾರೆ. ಏಕೆಂದರೆ ಮುಖದ ಅಂದವನ್ನು ಹೆಚ್ಚಿಸುವಲ್ಲಿ ಕೇಶ ವಿನ್ಯಾಸವೂ ಅತೀ ಮುಖ್ಯ ಪಾತ್ರ ವಹಿಸುತ್ತದೆ. ಕೂದಲು ಚೆನ್ನಾಗಿದ್ದರೆ ಕೇಶ ವಿನ್ಯಾಸವನ್ನು ಅಚ್ಚುಕಟ್ಟಾಗಿ ಮುಖಕ್ಕೆ ಒಪ್ಪುವಂತಹ ವಿನ್ಯಾಸ ಮಾಡಲು ಸಹಾಯವಾಗುತ್ತದೆ. ಹೀಗೆ ಮಾಡಿದಾಗ ಮುಖ ಅಂದವಾಗಿ ಕಾಣುತ್ತದೆ.

ಕೂದಲು ಉದ್ದ ಮತ್ತು ದಪ್ಪವಾಗಿ ಹೊಳೆಯುವಂತೆ ಮಾಡುವಲ್ಲಿ ತೆಂಗಿನ ಎಣ್ಣೆ ಸಹಕಾರಿಯಾಗಿದೆ. ಇದಕ್ಕಾಗಿ ಕೆಲವೂಂದು ಸಿಂಪಲ್ ಟಿಪ್ಸ್ ಇಲ್ಲಿದೆ, ತೆಂಗಿನ ಎಣ್ಣೆಗೆ ಕೆಲವು ಹನಿ ನಿಂಬೆ ಎಣ್ಣೆ ಸೇರಿಸಿ. ಚೆನ್ನಾಗಿ ಮಿಶ್ರಣ ಮಾಡಿ ಕೂದಲಿನ ಬುಡಕ್ಕೆ ವಾರಕ್ಕೆ ಎರಡು ಅಥವಾ ಮೂರು ಬಾರಿ ಮಸಾಜ್ ಮಾಡಿದರೆ ಕೆಲವೇ ದಿನಗಳಲ್ಲಿ ತಲೆಹೊಟ್ಟು ಸಮಸ್ಯೆ ನಿವಾರಣೆಯಾಗಿ ಕೂದಲು ಸಮೃದ್ಧಿಯಾಗಿ ಬೆಳೆಯುತ್ತದೆ.

ತೆಂಗಿನ ಎಣ್ಣೆಯನ್ನು ಕೂದಲಿಗೆ ಹಚ್ಚಿ ಮೃದುವಾಗಿ ಮಸಾಜ್ ಮಾಡುವುದರಿಂದ ಕೂದಲ ಬೆಳವಣಿಗೆ ಸಹಾಯವಾಗುತ್ತದೆ ಇದರ ಜೊತೆಗೆ ಉದುರುವ ಪ್ರಮಾಣವು ಕ್ರಮೇಣ ಕಡಿಮೆಯಾಗುತ್ತಾ ಬರುತ್ತದೆ. ಕೂದಲಿಗೆ ತೆಂಗಿನ ಎಣ್ಣೆ ಹಚ್ಚಿ ಮಸಾಜ್ ಮಾಡಿ ಐದರಿಂದ ಆರು ಗಂಟೆಗಳ ಕಾಲ ಹಾಗೆಯೇ ಬಿಟ್ಟು ನಂತರ ಚೆನ್ನಾಗಿ ತಲೆ ಕೂದಲನ್ನು ಶಾಂಪೂ ಬಳಸಿ ಸ್ವಚ್ಛ ಮಾಡಿಕೊಳ್ಳಿ ಮರು ದಿನ ಕೂದಲು ಮೃದು ಮತ್ತು ಹೊಳೆಯುತ್ತಿರುತ್ತದೆ. ಹೀಗೆ ವಾರದಲ್ಲಿ ಎರಡು ಅಥವಾ ಮೂರು ಬಾರಿ ಮಾಡಿದರೆ ಉತ್ತಮ.

ಕೂದಲು ಉದುರುವ ಸಮಸ್ಯೆಯಿಂದ ಪಾರಾಗಲು ಈರುಳ್ಳಿಯನ್ನು ಪೇಸ್ಟ್ ಮಾಡಿ ಎರಡು ವಾರಕ್ಕೆ ಒಮ್ಮೆ ಹಚ್ಚಿ ಮಸಾಜ್ ಮಾಡಿ ಹೀಗೆ ಮಾಡುವುದರಿಂದ ಉತ್ತಮ ರಿಸಲ್ಟ್ ಪಡೆಯಬಹುದು.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

1 min ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

17 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

29 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago