ಸಾಮಾನ್ಯವಾಗಿ ಕೂದಲಿನ ಸೌಂದರ್ಯ ದ ಬಗ್ಗೆ ಎಲ್ಲರು ಹೆಚ್ಚು ಕಾಳಜಿ ವಹಿಸುತ್ತಾರೆ. ಏಕೆಂದರೆ ಕೂದಲು ಸೌಂದರ್ಯದ ಸಂಕೇತ. ಯುವತಿಯರಿಗೆ ಕೇಶ ದಪ್ಪವಾಗಿ ಉದ್ದವಾಗಿ ಚೆನ್ನಾಗಿ ಬೆಳೆದಿದ್ದರೆ ಸುಲಭವಾಗಿ ಬೇಕಾಗುವ ಹೇರ್ ಸ್ಟೈಲ್ ಮಾಡ್ಕೋ ಬಹುದು. ಇನ್ನೂ ಯುವಕರಿಗೂ ಕೂದಲು ದಪ್ಪವಾಗಿ ಬೆಳೆದಿದ್ದರೆ ಕೇಶ ವಿನ್ಯಾಸವನ್ನು ಚೆನ್ನಾಗಿ ಮಾಡಿಕೊಳ್ಳಬಹುದು. ಆದರೆ ಇಂದು ಯುವ ಪೀಳಿಗೆಗೆ ಕೂದಲಿನ ಸಮಸ್ಯೆ ಅಗಾಧವಾಗಿ ಕಾಡುತ್ತಿದೆ. ಕೂದಲು ಉದುರುವುದು, ಕೂದಲ ತುದಿ ಎರಡು ಭಾಗವಾಗುವುದು, ಕೂದಲು ಬಿಳಿ ಬಣ್ಣಕ್ಕೆ ಬದಲಾಗುವುದು ಹೀಗೆ ಹಲವಾರು ಸಮಸ್ಯೆಯನ್ನು ಇಂದಿನ ಯುವ ಪೀಳಿಗೆ ಅನುಭವಿಸುತ್ತಿದೆ. ಇಂತಹ ಸಮಸ್ಯೆಯಿಂದ ದೂರಾಗಿ ಕೂದಲು ಉತ್ತಮ ಹೊಳಪು ಮತ್ತು ಪೋಷಣೆ ಪಡೆದು ಸೊಂಪಾಗಿ ಮತ್ತು ಆರೋಗ್ಯಕರವಾಗಿ ಬೆಳೆಯುವಂತೆ ಮಾಡಲು ಇಲ್ಲಿದೆ ಕೆಲವು ಸಲಹೆಗಳು.
ನುಗ್ಗೆ ಸೊಪ್ಪಿನ ಬಗ್ಗೆ ಎಲ್ಲರಿಗೂ ಗೊತ್ತಿರುತ್ತದೆ. ಇದು ಆರೋಗ್ಯದ ದೃಷ್ಟಿಯಿಂದ ನೋಡಿದಾಗಲೂ ಸಹಕಾರಿ, ಜೊತೆಗೆ ಮುಖದ ಸೌಂದರ್ಯ ವೃದ್ಧಿ ಮಾಡಿಕೊಳ್ಳಬಹುದು, ಕೊದಲಿನ ಅಂದ ಹೆಚ್ಚಿಸಿಕೊಳ್ಳಲು ಇದು ಉಪಕಾರಿ ಆಗಿದೆ. ಇಂದು ಈ ನುಗ್ಗೆ ಸೊಪ್ಪಿನಿಂದ ಕೂದಲಿನ ಸೌಂದರ್ಯ ಹೇಗೆ ಹೆಚ್ಚಿಸಿಕೊಳ್ಳಬಹುದು ಎಂದು ನೋಡೋಣ, ನುಗ್ಗೆ ಸೊಪ್ಪನ್ನು ತೆಂಗಿನ ಎಣ್ಣೆ, ಕ್ಯಾಸ್ಟರ್ ಆಯಿಲ್ ನೊಂದಿಗೆ ಬೆರೆಸಿ ಇದನ್ನು ಕೂದಲಿಗೆ ಹಚ್ಚಿದರೆ ಉತ್ತಮ ರಿಸಲ್ಟ್ ಪಡೆಯಬಹುದು.
ನುಗ್ಗೆ ಸೊಪ್ಪಿನ ಹೇರ್ ಪ್ಯಾಕ್ ಮಾಡಲು ಮೊದಲಿಗೆ ನುಗ್ಗೆ ಸೊಪ್ಪಿನ ಪುಡಿಯನ್ನು ಮೊಸರು, ರೋಸ್ ವಾಟರ್( ಗುಲಾಬಿ ನೀರು) ಮತ್ತು ಅಕ್ಕಿ ನೀರಿನೊಂದಿಗೆ ಮಿಶ್ರಣ ಮಾಡಿ ಹಚ್ಚಿಕೊಳ್ಳಿ ನಂತರ ಸ್ವಲ್ಪ ಸಮಯ ಹಾಗೆ ಬಿಟ್ಟು ನಂತರ ಚೆನ್ನಾಗಿ ತೊಳೆದುಕೊಳ್ಳಿ.
ನುಗ್ಗೆ ಸೊಪ್ಪಿನ ಎಲೆಯನ್ನು ನೀರಿನಲ್ಲಿ ಕುದಿಸಿ ಅದು ಬಿಸಿ ಆರಿದ ನಂತರ ಟೋನರ್ ಆಗಿ ಬಳಕೆಮಾಡಬಹುದು.
ಇನ್ನೂ ಕೊದಲು ಉದುರುವ ಸಮಸ್ಯೆ ಇರುವವರು ರಾತ್ರಿ ಮಲಗುವ ಮುನ್ನ ನುಗ್ಗೆ ಎಲೆಗಳನ್ನು ತಿನ್ನಿ ಕೂದಲು ಉದುರುವ ಸಮಸ್ಯೆ ನಿವಾರಣೆ ಆಗುತ್ತದೆ.
ನುಗ್ಗೆ ಸೊಪ್ಪಿನ ಎಲೆಗಳನ್ನು ಚೆನ್ನಾಗಿ ಜಜ್ಜಿ ಪೇಸ್ಟ್ ಮಾಡಿಕೊಳ್ಳಿ ನಂತರ ಇದಕ್ಕೆ ತೆಂಗಿನ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿ ಮಸಾಜ್ ಮಾಡಿ ಸ್ವಲ್ಪ ಸಮಯ ಹಾಗೆ ಬಿಟ್ಟು ನಂತರ ಚೆನ್ನಾಗಿ ತೊಳೆದುಕೊಳ್ಳಿ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