ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಟ್ರಸ್ಟಿಗಳ ಮಂಡಳಿ ಆಹ್ವಾನಿಸಲಿದೆ.
ಸಮಾರಂಭವು ಜನವರಿ 2024 ರ ಮಕರ ಸಂಕ್ರಾಂತಿ ಬಳಿಕ ಪ್ರಾರಂಭವಾಗುತ್ತದೆ. ಪ್ರಾಣ-ಪ್ರತಿಷ್ಠಾ ಸಮಾರಂಭಕ್ಕೆ ಮಂಗಳಕರ ದಿನಾಂಕವನ್ನು ನಿಗದಿಪಡಿಸಲು ಟ್ರಸ್ಟ್ ಹೆಸರಾಂತ ಜ್ಯೋತಿಷಿಗಳನ್ನು ಸಂಪರ್ಕಿಸಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ಪ್ರಕಾರ, ಟ್ರಸ್ಟ್ ದೇಶಾದ್ಯಂತ ದೇವಾಲಯಗಳಲ್ಲಿ ‘ಅಯೋಧ್ಯಾ ಪ್ರಾಣ್-ಪ್ರತಿಷ್ಠಾ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಿದೆ. “ರಾಮ ಲಲ್ಲಾನ ಮೂರ್ತಿ ಪ್ರತಿಷ್ಠಾಪನೆಗಾಗಿ ಏಳು ದಿನಗಳ ಕಾಲ ಪ್ರಾಣ-ಪ್ರತಿಷ್ಠಾ ಸಮಾರಂಭ ಆಯೋಜಿಸಲು ನಿರ್ಧರಿಸಲಾಗಿದೆ. ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನವನ್ನು ಕಳುಹಿಸುತ್ತದೆ. ಕಾರ್ಯಕ್ರಮದ ದಿನಾಂಕವನ್ನು ಇನ್ನೂ ನಿರ್ಧರಿಸಲಾಗಿಲ್ಲ, ಡಿಸೆಂಬರ್ ನಿಂದ 2024 ಜನವರಿ 24 ರೊಳಗೆ ದಿನಾಂಕದ ಕುರಿತು ಪ್ರಧಾನ ಮಂತ್ರಿ ಅವರಿಗೆ ತಿಳಿಸಲಾಗುವುದು ಎಂದು ಚಂಪತ್ ತಿಳಿಸಿದ್ದಾರೆ. ಈ ವರ್ಷಾಂತ್ಯಕ್ಕೆ ರಾಮಮಂದಿರದ ನೆಲ ಅಂತಸ್ತಿನ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.