ಮೈಸೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಸಕಾಲ!

ಮೈಸೂರು: ಇದೀಗ ಮೈಸೂರು ಪ್ರವಾಸಿಗರಿಗೆ ಸ್ವರ್ಗವಾಗಿ ಗಮನಸೆಳೆಯುತ್ತಿದೆ. ದೂರದ ಊರುಗಳಿಂದ ಆಗಮಿಸಿರುವ ಪ್ರವಾಸಿಗರು ಎಲ್ಲೆಂದರಲ್ಲಿ ಸುತ್ತಾಡುತ್ತಾ ಎಂಜಾಯ್ ಮಾಡುತ್ತಿದ್ದಾರೆ.

ಮೈಸೂರು ಪ್ರವಾಸಿಗರ ಸ್ವರ್ಗ.. ಸದಾ ಪ್ರವಾಸಿಗರ ದಂಡು ಇಲ್ಲಿಗೆ ಆಗಮಿಸುತ್ತಲೇ ಇರುತ್ತದೆ. ಟ್ರಾಫಿಕ್ ಕಿರಿಕಿರಿಯಿಲ್ಲದೆ ಎಲ್ಲರೂ ಖುಷಿಯಾಗಿ ಅಡ್ಡಾಡುವ ನಗರವಾಗಿದ್ದು, ತಿಂಡಿ ತಿನಿಸುಗಳಿಂದ ಆರಂಭವಾಗಿ ಎಲ್ಲ ಬಗೆಯ ಪ್ರದಾರ್ಥಗಳು ಇಲ್ಲಿ ಲಭ್ಯ.. ಸದಾ ವಾಹನಗಳಲ್ಲಿ ಓಡಾಡಿ ಬೇಸತ್ತವರಿಗೆ ಟಾಂಗಾ ಗಾಡಿಯಿದೆ.. ಒತ್ತಡ ತಣಿಸಲು ಚಾಮುಂಡಿಬೆಟ್ಟ, ಪಾರ್ಕ್, ಮೃಗಾಲಯ, ಕಾರಂಜಿಕೆರೆ ಹೀಗೆ ಸುಂದರ, ಪ್ರಶಾಂತ ತಾಣಗಳಿವೆ.

ಈಗಂತು ನಗರದಲ್ಲಿ ಹೆಜ್ಜೆ ಹಾಕಿದರೆ ನೋಡಲು ಇಂದ್ರನ ಅಮರಾವತಿಯೇ ಧರೆಗಿಳಿದಂತಿರುವ ಭವ್ಯ ಅರಮನೆಯಿದೆ. ಅದರಾಚೆಗೆ ಮೈಸೂರು ಮಹಾರಾಜರು ನಿರ್ಮಿಸಿದ ಇನ್ನಷ್ಟು ಅರಮನೆಗಳಿವೆ. ಗಿಡಮರಗಳ ನಡುವೆ ಆನಂದಿಸಬೇಕೆಂದರೆ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಕುಬ್ಜ ವೃಕ್ಷಲೋಕವಿದೆ. ಅಲ್ಲಿಯೇ ಶುಕವನವಿದೆ.

ಇನ್ನು ಮೈಸೂರಿನ ಮುಕುಟಮಣಿಯಂತಿರುವ ಚಾಮುಂಡಿಬೆಟ್ಟವಂತೂ ಆಸ್ತಿಕ-ನಾಸ್ತಿಕ ಎನ್ನದೆ ಎಲ್ಲರನ್ನು ಸೆಳೆಯುತ್ತದೆ. ಇದು ಮೈಸೂರಿನ ಅಧಿದೇವತೆ, ಯದುವಂಶದ ಕುಲದೈವ ಶ್ರೀ ಚಾಮುಂಡೇಶ್ವರಿಯ ನೆಲೆವೀಡು ಆಗಿದೆ. ಮೈಸೂರಿನ ಆಕರ್ಷಣೀಯ ಧಾರ್ಮಿಕ ಕ್ಷೇತ್ರ ಮತ್ತು ಹಸಿರಿನ ಸಿರಿಯಲ್ಲಿರುವ ಪ್ರೇಕ್ಷಣೀಯ ತಾಣ.

ಈ ಬೆಟ್ಟದಲ್ಲಿ ಮತ್ತೊಂದು ಆಕರ್ಷಣೀಯ ಸ್ಥಳವೆಂದರೆ ಸಮ್ಮರ್ ಪ್ಯಾಲೇಸ್ ಎಂದು ಕರೆಯಲ್ಪಡುವ ರಾಜೇಂದ್ರ ವಿಲಾಸ ಅರಮನೆ. ಹಾಗೆಯೇ ಬೆಟ್ಟದ 700 ಮೆಟ್ಟಿಲುಗಳ ಬಳಿ ದೊಡ್ಡದೇವರಾಜ ಒಡೆಯರ್ ಅವರಿಂದ ನಿರ್ಮಿಸಲ್ಪಟ್ಟಿರುವ 16 ಅಡಿ ಎತ್ತರ 26 ಅಡಿ ಉದ್ದದ ಕಲ್ಲಿನ ಬೃಹತ್ ನಂದಿ ಸೂಜಿಗಲ್ಲಿನಂತೆ ಸೆಳೆಯುತ್ತದೆ.

ಇನ್ನು ನಗರದತ್ತ ಬಂದರೆಗಗನವನ್ನು ಚುಂಬಿಸಿ ಬಿಡುತ್ತವೇನೋ ಎಂಬಂತಿರುವ ಎರಡು ಬೃಹತ್ ಗೋಪುರಗಳುಳ್ಳ ಗಾಥಿಕ್ ಮಾದರಿಯಲ್ಲಿ ನಿರ್ಮಿಸಲ್ಪಟ್ಟ ಕಲಾನೈಪುಣ್ಯದ ಕಟ್ಟಡ ಮೈಸೂರಿನ ಸಂತ ಫಿಲೋಮಿನಾ ಚರ್ಚ್. 1933ರಲ್ಲಿ ಈ ಕ್ರೈಸ್ತ ದೇವಾಲಯಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಶಂಕುಸ್ಥಾಪನೆ ಮಾಡಿದ್ದರು. ಇಲ್ಲಿನ ಬೋಧನಾ ಮಂದಿರದಲ್ಲಿರುವ ಸಂತ ಫಿಲೋಮಿನಾಳ ವಿಗ್ರಹ ಅತ್ಯಂತ ಆಕರ್ಷಣೀಯವಾಗಿದೆ. ಈ ಚರ್ಚ್ ತನ್ನ ಕಲಾತ್ಮಕ ಚೆಂದದಿಂದಲೇ ಎಲ್ಲರನ್ನೂ ಕೈಬೀಸಿ ಕರೆಯುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಪ್ರಾಣಿ-ಪಕ್ಷಿಗಳ ವೀಕ್ಷಣೆಗೆ ಕರ್ನಾಟಕದಲ್ಲೇ ಅತಿದೊಡ್ಡದೆನಿಸಿರುವ ಚಾಮರಾಜೇಂದ್ರ ಮೃಗಾಲಯವಿದೆ. ದೋಣಿ ವಿಹಾರಕ್ಕೆ ಕಾರಂಜಿ ಕೆರೆ ಇದೆ. ವಾಯುವಿಹಾರಕ್ಕೆ ಕುಕ್ಕರಹಳ್ಳಿ ಕೆರೆ ಏರಿ ಇದೆ. ಮಕ್ಕಳ ಮನೋರಂಜನೆಗೆ ರೈಲ್ ಮ್ಯೂಸಿಯಂ ಮತ್ತು ಜವಾಹರ್ ಬಾಲಭವನ, ಗಾಂಧಿವನ ಇದೆ. ರುಚಿ ರುಚಿ ತಿನಿಸು, ಜೊತೆ ಜೊತೆಯಲ್ಲಿ ನಲಿವಿನ ಆಟ, ಸೊಗಸಿನ ನೋಟಕ್ಕೆ ಹಲವು ತಾಣಗಳಿವೆ. ವ್ಯಾಕ್ಸ್ ಮ್ಯೂಸಿಯಂ, ಕುಕ್ಕರಳ್ಳಿ ಕೆರೆಯಿದೆ. ಅಲ್ಲಿಂದಾಚೆಗೆ ಹೋಗಿ ನೋಡುತ್ತೇನೆಂದರೆ ಅಂದದ ಅಣೆಕಟ್ಟು ಕೆ.ಆರ್.ಎಸ್ ಜಲಾಶಯವಿದೆ.

ದಕ್ಷಿಣದ ಶ್ರೀಶೈಲ ಮುಡುಕುತೊರೆ ಬೆಟ್ಟ, ದಕ್ಷಿಣಕಾಶಿ ನಂಜನಗೂಡು ನಂಜುಂಡೇಶ್ವರ, ಇತಿಹಾಸ ಪ್ರಸಿದ್ಧ ಸೋಮನಾಥಪುರದ ಶ್ರೀ ಚನ್ನಕೇಶವ, ತಲಕಾಡು ಪಂಚಲಿಂಗೇಶ್ವರ, ತಿರುಮಕೂಡಲಿನ ತ್ರಿವೇಣಿ ಸಂಗಮ, ಶ್ರೀರಂಗಪಟ್ಟಣದ ಪಕ್ಷಿಧಾಮ, ಶ್ರೀರಂಗನಾಥ ದೇಗುಲ, ದರಿಯಾದೌಲತ್, ಗಂಜಾಂನ ನಿಮಿಷಾಂಬ ದೇವಿ, ಬೆಳಗೊಳದ ಬಲಮುರಿ ಹಾಗೂ ಎಡಮುರಿ ಇಷ್ಟೇ ಅಲ್ಲದೆ ನಿಸರ್ಗ ಪ್ರಿಯರಿಗೆ ನಾಗರಹೊಳೆ ಉದ್ಯಾನವಿದೆ. ಕಬಿನಿ ಜಲಾಶಯವಿದೆ. ಹೀಗೆ ಒಂದಲ್ಲ ಎರಡಲ್ಲ ಹತ್ತಾರು ತಾಣಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ದಸರಾ ನಂತರವೂ ಮೈಸೂರು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಲೇ ಇರುತ್ತದೆ. ಪ್ರವಾಸಿಗರ ಅನುಕೂಲಕ್ಕಾಗಿಯೇ ಸರ್ಕಾರ ಕೆಎಸ್ ಆರ್ ಟಿಸಿ ಬಸ್ ಸೌಲಭ್ಯ ಮಾಡಿದೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago