Categories: ಅಂಕಣ

ಮುಖದ ಮೇಲಿನ ಮೊಡವೆ ನಿವಾರಣೆಗೆ ಇಲ್ಲಿದೆ ಮನೆಮದ್ದು

ಮುಖದ ಅಂದವನ್ನು ಹಾಳುಮಾಡುವುದೇ ಮೊಡವೆಗಳು, ಮೊಡವೆ ಕಲೆಗಳು, ಬ್ಲಾಕ್ಹೆಡ್ಸ್, ಕಪ್ಪುಕಲೆಗಳು. ಆದ್ದರಿಂದ ಇಂದು ಮೊಡವೆ ಸಮಸ್ಯೆಯಿಂದ ಹೇಗೆ ನಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಎಂದು ತಿಳಿಯೋಣ. ಬೆಳ್ಳುಳ್ಳಿ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ. ಅಡುಗು ಮನೆಯಲ್ಲಿ ಇರುವ ಈ ವಸ್ತು ನಮ್ಮ ಸೌಂದರ್ಯ ಹೇಗೆ ಹೆಚ್ಚಿಸುತ್ತದೆ ಎಂದು ಯೋಚಿಸುತ್ತಿದ್ದೀರ? ಹಾಗಾದ್ರೆ ಇಲ್ಲಿದೆ ನೋಡಿ ಈ ಬಗ್ಗೆ ಸಂಪೂರ್ಣ ಮಾಹಿತಿ. ಬೆಳ್ಳುಳ್ಳಿ ಪೇಸ್ಟ್ ಮಾಡಿ, ಇದನ್ನು ಮಾಡಲು ಮೊದಲಿಗೆ ಬೆಳ್ಳುಳ್ಳಿ ತೆಗೆದುಕೊಂಡು ಸಿಪ್ಪೆ ತೆಗೆದು ಅದನ್ನ ಗ್ರೈನ್ ಮಾಡಿ ಅಥವಾ ಜಜ್ಜಿ ಪೇಸ್ಟ್ ತಯಾರಿಸಿ. ಈ ಪೇಸ್ಟ್ ಅನ್ನು ಫ್ರಿಜ್ ನಲ್ಲಿಡಿ ನಂತರ ಮೊಡವೆ ಲಕ್ಷಣಗಳು ಕಾಣಿಸಿಕೊಂಡಾಗ ಈ ಪೇಸ್ಟ್ ಹಚ್ಚಿ ನಂತರ 10 ನಿಮಿಷಗಳ ನಂತರ ನೀರಿನಿಂದ ತೊಳೆಯಿರಿ.

ಬೆಳ್ಳುಳ್ಳಿಯನ್ನು ಪೇಸ್ಟ್ ತಯಾರಿಸಿ ಅದಕ್ಕೆ ಅರಿಶಿನ, ಜೇನುತುಪ್ಪವನ್ನು ಸೇರಿಸಿ ಮಿಶ್ರಣ ಮಾಡಿ. ಈ ಪೇಸ್ಟ್ ಅನ್ನು ಮೊಡವೆ ಮೇಲೆ ಮಾತ್ರ ಹಚ್ಚಿ 15 ನಿಮಿಷಗಳ ಕಾಲ ಬಿಡಿ. ಅದರ ನಂತರ ಚರ್ಮವನ್ನು ನೀರಿನಿಂದ ಸ್ವಚ್ಛಗೊಳಿಸಿ. ಹೀಗೆ ಕ್ರಮೇಣ ಮಾಡುವುದರಿಂದ ಉತ್ತಮ ರಿಸಲ್ಟ್ ಪಡೆಯಬಹುದು.

ಇನ್ನು ಮುಖದಲ್ಲಿ ಕಪ್ಪು ಕಲೆಗಳಿದ್ದರೆ ಆ ಭಾಗಕ್ಕೆ ಬೆಳ್ಳುಳ್ಳಿ ಹಚ್ಚಿದರೆ ಕಲೆಗಳನ್ನು ತೆಗೆದು ಹಾಕುತ್ತದೆ.

ಬೆಳ್ಳುಳ್ಳಿಯ ಸಿಪ್ಪೆ ತೆಗೆದು ಅದನ್ನು ಚೆನ್ನಾಗಿ ಗ್ರೈನ್ ಮಾಡಿ ಅಥವಾ ಜಜ್ಜಿ ಪೇಸ್ಟ್ ತಯಾರಿಸಿಕೊಳ್ಳಿ ನಂತರ ಈ ಪೇಸ್ಟ್ ಗೆ ಮೊಸರು ಮತ್ತು ಜೇನುತುಪ್ಪ (ಅಂದಾಜು ಪ್ರಮಾಣದಲ್ಲಿ) ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ ನಂತರ ಮೊಡವೆ ಮೇಲೆ ಹಚ್ಚಿ ಉತ್ತಮ ರಿಸಲ್ಟ್ ಪಡೆಯಬಹುದು.

ಟೊಮೆಟೊ ರಸ, ಬೆಳ್ಳುಳ್ಳಿ ಪೇಸ್ಟ್, ಬಾದಾಮಿ ಎಣ್ಣೆ ಇವು ಮೂರನ್ನು ಚೆನ್ನಾಗಿ ಮಿಶ್ರಣ ಮಾಡಿ ಕೊಂಡು ಮುಖಕ್ಕೆ ಹಚ್ಚಿ ಕೊಳ್ಳಿ ಸ್ವಲ್ಪ ಸಮಯ ಹಾಗೆ ಬಿಟ್ಟು ನಂತರ ತನ್ನೀರಿನಂದ ತೊಳೆದುಕೊಳ್ಳಿ, ಹೀಗೆ ಮಾಡುವುದರಿಂದ ಮುಖದ ಮೇಲಿನ ಸಣ್ಣ ಸಣ್ಣ ರಂಧ್ರಗಳು ಮುಚ್ಚಿಕೊಳ್ಳುತ್ತದೆ.

Gayathri SG

Recent Posts

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

22 mins ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

55 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

1 hour ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

2 hours ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

2 hours ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

2 hours ago