News Karnataka Kannada
Monday, May 06 2024
ಪರಿಸರ

ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

World Environment Day at Sullia Nehru Memorial PU College
Photo Credit : News Kannada

ಸುಳ್ಯ : ನಾವು ಪರಿಸರಕ್ಕೆ ಪೂರಕವಾದ ರೀತಿಯಲ್ಲಿ ಬದುಕಬೇಕು. ಭೂಮಿಯಲ್ಲಿ ತಾಪಮಾನ ಹೆಚ್ಚುತ್ತಿದ್ದು,ದಟ್ಟ ಕಾಡಿನಲ್ಲಿ ಗಿಡಗಳು ಸುಟ್ಟು ಹೋಗುತ್ತಿದೆ , ಪರಿಸರ ಕಾಳಜಿ ಪ್ರಾಯೋಗಿಕವಾಗಿ ಆಗಬೇಕಿದೆ. ಪ್ಲಾಸ್ಟಿಕ್ ನಿರ್ಮೂಲನೆಯಾಗಬೇಕು ಎಂದು ಸುಳ್ಯ ನೆಹರು ಮೆಮೋರಿಯಲ್ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ ಸಂಜೀವ ಕುದ್ಪಾಜೆ ಹೇಳಿದರು.

ಅವರು ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆಯ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ಅಭಿವೃದ್ಧಿಯ ನೆಪದಲ್ಲಿ ಪರಿಸರ ಹಾಳಾಗುತ್ತಿದೆ. ಶುದ್ಧ ಆಹಾರ, ಗಾಳಿ,ಪರಿಸರವನ್ನು ಶುಭ್ರವಾಗಿಟ್ಟು ಕಾಪಾಡಿ ಮುಂದಿನ ಜನಾಂಗಕ್ಕೆ ಬಿಟ್ಟು ಹೋಗುವ ನಿಟ್ಟಿನಲ್ಲಿ ಜಾಗೃತಿ ಅಗತ್ಯ ಎಂದು ಕಾಲೇಜಿನ ಪ್ರಾಚಾರ್ಯರಾದ ಹರಿಣಿ ಪುತ್ತೂರಾಯ ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ರೇಷ್ಮಾ ಎಂ ಎಂ, ಹರೀಶ ಸಿ,ವಿಜ್ಞಾನ ಸಂಘದ ಸಂಚಾಲಕಿ ರತ್ನಾವತಿ ಬಿ ಉಪಸ್ಥಿತರಿದ್ದರು .ದ್ವಿ ವಿಜ್ಞಾನ ವಿಭಾಗದ ಅಭಿಜ್ಞಾ,ಮೈತ್ರಿ ಪ್ರಾರ್ಥಿಸಿದರು.ವಿದ್ಯಾರ್ಥಿಗಳಾದ ಅಕ್ಷಯ್ ರೈ, ಆಜ್ಞಾ ಐಪಾಲ್, ಪಿ.ಆರ್ ಸ್ಮಿತಾ ಅವರು ವಿಶ್ವ ಪರಿಸರ ದಿನದ ಬಗ್ಗೆ ಮಾತನಾಡಿದರು.

ವಿದ್ಯಾರ್ಥಿ ಅಭಿಷೇಕ್ ಎಂ, ಮತ್ತು ಅನನ್ಯ ಎ ಕಾರ್ಯಕ್ರಮ ನಿರ್ವಹಿಸಿದರು.ಪರಿಸರ ಸ್ನೇಹಿ ಮಾದರಿ, ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು