News Karnataka Kannada
Sunday, April 28 2024
ಸಂಪಾದಕೀಯ

ನವದೆಹಲಿ: ವಿಮಾನ ತುರ್ತು ದ್ವಾರ ತೆರೆಯಲು ಯತ್ನಿಸಿದ ಅಮಲೇರಿದ ಪ್ರಯಾಣಿಕ

ಇಂಡಿಗೋ ಸಂಸ್ಥೆ ಲಕ್ಷದ್ವೀಪದ ಅಗತ್ತಿ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ನೇರ ಫ್ಲೈಟ್ ಸೇವೆಯನ್ನು ಮಾರ್ಚ್ 31ರಿಂದ ಆರಂಭಿಸುತ್ತಿದೆ.
Photo Credit : Facebook

ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪಾನಮತ್ತ ಪ್ರಯಾಣಿಕನೊಬ್ಬ ತುರ್ತು ಬಾಗಿಲು ತೆರೆಯಲು ಪ್ರಯತ್ನಿಸಿದ ಘಟನೆ ನಡೆದಿದೆ. ಈ ಕುರಿತು ಸಂಬಂಧಪಟ್ಟ ಸಂಸ್ಥೆಗಳಿಗೆ ದೂರು ನೀಡಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

“ದೆಹಲಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಇಂಡಿಗೋ 6E 308 ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಮಲೇರಿದ ಸ್ಥಿತಿಯಲ್ಲಿ ತುರ್ತು ನಿರ್ಗಮನದ ದ್ವಾರ ತೆರೆಯಲು ಪ್ರಯತ್ನಿಸಿದರು. ಇದನ್ನು ಗಮನಿಸಿದ ಸಿಬ್ಬಂದಿ ಕ್ಯಾಪ್ಟನ್‌ಗೆ ಎಚ್ಚರಿಕೆ ನೀಡಿ, ಆ ಪ್ರಯತ್ನವನ್ನು ತಡೆದಿದ್ದಾರೆ ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ ನಂತರ ಪ್ರಯಾಣಿಕರನ್ನು ಸಿಐಎಸ್ಎಫ್ಗೆ ಹಸ್ತಾಂತರಿಸಲಾಗಿದೆ” ಎಂದು ವಕ್ತಾರರು ತಿಳಿಸಿದ್ದಾರೆ.

ಮಾರ್ಚ್ ಅಂತ್ಯದಲ್ಲಿ, ದುಬೈ ಮುಂಬೈಗೆ ಇಂಡಿಗೋ ವಿಮಾನದಲ್ಲಿ ಇಬ್ಬರು ಪ್ರಯಾಣಿಕರು ಸಿಬ್ಬಂದಿ ಎಚ್ಚರಿಕೆಗಳ ಹೊರತಾಗಿಯೂ ಮದ್ಯಪಾನ ಮಾಡಿ, ವಿಮಾನ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರನ್ನು ಅವಾಚ್ಯವಾಗಿ ನಿಂದಿಸಿರುವುದನ್ನು ನೆನಪಿಸಿಕೊಳ್ಳಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು