Categories: ಪ್ರವಾಸ

ಕರ್ನಾಟಕದ ಗಗನಚುಂಬಿ ‘ಶಿವಗಂಗೆ’ ಗೆ ಒಮ್ಮೆ ಭೇಟಿ ನೀಡಿ

ನೀವು ಸಾಹಸಿಗರೂ ಆಗಿದ್ದು, ದೈವಭಕ್ತರೂ ಹೌದಾದಲ್ಲಿ ಈ ವೀಕೆಂಡ್ ಎಂಜಾಯ್ ಮಾಡಲು ಶಿವಗಂಗೆಯತ್ತ ಹೊರಡಿ. ದಕ್ಷಿಣ ಕಾಶಿ ಎಂದೇ ಹೆಸರಾದ ಶಿವಗಂಗೆ ಬೆಂಗಳೂರಿನಿಂದ ಕೇವಲ 60 ಕಿಲೋಮೀಟರ್ ದೂರದಲ್ಲಿದೆ. ಶಿವಗಂಗೆ ಕ್ಷೇತ್ರವು ಒಂದು ಸಾಹಸ ಮತ್ತು ಭಕ್ತಿಯ ಕೇಂದ್ರವಾಗಿದೆ. ಸುಮಾರು 804.8 ಮೀಟರ್ ಅಥವಾ 2640.3 ಅಡಿ ಎತ್ತರವಿರುವ ಸುಂದರ ಪರ್ವತ ಶಿಖರವನ್ನು ಸರಿ ಸುಮಾರು 2ಕಿಲೋ ಮೀ. ಕ್ರಮಿಸಿ, ಒಂದುವರೆ ಯಿಂದ 2ಗಂಟೆ ಅವಧಿ ಬೇಕು ನೀವೂ ಈ ಬೆಟ್ಟದ ತುದಿ ತಲುಪಲು.

ಬೆಂಗಳೂರಿನಿಂದ ತುಮಕೂರು ರಸ್ತೆ ಮಾರ್ಗದಲ್ಲಿ ನೆಲಮಂಗಲಕ್ಕೆ ಹೋಗಿ, ಅಲ್ಲಿಂದ ಹಾಸನ ರೋಡ್‌ಗೆ ತಿರುಗಿದರೆ ಸೋಲೂರ ಬಳಿಕ ಸಿಗುವುದೇ ಶಿವಗಂಗೆ.


ಇತಿಹಾಸ:
16ನೇ ಶತಮಾನದಲ್ಲಿ ಈ ಗುಡ್ಡವು ಶಿವಪ್ಪ ನಾಯಕ ಕೋಟೆಯಾಯಿತು. ಮುಂದೆ ಬೆಂಗಳೂರಿನ ಸಂಸ್ಥಾಪಕ, ಮಾಗಡಿ ಕೆಂಪೇಗೌಡ ಕೋಟೆಯನ್ನು ಸುಧಾರಿಸಿದರು ಮತ್ತು ಈ ಕೋಟೆಯಲ್ಲಿ ತನ್ನ ನಿಧಿಯ ಭಾಗವನ್ನು ಉಳಿಸಿಕೊಂಡರು ಎನ್ನಲಾಗುತ್ತದೆ.

ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಿಂದ 6 ಕಿ.ಮೀ ದೂರದಲ್ಲಿ ಶಿವಗಂಗೆ ಬೆಟ್ಟ ಕಾಣಿಸುತ್ತದೆ. ಪಶ್ಚಿಮದಿಂದ ನೋಡಿದರೆ ಇಡೀ ಬೆಟ್ಟವೇ ಶಿವಲಿಂಗದ ಆಕಾರದಲ್ಲಿ ಕಾಣಿಸುತ್ತದೆ. ಪೂರ್ವದಿಂದ ನೋಡಿದರೆ ಹೋರಿಯಂತೆಯೂ, ಉತ್ತರದಿಂದ ಸರ್ಪದಂತೆಯೂ ಹಾಗೂ ದಕ್ಷಿಣದಿಂದ ಗಣೇಶನಂತೆಯೂ ಕಾಣಿಸುತ್ತದೆ. ಈ ಬೆಟ್ಟದ ಮೇಲೆ ಗಂಗಾಧರೇಶ್ವರ ಹಾಗೂ ಹೊನ್ನಮ್ಮದೇವಿ ದೇವಾಲಯಗಳಿವೆ.

ಈ ಬೆಟ್ಟದ ಮೇಲೆ ನೀರಿನ ಮೂಲಗಳಿದ್ದು, ಪುರಾಣಗಳ ಪ್ರಕಾರ ಈ ನೀರು ಗಂಗೆಯ ಸ್ವರೂಪ. ಅದೇ ಕಾರಣಕ್ಕೆ ಈ ಸ್ಥಳಕ್ಕೆ ಶಿವಗಂಗೆ ಎಂಬ ಹೆಸರು ಬಂದಿದೆ. ಗಂಗೆಯೂ ಇದ್ದು, ಹಲವು ಪುಟ್ಟ ಪುಟ್ಟ ದೇವಾಲಯಗಳೂ ಇರುವುದರಿಂದ ಈ ಸ್ಥಳಕ್ಕೆ ದಕ್ಷಿಣಕಾಶಿ ಎಂಬ ಉಪಮೆಯೂ ಸೇರಿಕೊಂಡಿದೆ.

ಶಿವಗಂಗೆ ಬೆಟ್ಟದ ತುದಿಯಲ್ಲಿ ಏಕಶಿಲೆಯಿಂದ ನಿರ್ಮಿಸಲಾದ ಬೃಹತ್ ನಂದಿ ವಿಗ್ರಹವಿದೆ. ಇದರಿಂದ ಮುಂದೆ ಸಾಗಿದರೆ ಪಾತಾಳಗಂಗೆ ದೇವಾಲಯ ಸಿಗುತ್ತದೆ. ಇಲ್ಲಿ ದೇವಾಲಯದ ಕೆಳಗೆ ಜಲ ಹರಿಯುತ್ತದೆ. ಇದಲ್ಲದೆ ಒಳಕಲ್ ತೀರ್ಥ ಕೂಡಾ ಜನರನ್ನು ಆಕರ್ಷಿಸುವ ಕೇಂದ್ರ. ಇಲ್ಲಿ ಸಣ್ಣದೊಂದು ಬಿಲದಂಥ ರಚನೆಯಲ್ಲಿ ಕೈ ಹಾಕಬೇಕು. ಯಾರ ಕೈಗೆ ನೀರು ತಾಕುತ್ತದೋ ಅವರು ಪುಣ್ಯ ಮಾಡಿದ್ದಾರೆ ಹಾಗೂ ನೀರು ತಾಕದವರು ಪಾಪಾತ್ಮರು ಎಂಬ ನಂಬಿಕೆ ಇದೆ.

ಇಲ್ಲಿ ಪ್ರಪಂಚದ ಅದ್ಭುತವೊಂದು ನಡೆಯುತ್ತೆ. ನಾವೆಲ್ಲ ನೋಡಿರೋದು ಬೆಣ್ಣೆಯಿಂದ ತುಪ್ಪ ಬರುತ್ತೆ ಅಂತಾ. ಆದ್ರೆ, ಇಲ್ಲಿ ಶಿವ ಲಿಂಗದ ಮೇಲೆ ತುಪ್ಪವನ್ನ ಹಾಕಿದರೆ ಅದು ಬೆಣ್ಣೆಯಾಗಿ ಪರಿವರ್ತನೆ ಆಗುತ್ತೆ. ಇದೊಂದು ನಿಜಕ್ಕೂ ಅಸಕ್ತಿದಾಯಕ ಪವಾಡ. ಅದರಲ್ಲೂ ಅಭಿಷೇಕದ ಸಮಯದಲ್ಲಿ ಭಕ್ತರು ಈ ಪವಾಡವನ್ನು ನೋಡಬಹುದು. ಅಷ್ಟೇ ಅಲ್ಲ ಬೆಣ್ಣೆಯಾಗುವ ಈ ತುಪ್ಪಕ್ಕೆ ಔಷಧೀಯ ಶಕ್ತಿ ಇದೆ ಮತ್ತು ಅನೇಕ ಖಾಯಿಲೆಗಳನ್ನು ಗುಣಪಡಿಸಬಹುದು ಎಂಬುದು ಇಲ್ಲಿ ನಂಬಿಕೆ.

ಈ ಸ್ಥಳದ ಗುಡ್ಡಗಾಡು ವೈಶಿಷ್ಟ್ಯವು ಸಾಕಷ್ಟು ಚಾರಣಿಗರನ್ನು ಸೆಳೆಯುತ್ತದೆ. ಇಲ್ಲಿ ರಾಕ್ ಕ್ಲೈಂಬಿಂಗ್‌ಗೆ ಕೂಡಾ ಅವಕಾಶವಿದ್ದು, ಇದರಿಂದ ಚಾರಣಿಗರ ಉತ್ಸಾಹ ದುಪ್ಪಟ್ಟಾಗಲಿದೆ. ಬೆಟ್ಟದ ಬುಡದಿಂದ ಸುಮಾರು 2 ಕಿಲೋಮೀಟರ್‌ನಷ್ಟು ಮೇಲಕ್ಕೆ ಚಾರಣ ಮಾಡಲು ಅವಕಾಶವಿದ್ದು, ಶೇ.80ರಷ್ಟು ಚಾರಣ ಸುಲಭವಾಗಿದ್ದರೆ, ಉಳಿದ 20 ಭಾಗ ಸ್ವಲ್ಪ ಸವಾಲಿನದಾಗಿದೆ. ಇಲ್ಲಿ ಚಾರಣಿಗರು ಎದುರಿಸುವ ಮತ್ತೊಂದು ಸವಾಲು ಮಂಗಗಳದ್ದು. ಅವು ನಿಮ್ಮಲ್ಲಿ ತಿನ್ನಲು ಏನಾದರೂ ಸಿಗಬಹುದೇ ಎಂಬ ಆಸೆಯಿಂದ ಹಿಂಬಾಲಿಸುವ ಜೊತೆಗೆ ದಾಳಿಯೂ ಮಾಡುತ್ತವೆ.

ಬೆಟ್ಟದ ಮೇಲೆ ನೋಡಬೇಕಾದ ಮತ್ತೊಂದು ಜಾಗ ನಾಟ್ಯ ರಾಣಿ ಶಾಂತಲೆಯು ಕೆಳಗೆ ಬಿದ್ದ ಜಾಗ. ಹಿಂದೆ ಈ ಸ್ಥಳವು ಹೊಯ್ಸಳ ರಾಜರ ನಿಯಂತ್ರಣದಲ್ಲಿತ್ತು ಮತ್ತು ವಿಷ್ಣುವರ್ಧನನ ಪತ್ನಿ ರಾಣಿ ಶಾಂತಲಾ, ಮಗನಿಗೆ ಜನ್ಮ ನೀಡಲಿಲ್ಲ ಎಂಬ ಖಿನ್ನತೆಯಿಂದ, ಈ ಬೆಟ್ಟದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡರು ಎಂಬ ನಂಬಿಕೆ ಇದೆ. ಹಾಗಾಗಿ ಶಾಂತಲಾ ಬಿದ್ದ ಆ ಸ್ಥಳವನ್ನು ಶಾಂತಲಾ ಡ್ರಾಪ್ ಅಂತಾನೆ ಕರೆಯುತ್ತಾರೆ. ಈ ಜಾಗ ಅಷ್ಟೇ ಭಯಾನಕವಾಗಿದೆ, ಹಾಗೂ ನೋಡಲು ಅದ್ಭುತವಾಗಿದೆ. ಈಗ ಕಂಬಿಗಳನ್ನ ಹಾಕಿದ್ದಾರೆ.

ಇನ್ನೂ ಇಲ್ಲಿ ಶಂಕರಾಚಾರ್ಯರ ಶಾಖಾ ಮಠವಿದೆ. ಅಷ್ಟೆ ಅಲ್ಲ ಶಾರದಾಂಬೆಯ ದೇವಸ್ಥಾನವೂ ಇದೆ. 108 ಲಿಂಗಗಳನ್ನುಳ್ಳ ಅಗಸ್ತ್ಯರ ದೇವಸ್ಥಾನವೂ ಇದೆ. ಇಲ್ಲೊಂದು ಪಾತಾಳ ಗಂಗೆ ಇದ್ದು ಸದಾ ನೀರಿನಿಂದ ತುಂಬಿರುತ್ತೆ. ವಿಚಿತ್ರವೆಂದರೆ ಇಲ್ಲಿ ಮಳೆಗಾಲದಲ್ಲಿ ನೀರು ಆಳಕ್ಕೆ ಹೋಗಿರುತ್ತೆ. ಬೇಸಿಗೆಯಲ್ಲಿ ನೀರು ಹೆಚ್ಚಾಗಿ ಮೇಲಕ್ಕೆ ಬರುತ್ತೆ. ಬೆಟ್ಟದ ಮೇಲಿದ್ದರು ಸಹ ಬೇಸಿಗೆಯಲ್ಲೂ ಸಹ ಇಲ್ಲಿ ನೀರು ಕಡಿಮೆ ಆಗುವುದೇ ಇಲ್ಲ.

ಇಲ್ಲೇ ಹತ್ತಿರದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯವಿದೆ. ತನ್ನ ವಾಸ್ತುಕಲೆಯಿಂದ ಪ್ರಸಿದ್ಧವಾಗಿರುವ ಈ ಹಳೆಯ ದೇವಾಲಯವು ಕೊರಟಗೆರೆಯ ಪ್ರಮುಖ ದೇವಾಲಯವಾಗಿದೆ. ಇದಲ್ಲದೆ, ಶಿವಗಂಗೆಯಿಂದ 30 ಕಿಲೋಮೀಟರ್ ದೂರದಲ್ಲಿ ಸಿದ್ಧರ ಬೆಟ್ಟವಿದೆ. ಈ ಸ್ಥಳದಲ್ಲಿ 9000 ಶಿವನ ಭಕ್ತರು ಶಿವಾರಾಧನೆಯಲ್ಲಿ ತೊಡಗಿ ಮೋಕ್ಷ ಪಡೆದರು ಎಂಬ ಕತೆಯಿದೆ.

Ashitha S

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

28 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

30 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

54 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago