ನಾಗ್ಪುರ: ಕೆಲ ಶಕ್ತಿಗಳು ಭಾರತದ ಪ್ರತಿಷ್ಠೆಯನ್ನು ವಿಶ್ವಮಟ್ಟದಲ್ಲಿ ತಗ್ಗಿಸಲು ನಿರಂತರವಾಗಿ ಪ್ರಯತ್ನಿಸುತ್ತಿವೆ ಎಂದು ಆರ್ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಭಾಗವತ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂರನೇ ವರ್ಷದ ಅಧಿಕಾರಿಗಳ ತರಬೇತಿ ಕೋರ್ಸ್ (ಒಟಿಸಿ) ಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಹೆಸರಿಸದೆ ಈ ಬಗ್ಗೆ ಉಲ್ಲೇಖಿಸಿರುವ ಅವರು ಇಂತಹ ಅವಿವೇಕಿಗಳ ಮಾತನ್ನು ಸಾಮಾನ್ಯ ಜನರು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ ಎಂದು ಹೇಳಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಕ್ಯಾಲಿಫೋರ್ನಿಯಾದಲ್ಲಿ ಭಾಷಣ ಮಾಡುವಾಗ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದರು.
ಪ್ರಸ್ತುತ ಆಡಳಿತದ ವಿರುದ್ಧ ಧ್ವನಿ ಎತ್ತುವ ಯಾರನ್ನಾದರೂ ಕತ್ತುಹಿಸುಕಲು ಕೇಂದ್ರ ಸರ್ಕಾರವು ಕೇಂದ್ರ ಜಾರಿ ಸಂಸ್ಥೆಗಳ ಮೂಲಕ ಪ್ರಯತ್ನಿಸುತ್ತದೆ. ಆದರೆ ಇಂತಹ ನೀತಿಗಳ ವಿರುದ್ಧ ಭಾರತದಲ್ಲಿ ಪ್ರತಿಪಕ್ಷಗಳು ಸಮರ್ಥ ಹೋರಾಟ ನಡೆಸುತ್ತಿವೆ ಎಂದು ಹೇಳಿದ್ದರು.
ವಿದೇಶಿ ನೆಲದಲ್ಲಿ ಕೆಲ ವ್ಯಕ್ತಿಗಳ ಇಂತಹ ಹೇಳಿಕೆ ಅಹಂಕಾರದ ಪರಮಾಧಿಯಾಗಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಭಾಗವತ್ ಹೇಳಿದ್ದಾರೆ.