Categories: ಪರಿಸರ

ಸುಂದರ ಪರಿಸರ ನಿರ್ಮಾಣಕ್ಕೆ ಕೈಜೋಡಿಸೋಣ

ಜೂನ್ 5 ನ್ನು ಪರಿಸರ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ದಿನ ಪರಿಸರದ ಬಗ್ಗೆ ಬಹಳಷ್ಟು ಮಾತನಾಡುತ್ತೇವೆ. ಒಂದಷ್ಟು ಗಿಡಗಳನ್ನು ನೆಟ್ಟು ಪರಿಸರ ಉಳಿಸಿ ಬಿಟ್ಟಿದ್ದೇವೆ ಎಂಬಂತೆ ಬೀಗುತ್ತೇವೆ.

ಹಾಗಾದರೆ ಪರಿಸರ ದಿನ ಅಂದರೆ ಇಷ್ಟೆನಾ? ಇಂತಹ ಪ್ರಶ್ನೆಗಳು ಮೂಡುವುದು ಸಹಜ ಏಕೆಂದರೆ ಪರಿಸರ ದಿನ ಎನ್ನುವುದು ಒಂದು ದಿನಕ್ಕೆ ಸೀಮಿತವಾದುದಲ್ಲ. ಅದು ವರ್ಷದ ಮೂನ್ನೂರ ಅರುವತೈದು ದಿನವೂ ನಮ್ಮ ಮನದಂಗಳದಲ್ಲಿ ಉಳಿಯ ಬೇಕು. ಪ್ರತಿದಿನವೂ ಪರಿಸರಕ್ಕೆ ಪೂರಕವಾದ ಒಂದೇ ಒಂದು ಕೆಲಸ ಮಾಡಿದರೆ ಸಾಕು. ಒಂದೊಳ್ಳೆಯ ಪರಿಸರವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ.

ಕಳೆದ ಕೆಲವು ದಶಕಗಳಿಂದೀಚೆಗೆ ಪರಿಸರದಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಜನ ಸಂಖ್ಯೆ ಹೆಚ್ಚುತ್ತಿದ್ದಂತೆಯೇ  ಜನವಸತಿ ಪ್ರದೇಶಗಳು ಹೆಚ್ಚಾಗಿವೆ. ಹೀಗಾಗಿ ಕೋಟ್ಯಾಂತರ ಎಕರೆ ಕೃಷಿ ಭೂಮಿಗಳು ಜನವಸತಿ ಪ್ರದೇಶಗಳಾಗಿ ಬದಲಾಗಿವೆ. ಅಲ್ಲಿದ್ದ ಗಿಡಮರಗಳು ನಾಶವಾಗಿವೆ.

ಇನ್ನು ನಮ್ಮ ಬೆಳವಣಿಗೆಗೆ ತಕ್ಕಂತೆ ಹೆದ್ದಾರಿ, ಕಟ್ಟಡಗಳು, ಕಾರ್ಖಾನೆಗಳು, ಹೀಗೆ ಹಲವು ಅಭಿವೃದ್ಧಿ ಕೆಲಸಗಳಾಗಿವೆ. ಅದು ಸಾಧ್ಯವಾಗಿದ್ದರಿಂದ ಪರಿಸರದ ಮೇಲೆ ಪರಿಣಾಮವಾಗಿದೆ. ಆದರೆ ಹೆಚ್ಚುತ್ತಿರುವ ಕಲುಷಿತ ವಾತಾವರಣವನ್ನು ತಡೆಯುವ ಕೆಲಸವನ್ನು ಮಾಡಲು ಪ್ರತಿಯೊಬ್ಬ ನಾಗರಿಕರಿಗೂ ಅವಕಾಶವಿದೆ.

ಪರಿಸರವನ್ನು ಕಾಪಾಡುವುದು ಅಂದರೆ ಗಿಡಗಳನ್ನು ನೆಟ್ಟು ಬಿಡುವುದಷ್ಟೇ ಅಲ್ಲ. ನೆಟ್ಟ ಗಿಡವನ್ನು ನೀರು ಗೊಬ್ಬರ ಹಾಕಿ ಬೆಳೆಸುವುದು ಮತ್ತು ಸುತ್ತಮುತ್ತಲ ಪರಿಸರವನ್ನು ಶುಚಿಯಾಗಿಟ್ಟುಕೊಂಡು, ರೋಗರುಜಿನಗಳು ಬಾರದಂತೆ ನೋಡಿಕೊಳ್ಳುವುದು ಕೂಡ ಅಷ್ಟೇ ಮುಖ್ಯವಾಗುತ್ತದೆ.

ವಾತಾವರಣದಲ್ಲಿ ಏರುಪೇರುಗಳನ್ನು ಇತ್ತೀಚೆಗಿನ ದಿನಗಳಲ್ಲಿ ನಾವು ನೋಡುತ್ತಿದ್ದೇವೆ. ವಾಡಿಕೆಯಂತೆ ಮಳೆ, ಬಿಸಿಲು, ಚಳಿ ಯಾವುದೂ ನಡೆಯುತ್ತಿಲ್ಲ. ವಿಕೋಪಗಳು ಜಾಸ್ತಿಯಾಗುತ್ತಿವೆ.

ಗ್ರಾಮೀಣ ಪ್ರದೇಶಗಳಲ್ಲಿನ ಕಾಡುಗಳು ನಾಶವಾಗಿ ತೋಟಗಳಾಗಿವೆ. ಗದ್ದೆಗಳು ನಿವೇಶನಗಳಾಗಿ ಕಾಂಕ್ರಿಟ್ ಕಾಡಾಗಿ ಮಾರ್ಪಟ್ಟಿದೆ. ಮಾವು, ಹಲಸು, ನೇರಳೆ ಸೇರಿದಂತೆ ಹಲವು ರೀತಿಯ ಪರಿಸರ ಸ್ನೇಹಿ ಗಿಡನೆಟ್ಟು ಅದರಿಂದ ಒಂದಷ್ಟು ಜೀವಿಗಳಿಗೆ ಬದುಕಲು ಅವಕಾಶ ಮಾಡಿಕೊಡುವ ಮನೋಭಾವವಿಲ್ಲ. ಇವತ್ತು ಗಿಡನೆಟ್ಟರೆ ಇನ್ನೊಂದು ಹತ್ತು ವರ್ಷ ಬಿಟ್ಟು ಕಡಿದರೆ ಅದರಿಂದ ಎಷ್ಟು ಆದಾಯ ಬರಬಹುದು ಎಂದು ಆಲೋಚಿಸುತ್ತಿದ್ದೇವೆ.

ಆದಾಯ ತಂದು ಕೊಡುವ ನೀಲಗಿರಿ, ಸಿಲ್ವರ್‌ಓಕ್, ತೇಗದ ಮರಗಳನ್ನು ನೆಡುತ್ತೇವೆ. ಅವುಗಳಿಂದ ಹಸಿರುವ ಪ್ರಪಂಚವನ್ನು ಸೃಷ್ಠಿ ಮಾಡುತ್ತಿದ್ದೇವೆ. ಮುಂದೆ ಆದಾಯವನ್ನು ನಿರೀಕ್ಷಿಸುತ್ತಿದ್ದೇವೆ. ಆದರೆ ಪರಿಸರ ಸ್ನೇಹಿ ಅರಣ್ಯವನ್ನು ಪಡೆಯಲು ಸಾಧ್ಯನಾ ಎಂದು ನಾವ್ಯಾರು ಯೋಚಿಸುತ್ತಲೇ ಇಲ್ಲ.

ನೀಲಗಿರಿ ಮರದಡಿಯಲ್ಲಿ ಹುಲ್ಲು ಕೂಡ ಹುಟ್ಟುವುದಿಲ್ಲ. ಅವುಗಳಿಂದ ಪ್ರಾಣಿಪಕ್ಷಿ ಭೂಮಿಗೂ ಒಳಿತಾಗುವುದಿಲ್ಲ. ಅವು ಹಣ ತಂದು ಕೊಡುತ್ತವೆ ಎಂಬ ಉದ್ದೇಶಕ್ಕಷ್ಟೆ ನಾವು ಅವುಗಳನ್ನು ಬೆಳೆಯುತ್ತಿದ್ದೇವೆ. ನಮಗೆ ಪರಿಸರ ಸ್ನೇಹಿ ಅರಣ್ಯ ಬೇಕಾಗಿಲ್ಲ. ಇದರ ಪರಿಣಾಮವೇ ಇವತ್ತು ವನ್ಯಪ್ರಾಣಿಗಳು ಕಾಡು ಬಿಟ್ಟು ನಾಡಿನತ್ತ ಬರುವಂತಾಗಿದೆ.

ಪ್ರತಿವರ್ಷ ಪರಿಸರ ದಿನಾಚರಣೆಯನ್ನು ಗಿಡನೆಡುವುದರ ಮೂಲಕ ಆಚರಿಸುತ್ತಿದ್ದೇವೆ. ಸಾವಿರಾರು ಗಿಡಗಳನ್ನು ನೆಡುತ್ತಿದ್ದೇವೆ. ಇವತ್ತಿನ ಪರಿಸ್ಥಿತಿಯಲ್ಲಿ ಗಿಡವನ್ನು  ನೆಡುವುದಕ್ಕಿಂತ ನೆಟ್ಟ ಗಿಡವನ್ನು ಸಂರಕ್ಷಿಸುವುದು ಅಗತ್ಯವಾಗಿದೆ. ಹಾಗೆ ಮಾಡಿದರೆ ಮಾತ್ರ ಪರಿಸರ ದಿನಾಚರಣೆಗೆ ಅರ್ಥ ಬರುತ್ತದೆ.

Ashika S

Recent Posts

ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…

22 seconds ago

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

10 mins ago

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

21 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

38 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

49 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

1 hour ago