News Karnataka Kannada
Monday, April 29 2024
ನುಡಿಚಿತ್ರ

ಮಕ್ಕಳ ದಿನಾಚರಣೆ; ನೆಹರು ಹುಟ್ಟಿದ ದಿನ

Childrens Day
Photo Credit : Freepik

ಇತಿಹಾಸ ಮತ್ತು ಆಚರಣೆ
ನವೆಂಬರ್ 14ರಂದು ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ನಮ್ಮ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಹುಟ್ಟದ ದಿನ. ಅವರ ಸವಿನೆನಪಿಗಾಗಿ ಅವರು ಪ್ರೀತಿಸುವ ಮಕ್ಕಆಗ ಆ ದಿನವನ್ನು ಮೀಸಲಿಡಲಾಗಿದೆ.

ನವೆಂಬರ್ ಬಂದಿತೆಂದರೆ ಸಾಕು ಎಲ್ಲಾ ಮಕ್ಕಳು ಮಕ್ಕಳ ದಿನಾಚರಣೆಯ ಸಂಭ್ರಮಕ್ಕಾಗಿ ತಯಾರಿ ನಡೆಸುತ್ತಾರೆ. ಮಕ್ಕಳು ಮಾತ್ರವಲ್ಲದೇ ಹಿರಿಯರೂ ಕೂಡಾ ಮಕ್ಕಳ ದಿನಾಚರಣೆಯನ್ನು ತಾವು ಹೇಗೆ ಆಚರಿಸುತ್ತಿದ್ದೆವು’ ಎಂದು ಮೆಲುಕು ಹಾಕುತ್ತಾರೆ. ಈ ದಿನ ದೊಡ್ಡವರು ಅವರ ಬಾಲ್ಯದ ದಿನವನ್ನು ನೆನೆದು ಕಿರಿಯರಾಗುತ್ತಾರೆ, ಶಿಕ್ಷಕರಂತೂ ನವರಿಬರ್ 1 ರಿಂದಲೇ ಶಾಲೆಗಳಲ್ಲಿ ಮಕ್ಕಳ ದಿನ ಆಚರಿಸಲು ಎಲ್ಲಾ ರೀತಿಯ ಸಿದ್ಧತೆಯಲ್ಲಿ ತೊಡಗಿಕೊಳ್ಳುತ್ತಾರೆ.

ಸಾಮಾನ್ಯವಾಗಿ ಮಕ್ಕಳ ದಿನಾಚರಣೆ ಅಂದರೆ ನಮ್ಮ ದೇಶದ ಮೊದಲ ಪ್ರಧಾನಿ ಪಂಡಿತ್‌ ಜವಹರಲಾಲ್ ನೆಹರು ಅವರ ಜನ್ಮದಿನ ಎಂದು ಎಲ್ಲರಿಗೂ ತಿಳಿದಿರುವ ವಿಚಾರ, ಆದರೆ ನೆಹರು ತಮ್ಮ ಜನ್ಮ ದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲು ಏಕೆ ಅನುಮತಿ ನೀಡಿದರು ಎನ್ನುವ ಕತೆಯೇ ರೋಚಕ.

ನೆಹರೂ ಅವರಿಗೆ ಮಕ್ಕಳೆಂದರೆ ಬಹಳ ಪ್ರೀತಿ, ಮಕ್ಕಳ ಮೇಲಿನ ಅವರ ವಾತ್ಸಲ್ಯ ಎಷ್ಟಿತ್ತು ಎಂದರೆ ಹೆಚ್ಚಿನ ಸಮಯವನ್ನು ಮಕ್ಕಳೊಂದಿಗೆ ಕಳೆಯುವುದಕ್ಕೆ ನೆಹರೂ ಬಯಸುತ್ತಿದ್ದರು. ಆದ್ದರಿಂದಲೇ ಮಕ್ಕಳೆಲ್ಲರಿಗೂ ನೆಹರೂ ಎಂದಿಗೂ ಪ್ರೀತಿಯ ಚಾಚಾ ಆಗಿ ಇರುತ್ತಿದ್ದರು. ಮಕ್ಕಳು ಸಹ ಪ್ರೀತಿಯಿಂದ ಚಾಚಾ ಎಂದು ಕರೆಯುತ್ತಿದ್ದರು. ಇಂದಿಗೂ ನೆಹರು ಮಕ್ಕಳ ನೆಚ್ಚಿನ ಚಾಚಾ ಆಗಿಯೇ ಹೆಚ್ಚು ಹೆಸರುವಾಸಿ.

ಮಕ್ಕಳ ಹಕ್ಕುಗಳನ್ನು ರಕ್ಷಿಸಲು, ಅವರ ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಮಕ್ಕಳ ದಿನವನ್ನು ಬಾಲ್ ದಿವಸ್ ಎಂದು ಕರೆಯಲಾಗುತ್ತದೆ. ಚಾಚಾ ನೆಹರು ಅವರು ಮುಖ್ಯವಾಗಿ ಮಕ್ಕಳು ಮತ್ತು ಗುಲಾಬಿಗಳ ಮೇಲೆ ಹೆಚ್ಚು ಒಲವು ಹೊಂದಿದ್ದರು. ಜವಾಹರಲಾಲ್‌ ನೆಹರೂ ಅವರ ಪ್ರಭ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಹಾಗಾಗಿ ಅವರನ್ನು ಎಚ್ಚರಿಕೆಯಿಂದ ಮತ್ತು ಪ್ರೀತಿಯಿಂದ ಸಾಕಬೇಕು ಎಂದು ಅವರು ಹೇಳಿದ್ದರು.

ಮಕ್ಕಳೊಂದಿಗೆ ಮಗುವಾಗುತ್ತಿದ್ದ ಮತ್ತು ಮಕ್ಕಳ ಬಗ್ಗೆ ಅಪಾರ ಒಲವಿದ್ದ ನೆಹರುರವರು ಅತ್ಯಂತ ಸಂತೋಷದಿಂದ ತಮ್ಮ ಜನ್ಮದಿನವನ್ನು ‘ಮಕ್ಕಳ ದಿನಾಚರಣೆ’ಯೆಂದು ಆಚರಿಸಲು ಒಪ್ಪಿಕೊಂಡರು. ಈ ರೀತಿ 1951ರಲ್ಲಿ ನವೆಂಬರ್ 14ರಂದು ಭಾರತದಲ್ಲಿ ‘ಮಕ್ಕಳ ದಿನಾಚರಣೆ’ ಆರಂಭವಾಯಿತು. ಸಾಧಾರಣವಾಗಿ ಹಾಡು, ಆಟಗಳನ್ನು ಕೂಡಿದ ಕೆಲವು ಗಂಟೆಗಳ ಬಳಿಕ ರಜೆ ಘೋಷಿಸಲಾಗುತ್ತದೆ. ಮಕ್ಕಳ ದಿನಾಚರಣೆಯಂದು ವಿವಿಧೆಡೆ ಕಲಾ ಹಾಗೂ ಸಾಂಸ್ಕೃತಿಕ ಕರ‍್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಮಕ್ಕಳ ದಿನಾಚರಣೆಯ ಇತಿಹಾಸ ಮತ್ತು ಮಹತ್ವ:
ಭಾರತೀಯ ರಾಜಕಾರಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರ ಜೊತೆಗೆ ಪಂಡಿತ್‌ ಜವಾಹರಲಾಲ್ ನೆಹರೂ ಅವರು ಮಕ್ಕಳ ಬಗ್ಗೆಯೂ ತುಂಬಾ ಒಲವು ಹೊಂದಿದ್ದರು. ಮಕ್ಕಳ ಮೇಲೆ ಅವರಿಗಿದ್ದ ಪ್ರೀತಿ ಮತ್ತು ಜನಪ್ರಿಯತೆಯಿಂದಾಗಿ ಅವರನ್ನು ಚಾಚಾ ನೆಹರು ಎಂದು ಪ್ರೀತಿಯಿಂದ ಕರೆಯಲಾಗುತ್ತದೆ. ಜವಾಹರಲಾಲ್‌ ನೆಹರು ಅವರು ಮಕ್ಕಳ ಮೇಲಿನ ವಾತ್ಸಲ್ಯ ಮತ್ತು
ಪ್ರೀತಿಗೆ ಪ್ರಸಿದ್ಧರಾಗಿದ್ದರು. ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಅವರು ಪ್ರತಿಪಾದಿಸಿದರು. ‘ಇಂದಿನ ಮಕ್ಕಳು ನಾಳೆಯ ಭಾರತವನ್ನು ನರ‍್ಮಾಣ ಮಾಡುತ್ತಾರೆ. ನಾವು ಅವರನ್ನು ಬೆಳೆಸುವ ವಿಧಾನವು ದೇಶದ ಭವಿಷ್ಯವನ್ನು ನರ‍್ಧರಿಸುತ್ತದೆ’ ಎಂದು ನಂಬಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
34905
ಮಣಿಕಂಠ ತ್ರಿಶಂಕರ್

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು