Categories: ಲೇಖನ

ಹೊಸ ನಿರೀಕ್ಷೆಯಲ್ಲಿ ಹೊಸವರ್ಷವನ್ನು ಸ್ವಾಗತಿಸೋಣ…

ಪ್ರತಿವರ್ಷವೂ ನಾವು ಹೊಸವರ್ಷವನ್ನು ಹಲವು ನಿರೀಕ್ಷೆಗಳೊಂದಿಗೆ ಬರಮಾಡಿಕೊಳ್ಳುತ್ತೇವೆ. ನೋವುಗಳನ್ನು ಮರೆತು ಖುಷಿ ಖುಷಿಯಾಗಿ ಹೊಸವರ್ಷಕ್ಕೆ ಕಾಲಿಡುತ್ತೇವೆ. ಈ ಬಾರಿಯೂ ಅದನ್ನೇ ಮಾಡುವುದು ಅನಿವಾರ್ಯವಾಗಿದೆ. ನಾವು ಸಂಕಷ್ಟದಲ್ಲಿದ್ದೇವೆ. ನಮ್ಮೆಲ್ಲ ಆಸೆ ಆಕಾಂಕ್ಷೆಗಳನ್ನು ಬದಿಗೊತ್ತಿ ಆರೋಗ್ಯವನ್ನು ಬೇಡುವಂತಾಗಿದೆ.

ಇಲ್ಲಿ ನಾವು ಮಾತ್ರವಲ್ಲ ನಮ್ಮ ಸುತ್ತಮುತ್ತಲ ಜಗತ್ತು ಆರೋಗ್ಯವಾಗಿದ್ದರೆ ನಾವು ಆರೋಗ್ಯವಾಗಿರಲು ಸಾಧ್ಯ ಎನ್ನುವುದನ್ನು ಕೊರೊನಾದಂತಹ ಕಾಯಿಲೆ ತೋರಿಸಿಕೊಟ್ಟಿದೆ. ಇದೇ ಕೊರೊನಾ ಹಲವು ಮನೆಗಳ ದೀಪ ಆರಿಸಿದೆ. ತುತ್ತು ಅನ್ನಕ್ಕೂ ಪರದಾಡುವಂತೆ ಮಾಡಿದೆ.

ಇದು ಎರಡನೇ ಬಾರಿಗೆ ನಾವು ಆತಂಕದಲ್ಲಿ ಹೊಸವರ್ಷವನ್ನು ಬರಮಾಡಿಕೊಳ್ಳುತ್ತಿದ್ದೇವೆ. ಹೊಸ ವರ್ಷದ ಹೊಸ್ತಿಲಲ್ಲಿ ನಿಂತು ಹಾಗೆ ಸುಮ್ಮನೆ ತಿರುಗಿ ನೋಡಿದರೆ 2021 ನಮ್ಮ ಪಾಲಿಗೆ ಖುಷಿಯನ್ನು ಬಿಟ್ಟು ಹೋಗಲಿಲ್ಲ ವರ್ಷದುದ್ದಕ್ಕೂ ನೋವು ನಿರಾಸೆ, ಕಷ್ಟ ನಷ್ಟಗಳ ಸರಮಾಲೆಯನ್ನೇ ನಮಗೆ ಮಾತ್ರವಲ್ಲ ಜಗತ್ತಿಗೆ ನೀಡಿದೆ. ನಮ್ಮಿಂದ ನಮ್ಮ ಕುಟುಂಬದವರು, ಸಂಬಂಧಿಕರು, ನಾಯಕರು, ನಟರು, ಕಲಾವಿದರು ಹೀಗೆ ಒಂದಷ್ಟು ಮಂದಿಯನ್ನು ದೂರ ಮಾಡಿದೆ.

ಮಳೆ, ಪ್ರವಾಹದಂತಹ ಪ್ರಾಕೃತಿಕ ವಿಕೋಪಗಳ ಮೂಲಕ ಕೊಡಲಿ ಏಟು ನೀಡಿದೆ. ನಾವು ಖುಷಿಯಾಗಿದ್ದೆವು ಎನ್ನುವುದು ಮಾನವ ಕುಲಕ್ಕೆ ಮರೀಚಿಕೆ ಯಾಗಿದೆ. ಬಹುಶಃ ನಾವೆಲ್ಲರೂ ಸುಖವಾಗಿದ್ದೇವೆ ಎಂದು ಹೇಳ ಬೇಕಾದರೆ ಕೊರೊನಾ ನಮ್ಮನ್ನು ಬಿಟ್ಟು ಹೋಗಬೇಕು. ಮತ್ತು ಅದು ಆದಷ್ಟು ಬೇಗ ತೊಲಗಲಿ ಎಂದು ಪ್ರಾರ್ಥನೆ ಮಾಡಬೇಕಾಗಿದೆ.

