ಬೆಂಗಳೂರು ಕಟ್ಟಿದ ಕೆಂಪೇಗೌಡರ ನೆನಪಿಸುವ ಸುದಿನ

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿಯನ್ನು (ಜೂ.27)ರಂದು ಆಚರಿಸಲಾಗುತ್ತಿದೆ. ಇವತ್ತು ನಮ್ಮ ಮುಂದೆ ಬೆಳೆದು ನಿಂತಿರುವ ಬೃಹತ್ ಬೆಂಗಳೂರಿನ ಹಿಂದೆ ಅದನ್ನು ಕಟ್ಟಿದ ಕೆಂಪೇಗೌಡರನ್ನು ನಾವೆಲ್ಲರೂ ನೆನಪಿಸಿಕೊಳ್ಳುವ ಸುದಿನ ಎಂದರೆ ತಪ್ಪಾಗಲಾರದು.

ವಿಜಯನಗರ ಸಾಮ್ರಾಜ್ಯದ ಸಾಮಂತ ಅರಸರಲ್ಲೊಬ್ಬರಾದ ಕೆಂಪನಂಜೇಗೌಡ ಮತ್ತು ಲಿಂಗಮಾಂಬೆ ದಂಪತಿಯ ನಾಲ್ಕು ಮಂದಿ ಗಂಡು ಮಕ್ಕಳಲ್ಲಿ ಹಿರಿಯ ಪುತ್ರನೇ ನಾಡಪ್ರಭು ಕೆಂಪೇಗೌಡರು. ಯಲಹಂಕದಲ್ಲಿ ಅವರು 1510ರಲ್ಲಿ ಜನಿಸುತ್ತಾರೆ. 1528ರಲ್ಲಿ ತಾಯಿಯ ಸೋದರನ ಮಗಳು ಅಂದರೆ ಸೋದರ ಮಾವನ ಪುತ್ರಿ ಚೆನ್ನಮಾಂಬೆಯೊಡನೆ  ವಿವಾಹವಾಗಿ ಯುವರಾಜರಾಗಿ ಪಟ್ಟಾಭಿಷಕ್ತರಾಗುತ್ತಾರೆ. ಆ ನಂತರ 1531ರಲ್ಲಿ ಯಲಹಂಕ ಪ್ರಭುವಾಗಿ ಪಟ್ಟಾಭಿಷಕ್ತರಾಗಿ ರಾಜ್ಯಾಡಳಿತದ ಚುಕ್ಕಾಣಿ ಹಿಡಿಯುತ್ತಾರೆ.

ಕೃಷ್ಣದೇವರಾಯರು 1529ರಲ್ಲಿ ನಿಧನರಾದಾಗ ಅವರ ಸಹೋದರ ಅಚ್ಚುತರಾಯ ಅಧಿಕಾರಕ್ಕೆ ಬರುತ್ತಾರೆ. ಕೆಂಪೇಗೌಡರ ಕನಸಿನ ಬೆಂಗಳೂರು ನಿರ್ಮಾಣಕ್ಕೆ 50 ಸಾವಿರ ಚಿನ್ನದ ವರಹಗಳನ್ನು ನೀಡುವುದರ ಜೊತೆಗೆ 30 ಸಾವಿರ ಪಗೋಡಗಳ ಉತ್ಪನ್ನ ಬರುವ ಹಳೆಬೆಂಗಳೂರು, ಬೇಗೂರು, ವರ್ತೂರು, ಹಲಸೂರು, ಜಿಗಣಿ, ತಲಘಟ್ಟಪುರ, ಕೆಂಗೇರಿ, ಕುಂಬಳಗೋಡು, ಹೆಸರಘಟ್ಟ, ಕಾವಳ್ಳಿ (ಈಗಿನ ಕನ್ನಲ್ಲಿ), ಚಿಕ್ಕಬಾಣವರ ಇತ್ಯಾದಿ 12 ಹೋಬಳಿಗಳನ್ನು ಕೆಂಪೇಗೌಡರಿಗೆ ದಾನವಾಗಿ ಬಿಟ್ಟುಕೊಡುತ್ತಾರೆ.

ಆ ನಂತರ ಕೆಂಪೇಗೌಡರು ಪುರೋಹಿತರ ಅಣತಿಯಂತೆ ದೊಮ್ಮಲೂರು ಮತ್ತು ಯಲಹಂಕದ ನಡುವಿನ ಕಾಡಿನ ಮಧ್ಯೆ ಆಯ್ದ ಒಂದು ಸ್ಥಳದಲ್ಲಿ ಭೂಮಿ ಪೂಜೆ ನಡೆಸುತ್ತಾರೆ. ನಾಲ್ವರು ರೈತರೊಳಗೊಂಡಂತೆ ನೇಗಿಲು ಹೊತ್ತ ನಾಲ್ಕು ಜೋಡಿ ಎತ್ತುಗಳು ನಾಲ್ಕು ದಿಕ್ಕುಗಳಲ್ಲೂ ಗೆರೆ ಎಳೆಯುತ್ತಾ ನಡೆಯುತ್ತವೆ. ಅವುಗಳ ನಡಿಗೆನಿಂತ ಸ್ಥಳಗಳೇ ನವ ಬೆಂಗಳೂರಿನ  ಗಡಿಗಳೆಂದು ನಿರ್ಧರಿಸಲಾಗುತ್ತದೆ. ಅದರಂತೆ ನೇಗಿಲಿನಿಂದ ಗೆರೆ ಎಳೆಯುತ್ತಾ ನಡೆದ ಎತ್ತುಗಳು ಪೂರ್ವಕ್ಕೆ ಹಲಸೂರು, ಪಶ್ಚಿಮಕ್ಕೆ ಅರಳೇಪೇಟೆ, ಉತ್ತರಕ್ಕೆ ಯಲಹಂಕ, ದಕ್ಷಿಣಕ್ಕೆ ಆನೆಕಲ್ (ಸಿಟಿ ಮಾರುಕಟ್ಟೆ) ತನಕ ಬಂದು ನಿಲ್ಲುತ್ತವೆ. ಹೀಗೆ ಆ ಎತ್ತುಗಳು ಬಂದು ನಿಂತ ನೆಲವೇ ಕೆಂಪೇಗೌಡ ನಿರ್ಮಿಸಿದ ಬೆಂಗಳೂರಿಗೆ ಎಲ್ಲೆಯಾಯಿತು. ಅಲ್ಲೆಲ್ಲಾ ಗುರುತಿಗಾಗಿ ಕಲ್ಲುಗಳನ್ನು ನೆಟ್ಟು ಪೂರ್ವ – ಪಶ್ಚಿಮದ ಭಾಗವನ್ನು ಚಿಕ್ಕಪೇಟೆಯಾಗಿ, ಉತ್ತರ-ದಕ್ಷಿಣದ ಭಾಗವನ್ನು ದೊಡ್ಡಪೇಟೆಯಾಗಿ (ಈಗಿನ ಅವೆನ್ಯೂರಸ್ತೆ) ನಿರ್ಮಿಸಿರುವುದು ಇತಿಹಾಸವಾಗಿದೆ.

1537ರಲ್ಲಿ ಅಡಿಗಲ್ಲು ಹಾಕಿ ನಗರದ ನಾಲ್ಕು ದಿಕ್ಕುಗಳಿಗೂ ನಾಲ್ಕು ದ್ವಾರಗಳನ್ನು ನಿರ್ಮಿಸಿ ಅವುಗಳನ್ನು ಹಲಸೂರು ಹೆಬ್ಬಾಗಿಲು, ಕೆಂಗೇರಿ ಹೆಬ್ಬಾಗಿಲು, ಯಶವಂತಪುರ ಹೆಬ್ಬಾಗಿಲು, ಯಲಹಂಕ ಹೆಬ್ಬಾಗಿಲುಗಳೆಂದು ಹೆಸರಿಸಿದ್ದರು. ಮುಖ್ಯಧ್ವಾರದ ಬಾಗಿಲು ನಿಲ್ಲದೇ ಬೀಳುತ್ತಿರಲು ಕೆಂಪೇಗೌಡರ ಸೊಸೆ ಲಕ್ಷ್ಮೀದೇವಿ ಆತ್ಮಾರ್ಪಣೆ ಮಾಡಿಕೊಳ್ಳುತ್ತಾಳೆ. ನಾಡಪ್ರಭು ಕೆಂಪೇಗೌಡರ ಸೊಸೆ  ನಾಡಿಗಾಗಿ ಬಲಿದಾನಗೈದ ಪರಿಣಾಮವಾಗಿ ಮುಖ್ಯಧ್ವಾರದ ಬಾಗಿಲು ಭದ್ರವಾಗಿ ನಿಲ್ಲುತ್ತದೆ.

1531ರಲ್ಲಿ ಪಟ್ಟಕ್ಕೇರಿ ಅಧಿ1569ರವರೆಗೆ ಸುಮಾರು 38 ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದರು. ಮಾಗಡಿ ಬಳಿಯ ಕೆಂಪಾಪುರದಲ್ಲಿ 1569ರಲ್ಲಿ ಇಹಲೋಕ ತ್ಯಜಿಸಿಸುತ್ತಾರೆ. ಆದರೆ ಇವರ ಸಮಾಧಿ ಎಲ್ಲಿದೆ ಎಂಬುದೇ ಗೊತ್ತಿರಲಿಲ್ಲ. ಕೆಂಪೇಗೌಡರ ಸಮಾಧಿಗಾಗಿ ಹುಡುಕಾಟ ನಡೆದು 2015ರಲ್ಲಿ ಪ್ರಶಾಂತ್ ಎಂಬುವರು ಮಾಗಡಿ ಬಳಿಯ ತಿಪ್ಪಸಂದ್ರ ಹ್ಯಾಂಡ್‌ಪೊಸ್ಟ್ ಮತ್ತು ಕೆಂಚನಹಳ್ಳಿ ನಡುವೆ ಇರುವ ಕೆಂಪಾಪುರ ಗ್ರಾಮದಲ್ಲಿ ಕೆಂಪೇಗೌಡರ ಸಮಾಧಿಯನ್ನು ಗುರುತಿಸಿರುವುದು ವಿಶೇಷವಾಗಿದೆ. ಇಲ್ಲಿಯೇ ಕೆಂಪೇಗೌಡರು ನಿರ್ಮಿಸಿದ ಕೆಂಪಸಾಗರ ಕೆರೆಯೂ ಮತ್ತೊಂದು ವಿಶೇಷತೆಯಾಗಿದೆ.

Ashika S

Recent Posts

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

9 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

18 mins ago

ಎವರೆಸ್ಟ್ ಚಿಕನ್ ಮಸಾಲಾ ನಿಷೇದಕ್ಕೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ

ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ…

22 mins ago

ಎಚ್.ಡಿ.ಕೋಟೆ: ಕಬಿನಿ ಜಲಾಶಯಕ್ಕೆ ಹಾರಿ ನೌಕರ ಆತ್ಮಹತ್ಯೆ

ಕಬಿನಿ ಜಲಾಶಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

35 mins ago

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ₹32 ಲಕ್ಷ ದರೋಡೆ

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಅವರ ಬಳಿ ಇದ್ದ ₹32 ಲಕ್ಷವನ್ನು ದೋಚಿಕೊಂಡು…

37 mins ago

ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಬಟ್ಟೆ ತೊಳೆಯಲು ಬಳಕೆ!

ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆಯಾಗಿದೆ. ಇದು ಶಿವಮೊಗ್ಗ ಜಿಲ್ಲೆಯ ಕೆಳದಿ ಅರಸರ ಕಾಲದ…

41 mins ago