Categories: ಅಂಕಣ

ಮುಖದ ಅಂದವನ್ನು ಹೆಚ್ಚುಸುತ್ತದೆ ಮೊಟ್ಟೆಯ ಫೇಸ್ ಪ್ಯಾಕ್

ಸೌಂದರ್ಯದ ಬಗ್ಗೆ ಕಾಳಜಿ ಎಲ್ಲಾ ಮಹಿಳೆಯರಿಗೂ ಇದ್ದೇ ಇರುತ್ತದೆ. ಮುಖದಲ್ಲಿ ಸಣ್ಣ ಮೊಡವೆ ಬಿದ್ದರು ಅದನ್ನು ಸಹಿಸದವರು ಇದ್ದಾರೆ. ಸಣ್ಣ ವಯಸ್ಸಿನಲ್ಲಿ ಮುಖದ ಸೌಂದರ್ಯಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ ಆದರೆ ದಿನಕಳೆದಂತೆ ಸೌಂದರ್ಯಕ್ಕೆ ಧಕ್ಕೆಯಾಗುವಂತೆ ಮುಖದ ಮೇಲೆ ಮೊಡವೆಗಳು, ಬ್ಲಾಕ್ಹೆಡ್ ಸಮಸ್ಯೆ ಮತ್ತು ಇನ್ನಿತರ ತೊಂದರೆಗಳು ಕಂಡು ಬರಲು ಆರಂಭವಾಗಿ, ಮುಖದ ಸೌಂದರ್ಯ ಹಾಳಾಗುವುದು ಮಾತ್ರವಲ್ಲದೆ ಚರ್ಮದ ಕಾಂತಿಯು ಮಾಯವಾಗುತ್ತದೆ.

ಮುಖದಲ್ಲಿ ಸಮಸ್ಯೆಗಳು ಕಂಡು ಬಂದಾಗ ನಾವು ಸಾಮಾನ್ಯವಾಗಿ ಮಾರ್ಕೆಟ್ ಗಳಲ್ಲಿ ಸಿಗುವ ಫೇಸ್ ಕ್ರೀಮ್, ಫೇಸ್ ವಾಶ್, ಫೇಸ್ ಸ್ಕ್ರಬ್ ಗಳನ್ನು ಬಳಕೆ ಮಾಡುತ್ತೇವೆ ಇದರಿಂದ ನಿರೀಕ್ಷಿತ ರೀತಿಯಲ್ಲಿ ನಾವು ರಿಸಲ್ಟ್ ಪಡೆಯಲು ಸಾದ್ಯವಾಗುವುದಿಲ್ಲ. ಆದರ ಬದಲು ಮನೆಯಲ್ಲಿಯೇ ಕೋಳಿ ಮೊಟ್ಟೆ ಫೇಸ್ ಮಾಸ್ಕ್ ಟ್ರೈ ಮಾಡಿ. ಹೊಳಪಿನ ಚರ್ಮ ಪಡೆಯಲು ಇದು ಸಹಾಯ ಮಾಡುತ್ತದೆ. ಕೋಳಿ ಮೊಟ್ಟೆಯ ಫೇಸ್ ಮಾಸ್ಕ್ ಮಾಡಲು, ನೀವು ಮೊದಲು ಮುಖವನ್ನು ಚೆನ್ನಾಗಿ ನೀರಿನಿಂದ ತೊಳೆಯಿರಿ. ನಂತರ ಒಂದು ಕೋಳಿ ಮೊಟ್ಟೆಯನ್ನು ತೆಗೆದುಕೊಂಡು ಅದರ ಬಿಳಿಭಾಗವನ್ನು ಬೇರ್ಪಡಿಸಿಕೊಳ್ಳಿ. ಒಂದು ಹತ್ತಿಯ ಉಂಡೆಯನ್ನು ತೆಗೆದುಕೊಂಡು ಮೊಟ್ಟೆಯ ಬಿಳಿ ಭಾಗವನ್ನು ಅದರಲ್ಲಿ ಅದ್ದಿ ಮುಖದ ಮೇಲೆ ಎಲ್ಲಾ ಕಡೆ ಹರಡುವಂತೆ ಅನ್ವಯಿಸಿ.ಸುಮಾರು 10 ರಿಂದ 15 ನಿಮಿಷಗಳ ನಂತರ ಶುದ್ಧವಾದ ನೀರಿನಿಂದ ನಂತರ ಮುಖ ತೊಳೆದುಕೊಳ್ಳಿ. ಇದರಿಂದ ತ್ವಚೆ ಮೊದಲಿಗಿಂತ ಹೆಚ್ಚು ಹೊಳಪು ಪಡೆಯುತ್ತದೆ.

ಕೋಳಿ ಮೊಟ್ಟೆಯ ಬಿಳಿ ಭಾಗಕ್ಕೆ ಕಡಲೆಹಿಟ್ಟು ಮತ್ತು ಕೆಲವು ಹನಿಗಳಷ್ಟು ನಿಂಬೆಹಣ್ಣಿನ ರಸವನ್ನು ಸೇರಿಸಿ ಗಟ್ಟಿಯಾದ ಪೇಸ್ಟ್ ತಯಾರು ಮಾಡಿ ಅದನ್ನು ಮುಖದ ಮೇಲೆ ಅನ್ವಯಿಸಿ 20 ನಿಮಿಷಗಳ ಕಾಲ ಹಾಗೆ ಬಿಡಿ. ನಂತರ ಸ್ವಚ್ಛವಾಗಿ ಮುಖ ತೊಳೆದುಕೊಳ್ಳಿ. ಹೀಗೆ ಮಾಡುದರಿಂದ ಚರ್ಮ ಕಾಂತಿಯುತವಾಗುತ್ತದೆ.

ಟೊಮೆಟೋ ರಸಕ್ಕೆ ಮೊಟ್ಟೆಯ ಬಿಳಭಾಗ ಸೇರಿಸಿ ಕದಡಿ, ನಾಲ್ಕು ಹನಿ ನಿಂಬೆ ಹಣ್ಣಿನ ರಸವನ್ನು ಹಾಕಿ ಬೆರೆಸಿ. ಇದನ್ನು  ಮುಖಕ್ಕೆ ಹಚ್ಚಿ 15 ನಿಮಿಷಗಳ ಕಾಲ ಹಾಗೆ ಬಿಡಿ. ನಂತರ ತಣ್ಣಗಿನ ನೀರಿನಲ್ಲಿ ಮುಖವನ್ನು ತೊಳೆಯಿರಿ. ಇದರಿಂದ ನಿಮ್ಮ ತ್ವಚೆ ಹೊಳೆಯುವುದು ಮಾತ್ರವಲ್ಲದೆ, ಮುಖದ ಎಣ್ಣೆ ಅಂಶವನ್ನು ತೆಗೆದು ಹಾಕುತ್ತದೆ.

Gayathri SG

Recent Posts

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

2 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

26 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

44 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

1 hour ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

2 hours ago