ನಮ್ಮೆಲ್ಲ ಸಂಕಟ.. ಸಾವು, ನೋವು, ದುಃಖ ದುಮ್ಮಾನ, ಈಡೇರದೆ ಉಳಿದು ಹೋದ ಬಯಕೆಗಳು ಹೀಗೆ ಎಲ್ಲ ನೋವು, ನಿರಾಸೆಗಳ ನಡುವೆಯೂ ಹೊಸವರ್ಷದ ಹೊಸ ನಿರೀಕ್ಷೆಯೊಂದು ಆಸೆಯ ಕಂಗಳಿಂದ ಅತ್ತ ನೋಡುವಂತೆ ಮಾಡಿದೆ. ಇದೆಲ್ಲದರ ನಡುವೆ ನಾವು ಕಳೆದು ಹೋದ ವರ್ಷದಲ್ಲಿ ಮಾಡಿದ್ದೇನೂ ಇಲ್ಲ ಮುಂದಿನ ವರ್ಷವಾದರೂ ಏನಾದರೊಂದು ಮಾಡಬೇಕು ಎಂಬ ಶಪಥ ಮಾಡೋಣ ಆ ಮೂಲಕ ಜಡ್ಡು ಹಿಡಿದ ಬದುಕಿಗೊಂದು ಹೊಸತನದ ಸಾಣೆ ಕೊಡೋಣ.

ಹಾಗೆನೋಡಿದರೆ ನಾವು ಸವೆಸಿ ಬಂದ ಅಷ್ಟು ವರ್ಷಗಳು ಅಮೂಲ್ಯವೇ.. ಪ್ರತಿವರ್ಷದ ಆರಂಭದ ಶಪಥ ಕ್ರಮೇಣ ಮಾಸಿಹೋಗುತ್ತದೆ. ಅದರಾಚೆಗೆ ವರ್ಷದ ಆರಂಭದ ಆತ್ಮವಿಶ್ವಾಸಕ್ಕೆ ತುಕ್ಕು ಹಿಡಿಯುತ್ತದೆ. ಮತ್ತೆ ಅದೇ ಬದುಕು ಮುನ್ನಡೆಯುತ್ತದೆ. ಸಾಧನೆ ಹಾದಿಗಾಗಿ ನಾವೇ ಹಾಕಿಟ್ಟ ಮಾಪನವೂ ಮಸುಕಾಗಿ ಬಿಡುತ್ತದೆ.

ಇಷ್ಟಕ್ಕೂ ಎಲ್ಲ ವರ್ಷಗಳಲ್ಲಿಯೂ ಒಂದಲ್ಲ ಒಂದು ರೀತಿಯ ಘಟನಾವಳಿಗಳು ನಡೆದೇ ನಡೆದಿರುತ್ತವೆ. ಅವುಗಳಲ್ಲಿ ಕೆಲವು ಖುಷಿ ಕೊಟ್ಟಿದ್ದರೆ ಮತ್ತೆ ಕೆಲವು ದುಃಖವನ್ನು ತಂದಿರುತ್ತವೆ. ಕೆಲವು ಮನೆಗಳಲ್ಲಿ ಶುಭ ಕಾರ್ಯಕ್ರಮಗಳು ನಡೆದಿದ್ದರೆ ಮತ್ತೆ ಕೆಲವರ ಮನೆಗಳಲ್ಲಿ ಸಾವು-ನೋವು ಘಟಿಸಿರಬಹುದು. ಆದರೆ ಕಾಲವೇ ಹಾಗೆ ಅದಕ್ಕೆ ಎಲ್ಲವನ್ನು ಮರೆಸುತ್ತಾ ಮುನ್ನಡೆಸುವ ಶಕ್ತಿಯಿದೆ. ವ್ಯಕ್ತಿಗತವಾಗಿ ನಾವೆಲ್ಲರೂ ಸಾಕಷ್ಟು ಏರುಪೇರುಗಳನ್ನು ಅನುಭವಿಸಿರಬಹುದು ಆದರೆ ಮುಂದೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಿರೀಕ್ಷೆಯಲ್ಲಿ ದುಃಖದ ಕ್ಷಣಗಳನ್ನು ಮರೆಯುತ್ತಾ ಹೊಸ ವರ್ಷದತ್ತ ಹೊಸದಿಕ್ಕಿನತ್ತ ಹೆಜ್ಜೆಯಿಡೋಣ…

Swathi MG

Recent Posts

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

6 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

10 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

16 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

28 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

35 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

49 mins ago