News Karnataka Kannada
Tuesday, April 30 2024
ವಿಶೇಷ

ಯುಗಾದಿಯಂದು ಏರಿಸುವ ಧ್ವಜವೇ ‘ಬ್ರಹ್ಮಧ್ವಜ’

ಬ್ರಹ್ಮದೇವನು ಯುಗಾದಿ ಪಾಡ್ಯದಂದು ಸೃಷ್ಟಿಯನ್ನು ನಿರ್ಮಿಸಿದ್ದರಿಂದ ಧರ್ಮಶಾಸ್ತ್ರದಲ್ಲಿ ಧ್ವಜಕ್ಕೆ ‘ಬ್ರಹ್ಮ ಧ್ವಜ’ ಎನ್ನುತ್ತಾರೆ. ಇದಕ್ಕೆ ಕೆಲವು ಜನರು ‘ಇಂದ್ರಧ್ವಜ’ ಎಂದೂ ಹೇಳುತ್ತಾರೆ.
Photo Credit : NewsKarnataka

ಬ್ರಹ್ಮದೇವನು ಯುಗಾದಿ ಪಾಡ್ಯದಂದು ಸೃಷ್ಟಿಯನ್ನು ನಿರ್ಮಿಸಿದ್ದರಿಂದ ಧರ್ಮಶಾಸ್ತ್ರದಲ್ಲಿ ಧ್ವಜಕ್ಕೆ ‘ಬ್ರಹ್ಮ ಧ್ವಜ’ ಎನ್ನುತ್ತಾರೆ. ಇದಕ್ಕೆ ಕೆಲವು ಜನರು ‘ಇಂದ್ರಧ್ವಜ’ ಎಂದೂ ಹೇಳುತ್ತಾರೆ. ಈ ಧ್ವಜವು ವಿಜಯದ ಮತ್ತು ಆನಂದದ ಪ್ರತೀಕವಾಗಿದೆ, ಆದುದರಿಂದ ಮನೆಮನೆಗಳಲ್ಲಿ ಬ್ರಹ್ಮಧ್ವಜವನ್ನು ನಿಲ್ಲಿಸುತ್ತಾರೆ. ವಿಜಯದ ಪ್ರತೀಕವು ಎತ್ತರವಾಗಿರುತ್ತದೆ, ಆದುದರಿಂದ ಬ್ರಹ್ಮಧ್ವಜವನ್ನು ಎತ್ತರವಾಗಿ ನಿಲ್ಲಿಸುತ್ತಾರೆ.

ಪದ್ಧತಿ: ಸೂರ್ಯೋದಯದ ನಂತರ ಬ್ರಹ್ಮಧ್ವಜವನ್ನು ಕೂಡಲೇ ನಿಲ್ಲಿಸಬೇಕಾಗಿರುತ್ತದೆ. ಅಪವಾದಾತ್ಮಕ ಸ್ಥಿತಿಯಲ್ಲಿ ಪಂಚಾಂಗವನ್ನು ನೋಡಿ ಬ್ರಹ್ಮಧ್ವಜವನ್ನು ನಿಲ್ಲಿಸಬೇಕು. ಎತ್ತರವಾಗಿರುವ ಬಿದಿರಿನ ತುದಿಗೆ ಹಳದಿ ಬಣ್ಣದ ಜರತಾರಿಯ ಬಟ್ಟೆಯನ್ನು ಕಟ್ಟುತ್ತಾರೆ. ಅದರ ಮೇಲೆ ಸಕ್ಕರೆಯ ಗಂಟು, ಬೇವಿನ ಚಿಗುರೆಲೆ, ಮಾವಿನ ಟೊಂಗೆ ಮತ್ತು ಕೆಂಪು ಹೂವುಗಳ ಹಾರವನ್ನು ಕಟ್ಟಿ ಮೇಲೆ ಬೆಳ್ಳಿಯ ಅಥವಾ ತಾಮ್ರದ ಕಲಶದಿಂದ ಶೃಂಗರಿಸಿ ಧ್ವಜವನ್ನು ನಿಲ್ಲಿಸುತ್ತಾರೆ.

ಧ್ವಜವನ್ನು ಮುಖ್ಯದ್ವಾರದ ಎದುರಿಗೆ, ಹೊಸ್ತಿಲಿನ ಹತ್ತಿರ, ಬಲಭಾಗದಲ್ಲಿ (ಮನೆಯ ಒಳಗಿನಿಂದ ನೋಡುವಾಗ) ಭೂಮಿಯ ಮೇಲೆ ನಿಲ್ಲಿಸಬೇಕು. ಧ್ವಜವನ್ನು ಅತೀ ನೇರವಾಗಿ ನಿಲ್ಲಿಸದೇ ಮುಂದಿನ ಬದಿಗೆ ಸ್ವಲ್ಪ ಬಾಗಿದ ಸ್ಥಿತಿಯಲ್ಲಿ ನಿಲ್ಲಿಸಬೇಕು. ಅದರ ಮುಂದೆ ಸುಂದರವಾದ ರಂಗೋಲಿಯನ್ನು ಬಿಡಿಸಬೇಕು. ಧ್ವಜಕ್ಕೆ ‘ಬ್ರಹ್ಮಧ್ವಜಾಯ ನಮಃ|’ ಎಂದು ಹೇಳಿ ಸಂಕಲ್ಪಪೂರ್ವಕ ಪೂಜೆಯನ್ನು ಮಾಡಬೇಕು. ಸೂರ್ಯಾಸ್ತದ ಸಮಯದಲ್ಲಿ ಬೆಲ್ಲದ ನೈವೇದ್ಯವನ್ನು ತೋರಿಸಿ ಧ್ವಜವನ್ನು ಕೆಳಗಿಳಿಸಬೇಕು.

ಯುಗಾದಿಯ ದಿನ ಬ್ರಹ್ಮಾಂಡದಲ್ಲಿನ ಪ್ರಜಾಪತಿ ದೇವತೆಯ ಲಹರಿಗಳು ಪೃಥ್ವಿಯ ಮೇಲೆ ಎಲ್ಲಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಬರುತ್ತವೆ. ಬ್ರಹ್ಮಧ್ವಜದಿಂದಾಗಿ ವಾತಾವರಣದಲ್ಲಿನ ಪ್ರಜಾಪತಿ-ಲಹರಿಗಳು ಕಲಶದ ಸಹಾಯದಿಂದ ಮನೆಯೊಳಗೆ ಪ್ರವೇಶಿಸುತ್ತವೆ. (ಇದು ದೂರದರ್ಶನದ ಆಂಟೆನಾದಂತೆ ಕಾರ್ಯವನ್ನು ಮಾಡುತ್ತದೆ.) ಮರುದಿನದಿಂದ ಈ ಕಲಶವನ್ನು ನೀರು ಕುಡಿಯಲು ಉಪಯೋಗಿಸಬೇಕು. ಪ್ರಜಾಪತಿ-ಲಹರಿಗಳ ಸಂಸ್ಕಾರವಾಗಿರುವ ಕಲಶವು ಅದೇ ರೀತಿಯ ಸಂಸ್ಕಾರಗಳನ್ನು ಕುಡಿಯುವ ನೀರಿನ ಮೇಲೆ ಮಾಡುತ್ತದೆ, ಇದರಿಂದ ನಮಗೆ ವರ್ಷವಿಡೀ ಪ್ರಜಾಪತಿ-ಲಹರಿಗಳು ಪ್ರಾಪ್ತವಾಗುತ್ತವೆ.

ಧ್ವಜವನ್ನು ಕೆಳಗೆ ಇಳಿಸುವಾಗ ಮಾಡಬೇಕಾದ ಪ್ರಾರ್ಥನೆ : ‘ಹೇ ಬ್ರಹ್ಮದೇವ, ಹೇ ವಿಷ್ಣು, ಇಂದು ದಿನವಿಡೀ ಈ ಧ್ವಜದಲ್ಲಿ ಸಂಗ್ರಹವಾದ ಶಕ್ತಿಯು ನನಗೆ ಸಿಗಲಿ. ಆ ಶಕ್ತಿಯು ರಾಷ್ಟ್ರ ಮತ್ತು ಧರ್ಮಕಾರ್ಯಕ್ಕೆ ಉಪಯೋಗವಾಗಲಿ’ ಇದೇ ನಿಮ್ಮ ಚರಣಗಳಲ್ಲಿ ಪ್ರಾರ್ಥನೆ.

ಯುಗಾದಿಯ ದಿನ ಸೇವಿಸುವ ಬೇವಿನ ಮಿಶ್ರಣದ ಮಹತ್ವ : ಬೇವಿನಲ್ಲಿ ಪ್ರಜಾಪತಿ-ಲಹರಿಗಳನ್ನು ಗ್ರಹಿಸುವ ಕ್ಷಮತೆಯು ಇತರ ಯಾವುದೇ ಪದಾರ್ಥಕ್ಕಿಂತಲೂ ಹೆಚ್ಚಿರುವುದರಿಂದ ಯುಗಾದಿಯ ದಿನ ಬೇವಿನ ಮಿಶ್ರಣವನ್ನು ಸೇವಿಸುತ್ತಾರೆ. ಇದರಲ್ಲಿ ಶಕ್ತಿ, ಚೈತನ್ಯ ಮತ್ತು ಆನಂದದ ಲಹರಿಗಳನ್ನು ಒಟ್ಟಿಗೆ ಆಕರ್ಷಿಸಲ್ಪಡುತ್ತವೆ.

ಬೇವಿನ ಹೂವು, ಬೇವಿನ ಚಿಗುರೆಲೆ, ಕರಿಮೆಣಸು, ಸಕ್ಕರೆ, ಓಮ ಮತ್ತು ಸ್ವಲ್ಪ ಹಿಂಗು ಇವೆಲ್ಲವನ್ನು ಬೆರೆಸಿ ಮಿಶ್ರಣವನ್ನು ತಯಾರಿಸಿ ಹುಣಸೆಹಣ್ಣಿನೊಂದಿಗೆ ಸೇರಿಸಿ ಎಲ್ಲರಿಗೂ ಕೊಡಬೇಕು. ಇದನ್ನು ಸೇವಿಸುವವರಿಗೆ ರೋಗಶಾಂತಿ ಹಾಗೂ ವ್ಯಾಧಿಗಳು ನಾಶವಾಗಿ ಸುಖ-ಸಂಪತ್ತಿ, ವಿದ್ಯೆ, ಆಯುಷ್ಯ ಲಭಿಸಲಿ ಎಂದು ಈ ಮಿಶ್ರಣವನ್ನು ಸೇವಿಸಲು ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು