ಕ್ರೈಸ್ತ ಸಮುದಾಯದವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಗುಡ್ ಫ್ರೈಡೇ ಕೂಡ ಒಂದು. ಇದು ಕ್ರೈಸ್ತ ಸಮುದಾಯದವರಿಗೆ ಮಹತ್ತರ ದಿನವಾಗಿದೆ. ಕ್ರೈಸ್ತ ಸಮುದಾಯದವರು ಗುಡ್ ಫ್ರೈಡೇಯನ್ನು ಆಚರಿಸುವ ಮುನ್ನ ಪಾಮ್ ಸಂಡೇ ಎನ್ನುವ ಹಬ್ಬವನ್ನು ಆಚರಿಸುತ್ತಾರೆ.
ಈ ಪಾಮ್ ಸಂಡೆಯನ್ನು 2024 ರಲ್ಲಿ ಮಾರ್ಚ್ 24 ರಂದು ಆಚರಿಸಲಾಗಿದ್ದು, ಈ ದಿನ ಯೇಸು ಕ್ರಿಸ್ತನು ಜೆರುಸೆಲೆಮ್ನ್ನು ಪ್ರವೇಶಿಸಿದರು ಎನ್ನಲಾಗುತ್ತದೆ. ಗುಡ್ ಫ್ರೈಡೇ ನಂತರ 2024 ರ ಮಾರ್ಚ್ 31 ರಂದು ಭಾನುವಾರ ಈಸ್ಟರ್ನ್ನು ಆಚರಿಸಲಾಗುವುದು. ಹಾಗೇ 2024ರ ಗುಡ್ ಫ್ರೈಡೇಯನ್ನು ಮಾರ್ಚ್ 29 ರಂದು ಶುಕ್ರವಾರ ಆಚರಿಸಲಾಗುವುದು.
ಏಸುಕ್ರಿಸ್ತನನ್ನು ರೋಮನ್ ಅಧಿಕಾರಿಗಳು ಬಂಧಿಸಿ ಥಳಿಸುತ್ತಾರೆ. ನಂತರ ಕ್ಯಾಲ್ವರಿ ಪರ್ವತಗಳಲ್ಲಿ ಅವರನ್ನು ಶಿಲುಬೆಗೇರಿಸಲಾಗುತ್ತದೆ. ಈ ದಿನವನ್ನು ಗುಡ್ ಫ್ರೈಡೇ ಎಂದು ಕರೆಯುತ್ತಾರೆ ಎಂಬುದಕ್ಕೆ ಹಲವು ಸಿದ್ಧಾಂತಗಳಿವೆ.
ಇನ್ನು ಯರೂಶಲಂ ಅಥವಾ ಜೆರುಸಲೇಂನಲ್ಲಿ ಯೇಸು ಕ್ರಿಸ್ತನ ವಿರುದ್ಧ ಸಂಚು ರೂಪಿಸಿ ಮೋಸದಿಂದ ಶುಕ್ರವಾರದ ದಿನದಂದು ಶಿಲುಬೆಗೇರಿಸಲಾಯಿತು. ಈ ಶಿಲುಬೆಗೇರಿಸಿದ ಘಟನೆಯನ್ನು ಗುಡ್ ಫ್ರೈಡೇ ಎಂದು ಕರೆಯಲಾಗುತ್ತದೆ. ಈ ಘಟನೆಯನ್ನು ಕ್ರಿಶ್ಚಿಯನ್ ಧರ್ಮದ ಪ್ರಮುಖ ಧಾರ್ಮಿಕ ಗ್ರಂಥವಾದ ಬೈಬಲ್ನಲ್ಲಿ ವಿವರಿಸಲಾಗಿದೆ. ಗುಡ್ ಫ್ರೈಡೇಯು ಯೇಸುವಿನ ಮರಣದ ದಿನವಾಗಿದೆ. ಜಗತ್ತಿಗೆ ಪ್ರೀತಿ ಮತ್ತು ಸಹಾನುಭೂತಿಯ ಸಂದೇಶವನ್ನು ನೀಡಿದ ಜೀಸಸ್.
ನಂಬಿಕೆಯ ಪ್ರಕಾರ, ಅವರು ಪ್ರವಾದಿತ್ವವನ್ನು ಹೊಂದಿದ್ದರು, ಇದರಿಂದಾಗಿ ಯಹೂದಿಗಳಲ್ಲಿ ಯೇಸುವಿನ ಬಗ್ಗೆ ದ್ವೇಷ ಹುಟ್ಟಿಕೊಂಡಿತು. ಪ್ರವಾದಿತ್ವ ಎಂದರೆ ಒಬ್ಬರ ಪ್ರವಾದಿತ್ವದ ಬಗ್ಗೆ ಮಾತನಾಡುವುದು. ಯಹೂದಿಗಳ ಮೂಲಭೂತವಾದಿಗಳು ಯೇಸುಕ್ರಿಸ್ತನು ತನ್ನನ್ನು ದೇವರ ಮಗ ಎಂದು ಕರೆದುಕೊಳ್ಳುವುದನ್ನು ಅವರು ಇಷ್ಟಪಡಲಿಲ್ಲ.
