Categories: ವಿಶೇಷ

ಶಿವರಾತ್ರಿಯ ದಿನ ಈ ಕೆಲಸ ಮಾಡಿದ್ರೆ ಕೈ ತುಂಬಾ ಸಂಪತ್ತು ಪ್ರಾಪ್ತಿಯಾಗಲಿದೆ

ಹಿಂದೂ ಧರ್ಮದಲ್ಲಿ ಮಹಾ ಶಿವರಾತ್ರಿ ಹಬ್ಬವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಮಹಾಶಿವರಾತ್ರಿಯ ದಿನದಂದು ಶಿವನ ದೇವಾಲಯಗಳಿಗೆ ಭಕ್ತರ ದಂಡೇ ಹರಿದುಬರುತ್ತದೆ. ಈ ದಿನ ಮಹಾದೇವನನ್ನು ವಿವಿಧ ರೀತಿಯಲ್ಲಿ ಆರಾಧಿಸಲಾಗುತ್ತದೆ. ಮನೆ-ದೇವಸ್ಥಾನ ಎಲ್ಲಾ ಕಡೆ ಶಿವ ಆರಾಧನೆಯೇ ನಮಗೆ ಕಾಣಿಸುತ್ತದೆ ಹಾಗೂ ಕೇಳಿಸುತ್ತದೆ. ನಾವು ಶಿವರಾತ್ರಿಯಂದು ಕೆಲವೊಂದು ಕೆಲಸಗಳನ್ನ ಮಾಡುವುದರಿಂದ ಆರ್ಥಿಕವಾಗಿ ಉತ್ತಮ ಲಾಭಗಳಿಸಬಹುದು.

ಈ ದಿನ ನೀವು ತಪ್ಪದೇ, ಶಿವನಿಗೆ ನೀರು ಇಷ್ಟವಾಗುತ್ತದೆ ಎನ್ನಳಾಗುತ್ತದೆ. ಹಾಗಾಗಿ ಶಿವನಿಗೆ ನೀರಿನ ಅಭಿಷೇಕ ಮಾಡುವುದರಿಂದ ಬಹಳ ಒಳ್ಳೆಯ ಫಲಗಳು ಸಿಗುತ್ತದೆ. ಶಿವನನ್ನ ಈ ರೀತಿ ಪೂಜಿಸುವುದು ಖಂಡಿತವಾಗಿಯೂ ಫಲಿತಾಂಶವನ್ನು ನೀಡುತ್ತದೆ. ಅಲ್ಲದೇ, ನಿಮ್ಮ ಜೀವನದಲ್ಲಿ ಸಾಲದ ಸಮಸ್ಯೆ ಇದ್ದರೂ ಸಹ ಈ ನೀರಿನ ಅಭಿಷೇಕ ಎಲ್ಲಾ ಸಮಸ್ಯೆಗಳಿಗೆ ಸಹ ಮುಕ್ತಿ ನೀಡುತ್ತದೆ.

ಇನ್ನು ಈ ಶುಭ ದಿನದಂದು ಶಿವನನ್ನು ಬಿಲ್ವಪತ್ರೆಗಳಿಂದ ಪೂಜಿಸುವ ಮತ್ತು ಶಿವ ಮಂತ್ರಗಳನ್ನು ಪಠಿಸುವವರಿಗೆ ಮೋಕ್ಷ ಸಿಗುತ್ತದೆ.

ಶಿವನ ಪಂಚಾಕ್ಷರಿ ಮಂತ್ರವನ್ನು 108 ಬಾರಿ ಜಪಿಸಿ. ಶಿವಪೂಜೆಯ ನಂತರ ಎಳ್ಳು, ಅಕ್ಕಿ ಮತ್ತು ತುಪ್ಪದ ನೈವೇದ್ಯವನ್ನು ಅರ್ಪಿಸಬೇಕು. ಮಹಾ ಶಿವರಾತ್ರಿಯ ದಿನದಂದು ಕಟ್ಟುನಿಟ್ಟಾಗಿ ಜಾಗರಣೆ ಮಾಡಬೇಕು ಎನ್ನುವ ನಿಯಮವಿದೆ, ನೀವು ಜಾಗರಣೆ ಮಾಡುವುದರಿಂದ ನಿಮ್ಮ ಎಲ್ಲಾ ಕನಸುಗಳು ನನಸಾಗುತ್ತದೆ ಹಾಗೂ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ.

ಶಿವನಿಗೆ ಅನೇಕ ಹೂವುಗಳು ಎಂದರೆ ಬಹಳ ಇಷ್ಟ. ಹಾಗಾಗಿ ಮಹಾ ಶಿವರಾತ್ರಿಯಂದು ನೀವು ಮಕರಂದಗಳು ಅದರೆ ಸಿಹಿರಸದಿಂದ ತುಂಬಿರುವ ಹೂವುಗಳನ್ನ ಅರ್ಪಣೆ ಮಾಡಿ ಪೂಜಿಸಬೇಕು. ಈ ಹೂವುಗಳನ್ನ ಅರ್ಪಣೆ ಮಾಡಿದರೆ ನಿಮ್ಮ ಒತ್ತಡ ಹಾಗೂ ಗೊಂದಲಗಳಿಂದ ಮುಕ್ತಿ ಸಿಗುತ್ತದೆ.

ಶಿವರಾತ್ರಿಯ ಸಮಯದಲ್ಲಿ ಯಾವುದೇ ಕಾರಣಕ್ಕೂ ನೀವು ಅನ್ನ, ಈರುಳ್ಳಿ ಹಾಗೂ ಬೆಳ್ಳುಳ್ಳಿಯಂತಹ ಆಹಾರಗಳನ್ನ ತಿನ್ನಬಾರದು. ಈ ದಿನ ಸಾಧ್ಯವಾದರೆ ಉಪವಾಸ ಮಾಡಬೇಕು ಅಥವಾ ಹಣ್ಣು ಸೇವನೆ ಮಾಡಬೇಕು. ನಿಮಗೆ ಆರೋಗ್ಯ ಸಮಸ್ಯೆ ಇದ್ದು ಉಪವಾಸ ಮಾಡಲು ಸಾಧ್ಯವಿಲ್ಲ ಎಂದರೆ ಸಾತ್ವಿಕ ಆಹಾರಗಳನ್ನ ಮಾತ್ರ ಸೇವಿಸಿ.

ಆದರೆ ನೀವು ಆ ದಿನ ಯಾವುದೇ ಕಾರಣಕ್ಕೂ ಕಪ್ಪು ಬಣ್ಣದ ಬಟ್ಟೆಯನ್ನು ಧರಿಸಬೇಡಿ. ನಂಬಿಕೆಗಳ ಪ್ರಕಾರ ಶಿವನಿಗೆ ಕಪ್ಪು ಬಣ್ಣ ಇಷ್ಟವಿಲ್ಲ. ವಿಶೇಷವಾಗಿ ಈ ದಿನ ಪರಮೇಶ್ವರನನ್ನು ಪೂಜಿಸುವ ಮತ್ತು ಉಪವಾಸ ಮಾಡುವ ಭಕ್ತರು ಕಪ್ಪು ಅಥವಾ ಗಾಢ ಬಣ್ಣದ ಬಟ್ಟೆಗಳನ್ನು ಧರಿಸಬಾರದು. ಈ ದಿನ ಶುಭ್ರವಾದ, ಒಗೆದ ಬಿಳಿ, ಹಳದಿ ಬಟ್ಟೆಗಳನ್ನು ಧರಿಸಬೇಕು.

 

Ashitha S

Recent Posts

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

58 seconds ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

22 mins ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

56 mins ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

1 hour ago

ಜೆಪಿ ನಡ್ಡಾ, ಬಿವೈ ವಿಜಯೇಂದ್ರಗೆ ಸಮನ್ಸ್‌ ಜಾರಿ ಮಾಡಿದ ಬೆಂಗಳೂರು ಪೊಲೀಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…

1 hour ago

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

2 hours ago