ಪರಿಸರ

ಚಿಕ್ಕಮಗಳೂರು: ಬಿಸಿಲ ಧಗೆ ಆರಂಭವಾಗ್ತಿದ್ದಂತೆ ಮಲೆನಾಡಿನ ಅರಣ್ಯ ಸಂಪತ್ತು ಬೆಂಕಿಗಾಹುತಿ

ಚಿಕ್ಕಮಗಳೂರು: ದೇಶದ ಪಶ್ಚಿಮ ಘಟ್ಟಗಳ ಪೈಕಿ ರಾಜ್ಯದ ಚಾರ್ಮಾಡಿ ಘಾಟ್‌ಗೆ ಅಗ್ರಸ್ಥಾನ. ಅತ್ಯಂತ ಸೂಕ್ಷ್ಮ ಅರಣ್ಯ ಪ್ರದೇಶ. ಪ್ರವಾಸಿಗರ ಹಾಟ್‌ಸ್ಪಾಟ್. ಆದ್ರೀಗ, ಈ ಪ್ರದೇಶಲ್ಲಿ ಬಿಸಿಲ ಧಗೆಗೆ ಬೆಂಕಿಯ ರುದ್ರನರ್ತನ ಆರಂಭವಾಗಿದೆ. ಕಳೆದೊಂದು ವಾರದಿಂದ ಪ್ರಕೃತಿ ಸೌಂದರ್ಯ ಸೇರಿದಂತೆ ವನ್ಯಜೀವಿ ತಾಣವೂ ಬೆಂಕಿಯ ಕೆನ್ನಾಲಿಗೆಯಿಂದ ಹೊತ್ತಿ ಉರಿಯುತ್ತಿದೆ.

ಅತ್ಯಮೂಲ್ಯ ಸಸ್ಯ ಸಂಪತ್ತು ನಾಶ : ನೂರಾರೂ ವರ್ಷಗಳಿಂದ ಬೆಳೆದು ನಿಂತಿದ್ದ ಅತ್ಯಮೂಲ್ಯ ಸಸ್ಯ ಸಂಪತ್ತು ನಾಶ ವಾಗ್ತಿದೆ. ವಿಶ್ವದಾದ್ಯಂತ ಮತ್ತೆಲ್ಲೂ ಸಿಗದ ಅಪರೂಪದ ಔಷಧಿ ಸಸ್ಯ, ಬಿದಿರು, ಅಪ ರೂಪದ ಕಾಡು ಜಾತಿಯ ಮರಗಳು ಸುಟ್ಟು ಕರುಕಲಾಗುತ್ತಿವೆ. ಬೆಂಕಿಯ ಕೆನ್ನಾಲಿಗೆಗೆ ವನ್ಯಜೀವಿಗಳು ನಾಡಿನತ್ತ ಹೆಜ್ಜೆ ಹಾಕ್ತಿವೆ.

ಬೆಟ್ಟ-ಗುಡ್ಡಗಳಲ್ಲಿ ಕಳೆದ ಮೂರು ದಿನಗಳಿಂದ ಅರಣ್ಯ ಪ್ರದೇಶ ನಿರಂತರವಾಗಿ ಹೊತ್ತಿ ಉರಿಯುತ್ತಿರುವುದರಿಂದ ನೂರು ಎಕರೆಗೂ ಅಧಿಕ ಅರಣ್ಯ ಪ್ರದೇಶ ನಾಶವಾಗಿದೆ. ಸಾವಿರಾರು ಪ್ರಾಣಿಪಕ್ಷಿಗಳು ಬೆಂಕಿಯಲ್ಲಿ ಬೆಂದು ಉಸಿರು ಚೆಲ್ಲಿವೆ ಎಂದು ಅಂದಾಜಿಸಲಾಗಿದೆ. ಬೆಟ್ಟ-ಗುಡ್ಡಗಳ ತುದಿಯಲ್ಲಿ ಬೆಂಕಿ ಉರಿಯುತ್ತಿದ್ದು ಅಲ್ಲಿಗೆ ಅಗ್ನಿಶಾಮಕ ವಾಹನ ಕೂಡ ಹೋಗಲಾಗದೆ ಅಧಿಕಾರಿಗಳು ಬೆಂಕಿ ನಂದಿಸಲು ಹರಸಾಹಸ ಪಡುವಂತಾಗಿದೆ. ಈ ಮಧ್ಯೆ, ಅರಣ್ಯ ಇಲಾಖೆಯ ಸೂಕ್ತ ಸಿಬ್ಬಂದಿಗಳ ಕೊರತೆ ಕೂಡ ಬೆಂಕಿ ಸೂಕ್ತ ಸಮಯದಲ್ಲಿ ಬೆಂಕಿಯನ್ನ ನಂಧಿಸಲು ಸಾಧ್ಯವಾಗ್ತಿಲ್ಲ ಎಂಬ ಮಾತುಗಳು ಇವೆ.

ಇಷ್ಟೆ ಅಲ್ಲದೆ, ಮೂಡಿಗೆರೆಯ ಚಾರ್ಮಾಡಿ ಘಾಟ್, ಚಿಕ್ಕಮಗಳೂರು ತಾಲೂಕಿನ ಚುರ್ಚೆಗುಡ್ಡ ಮೀಸಲು ಅರಣ್ಯ, ಮುಳ್ಳಯ್ಯನಗಿರಿ ಬೆಟ್ಟ, ಸಿಂದಿಗೆರೆ ಮೀಸಲು ಅರಣ್ಯ, ಎನ್.ಆರ್.ಪುರದ ಬಸವನಕೋಟೆ ಕಾಡು ಸೇರಿದಂತೆ ಜಿಲ್ಲೆಯಲ್ಲಿ ನೂರಾರು ಎಕರೆ ಅರಣ್ಯ ಬೆಂಕಿಗೆ ಬಲಿಯಾಗಿದೆ. ಅರಣ್ಯಕ್ಕೆ ಬೆಂಕಿ ಬೀಳುತ್ತಿದ್ದು ಭೂಮಿಯ ತಾಪ ಹೆಚ್ಚಾಗಿ ಪ್ರಾಣಿಪಕ್ಷಿಗಳು ನಾಡಿನತ್ತ ಮುಖ ಮಾಡಿವೆ. ಮರದಪೊಟರೆ, ಭೂಮಿಯೊಳಗೆ ವಾಸ ಮಾಡುವ ಕಾಳಿಂಗ ಸರ್ಪಗಳು ನಾಡಿನತ್ತ ಮುಖ ಮಾಡಿವೆ.

ಚಾರ್ಮಾಡಿಗೆ ಅಂಟಿಕೊಂಡಂತಿರೋ ತುರುವೆ ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪ ಬದುಕುಳಿಯಲು ಹವಣಿಸುತ್ತಿದ್ದಾಗ ಸೆರೆಯಾಗಿದೆ. ಇನ್ನು ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಅರಣ್ಯಕ್ಕೆ ಬೆಂಕಿ ಕೊಡುತ್ತಿದ್ದ ವ್ಯಕ್ತಿಯೂ ಬಂಧನವಾಗಿದ್ದಾನೆ. ಆದ್ರೆ, ಕಾಡ್ಗಿಚ್ಚು, ಬೆಂಕಿ ಹಚ್ಚುವ ಸ್ಥಳಿಯರ ಹುಚ್ಚನಿಂದ ಜಿಲ್ಲೆಯಲ್ಲಿ ಸಾವಿರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಕಳೆದ ಎರಡ್ಮೂರು ವರ್ಷಗಳಿಂದ ಮಲೆನಾಡಲ್ಲಿ ಭಾರೀ ಮಳೆ ಬಿದ್ದರು, ಈ ಬಾರಿ ಬಿಸಿಲ ಧಗೆಗೆ ಕಾಡು ಸುಟ್ಟು ಕರಕಲಾಗ್ತಿದೆ. ಒಟ್ಟಾರೆ, ಪ್ರತಿ ವರ್ಷವೂ ನಮ್ಮ ಅಪರೂದ ವನ್ಯ ಜೀವಿತಾಣ ಬೆಂಕಿಯ ನರ್ತನದಿಂದ ವಿನಾಶಕ್ಕೆ ಕಾರಣವಾಗ್ತಿದೆ. ಆದ್ರೆ, ಅಧಿಕಾರಿಗಳು ಮಾತ್ರ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ.

Ashika S

Recent Posts

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

34 seconds ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

15 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

33 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago