ವಿಶೇಷ

ಬೇಲೂರು: ಗ್ರಾಮೀಣರ ಸಬಲೀಕರಣಕ್ಕೆ ಪುಷ್ಪಗಿರಿ ಶ್ರೀಗಳ ಮುನ್ನುಡಿ

ಬೇಲೂರು: ಕೃಷಿಯಿಂದ ರೈತರೇ ದೂರ ಸರಿಯುತ್ತಿರುವ ಈ ಸಂದರ್ಭದಲ್ಲಿ ಇಲ್ಲಿನ ಸ್ವಾಮೀಜಿಗಳ ಕೃಷಿ ಪ್ರೀತಿ ಕಂಡರೆ ನಿಜಕ್ಕೂ ಅಚ್ಚರಿಯೊಂದಿಗೆ ಸಂತಸವೂ ಆಗುತ್ತದೆ. ಮಠದ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕೆಲಸದ ನಡುವೆ ತಾವೇ ಜಮೀನಿಗೆ ಇಳಿದು ಕೃಷಿ ಕಾಯಕದಲ್ಲಿ ಸಂಪೂರ್ಣ ತೊಡಗಿಕೊಳ್ಳುತ್ತಿರುವ ಶ್ರೀಗಳ ಸಾಹಸಗಾಥೆ ಇಂದಿನ ಯುವ ಸಮುದಾಯಕ್ಕೆ ಮಾದರಿಯಾಗಿದೆ.

ಹೌದು! ಕಾಯಕದಿಂದ ಬಂದಿದ್ದು ಕಾರೇ ಸೊಪ್ಪಾದರೂ ಲಿಂಗಕ್ಕೆ ಅರ್ಪಿತ ಎಂಬ ವಚನದಂತೆ ಕಾಯಕ-ದಾಸೋಹದ ಬಗ್ಗೆ ಅಗಮ್ಯ ನಂಬಿಕೆ ಹೊಂದಿದ ಪುಷ್ಪಗಿರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮೀಜಿಗಳು ಮಠಕ್ಕೆ ಸಂಬಂಧ ಪಟ್ಟ ೫೦ ಕ್ಕೂ ಅಧಿಕ ಎಕರೆ ಜಮೀನಿನಲ್ಲಿ ಕೃಷಿ ಕಾಯಕದ ಜೊತೆ ಸಾವಯವ ಕೃಷಿ, ಎರೆಹುಳು ಕೃಷಿ ಸೇರಿದಂತೆ ನಾನಾ ಬಗೆಯಲ್ಲಿ ಅವಿರತ ಕೆಲಸಗಳಿಗೆ ಆದ್ಯತೆ ನೀಡುತ್ತಾ ತಮ್ಮ ಉಳಿದ ವೇಳೆಯನ್ನು ಸಂಪೂರ್ಣವಾಗಿ ಜಮೀನಿನಲ್ಲಿ ಕಳೆದ ಕಾರಣದಿಂದ ೧೦ ಸಾವಿರಕ್ಕೂ ಅಧಿಕ ಅಡಿಕೆ ಗಿಡಗಳು ಸಾವಯವ ಕೃಷಿಯಿಂದ ಸಮೃದ್ಧಿಯಾಗಿ ಬೆಳೆದ ಫಸಲಿನ ಹಂತಕ್ಕೆ ಬಂದಿದೆ.

ಇನ್ನು ಉಳಿದ ಭೂಮಿಯಲ್ಲಿ ತೆಂಗು ಸೇರಿದಂತೆ ವಿವಿಧ ಹಣ್ಣಿನ ಜಾತಿಯ ಗಿಡಗಳು, ಪಕ್ಷಿಗಳಿಗೆ ಅನುಕೂಲವಾದ ಹಣ್ಣಿನ ಗಿಡಗಳನ್ನು ಹಾಕಿದ್ದಾರೆ. ಇದರ ಜೋತೆಗೆ ರೈತರ ಪರವಾಗಿ ನೀರಾವರಿ ಹೋರಾಟ, ಪರಿಸರ ಕಾಳಜಿ, ವಿಶೇಷವಾಗಿ ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸ್ಥಾಪಿಸಿ ರಾಷ್ಟ್ರ ಮಟ್ಟದಲ್ಲಿ ತಮ್ಮದೆಯಾದ ಖ್ಯಾತಿಯನ್ನು ಪಡೆದಿದ್ದಾರೆ.

ರಾಸಾಯನಿಕ ಗೊಬ್ಬರಗಳ ಹೆಚ್ಚುತ್ತಿರುವ ಬೆಲೆ, ಪರಿಸರ ಕಾಳಜಿ ಮತ್ತು ಇಂಧನದ ಬಿಕ್ಕಟ್ಟು ಹೆಚ್ಚುತ್ತಿರುವುದರಿಂದ ಸಸ್ಯಗಳಿಗೆ ಅಗ್ಗದ ಮೂಲದಲ್ಲಿ ಪೋಷಕಾಂಶಗಳನ್ನು ನೀಡಬೇಕು ಎಂಬ ನಿಟ್ಟಿನಲ್ಲಿ ಪುಷ್ಪಗಿರಿ ಶ್ರೀಗಳು ಎರೆಹುಳು ಗೊಬ್ಬರದ ತಯಾರಿಕೆಗೆ ಮುಂದಾಗಿದ್ದಾರೆ. ದೇಶಿಯ ಎರೆಹುಳು ಸಾಕಾಣಿಕೆಯಲ್ಲಿ ಅಂತಹ ಪರಿಣಾಮ ಕಾಣದ ಶ್ರೀಗಳು ಗುಜರಾತ್ ಮಾದರಿಯ ಎರೆಹುಳುಗಳ ಸಾಕಾಣಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಪ್ರಸ್ತುತ ಗುಜರಾತ್ ಮಾದರಿ ಎರೆಹುಳು ಗೊಬ್ಬರ ನಮ್ಮ ಜಮೀನಿಗೆ ಬಳೆಸಿ ಮಾರಾಟ ಮಾಡಬಹುದು ಈ ಬಗ್ಗೆ ಕೃಷಿಕರು ಅಲೋಚನೆ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ಒಟ್ಟಾರೆ ತಮ್ಮ ಧಾರ್ಮಿಕ ಪರಂಪರೆಯನ್ನು ಉಳಿಸಿಕೊಂಡು ಭಕ್ತರಿಗೆ ಕಾಯಕ ಪ್ರಜ್ಞೆಯನ್ನು ಮೂಡಿಸುತ್ತಿರುವ ಪುಷ್ಪಗಿರಿ ಜಗದ್ಗುರುಗಳು ಸಾಹಸಗಾಥೆಯನ್ನು ಆಸಕ್ತ ರೈತರು ಕಣ್ಣಾರೆ ವೀಕ್ಷಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

Ashika S

Recent Posts

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

16 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

27 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

1 hour ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

2 hours ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

2 hours ago