ಅವರು ರೋಮನ್ನರಿಗೆ ಈ ಬಗ್ಗೆ ದೂರು ನೀಡಿದರು ಮತ್ತು ಶಿಲುಬೆಗೇರಿಸಿಬೇಕೆಂದು ಬೇಡಿಕೆಯನ್ನಿಟ್ಟರು. ಇನ್ನೊಂದು ನಂಬಿಕೆಯ ಪ್ರಕಾರ, ಚರ್ಚ್ನಲ್ಲಿ ರೋಮನ್ ತೆರಿಗೆದಾರರು ಅಸಭ್ಯ ವರ್ತನೆ ಮಾಡುತ್ತಿರುವುದನ್ನು ನೋಡಿರುತ್ತಾನೆ. ಇದರಿಂದ ದುಃಖಿತನಾದ ಯೇಸು ಅವರನ್ನು ಅಲ್ಲಿಂದ ಹೊಡೆದೋಡಿಸುತ್ತಾನೆ. ಪರಿಣಾಮವಾಗಿ, ರೋಮನ್ ಗವರ್ನರ್ ಯೇಸುವನ್ನು ಶಿಲುಬೆಗೇರಿಸುವ ಶಿಕ್ಷೆಯನ್ನು ವಿಧಿಸುತ್ತಾನೆ.
ಯೇಸುಕ್ರಿಸ್ತನನ್ನು ಶಿಲುಬೆಗೇರಿಸಿದ ಸ್ಥಳವನ್ನು ಗೊಲ್ಗೊಥಾ ಎಂದು ಕರೆಯಲಾಗುತ್ತದೆ. ಈ ಸ್ಥಳವು ಇಸ್ರೇಲ್ ರಾಜಧಾನಿ ಜೆರುಸಲೆಮ್ನ ಕ್ರಿಶ್ಚಿಯನ್ ಪ್ರದೇಶದಲ್ಲಿದೆ. ಈ ಸ್ಥಳವನ್ನೇ ಹಿಲ್ ಆಫ್ ದಿ ಕ್ಯಾಲ್ವರಿ ಎಂದು ಕರೆಯಲಾಗುತ್ತದೆ. ಈ ಸ್ಥಳದಲ್ಲಿ ಫ್ಲ್ಯಾಗೆಲೇಷನ್ ಚರ್ಚ್ ಇದೆ.
ಇನ್ನು ಗುಡ್ ಫ್ರೈಡೇಯ ಮಹತ್ವ ಏನೆಂದರೆ, ದೇವರು ಅಂದರೆ ಏಸುಕ್ರಿಸ್ತ ಜಗತ್ತನ್ನು ಅತಿಯಾಗಿ ಪ್ರೀತಿಸುತ್ತಾನೆ ಎಂದು ನಂಬಲಾಗಿದೆ. ಅವನು ತನ್ನನ್ನು ನಂಬಿದ ಜನರ ಪಾಪ ವಿಮೋಚನೆಗಾಗಿ ಪ್ರಾಣವನ್ನು ತ್ಯಾಗ ಮಾಡಿದನು. ಆ ಕಾರಣಕ್ಕೆ ಈ ದಿನವನ್ನು ಶೋಕ ಮತ್ತು ದುಃಖದ ದಿನವನ್ನಾಗಿ ಆಚರಿಸಲಾಗುತ್ತದೆ. ಗುಡ್ಫ್ರೈಡೇ ಏಸುವು ತನ್ನನ್ನು ನಂಬಿದವರ ಪಾಪ ವಿಮೋಚನೆಗೊಳಿಸಲು ತನ್ನ ಜೀವನವನ್ನು ತ್ಯಾಗ ಮಾಡಿದ ಪವಿತ್ರ ದಿನವೂ ಹೌದು.
ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಜಿ ಸಿಎಂ ಹೆಚ್ಡಿಕೆ ತಿರುಗೇಟು ನೀಡಿದ್ದಾರೆ.
ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ಕಾರೊಂದು ನುಗ್ಗಿ ಉಲ್ಟಾ ಬಿದ್ದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕನಲ್ಲಿ ತಡರಾತ್ರಿ ನಡೆದಿದೆ.
ಮುಟ್ಟಿನ ಸಮಯದಲ್ಲಿ ನೋವು ತಾಳಲಾರದೆ ಅನಿವಾರ್ಯಕ್ಕೆ ಪೈನ್ ಕಿಲ್ಲರ್ ಸೇವಿಸುವುದು ಈಗ ಸಾಮನ್ಯವಾಗಿಬಿಟ್ಟಿದೆ. ಕೆಲವರಿಗೆ ಇದರ ಪರಿಣಾಮವು ಅರಿವಾಗಿದೆ. ಆದರೂ…
ಅನಾರೋಗ್ಯದಿಂದ ನೆಪವೊಡ್ಡಿ ಹಿರಿಯ ಪೈಲೆಟ್ಗಳು ಸಾಮೂಹಿಕವಾಗಿ ರಜೆಯಲ್ಲಿ ತೆರಳಿರುವ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್ ಇಂಡಿಯಾ ಎಕ್ಸ್ ಪ್ರೆಸ್…
ಪ್ರಿಯತಮೇ ಎದುರೆ ಓರ್ವ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದ ಪಾಪಿ ಪ್ರಿಯತಮ. ಈ ಘಟನೆ ಗೌರಿಬಿದನೂರು ತಾಲ್ಲೂಕಿನ…