ನವದೆಹಲಿ: ವಿಮಾನ ತುರ್ತು ದ್ವಾರ ತೆರೆಯಲು ಯತ್ನಿಸಿದ ಅಮಲೇರಿದ ಪ್ರಯಾಣಿಕ

ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪಾನಮತ್ತ ಪ್ರಯಾಣಿಕನೊಬ್ಬ ತುರ್ತು ಬಾಗಿಲು ತೆರೆಯಲು ಪ್ರಯತ್ನಿಸಿದ ಘಟನೆ ನಡೆದಿದೆ. ಈ ಕುರಿತು ಸಂಬಂಧಪಟ್ಟ ಸಂಸ್ಥೆಗಳಿಗೆ ದೂರು ನೀಡಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

“ದೆಹಲಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಇಂಡಿಗೋ 6E 308 ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಮಲೇರಿದ ಸ್ಥಿತಿಯಲ್ಲಿ ತುರ್ತು ನಿರ್ಗಮನದ ದ್ವಾರ ತೆರೆಯಲು ಪ್ರಯತ್ನಿಸಿದರು. ಇದನ್ನು ಗಮನಿಸಿದ ಸಿಬ್ಬಂದಿ ಕ್ಯಾಪ್ಟನ್‌ಗೆ ಎಚ್ಚರಿಕೆ ನೀಡಿ, ಆ ಪ್ರಯತ್ನವನ್ನು ತಡೆದಿದ್ದಾರೆ ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ ನಂತರ ಪ್ರಯಾಣಿಕರನ್ನು ಸಿಐಎಸ್ಎಫ್ಗೆ ಹಸ್ತಾಂತರಿಸಲಾಗಿದೆ” ಎಂದು ವಕ್ತಾರರು ತಿಳಿಸಿದ್ದಾರೆ.

ಮಾರ್ಚ್ ಅಂತ್ಯದಲ್ಲಿ, ದುಬೈ ಮುಂಬೈಗೆ ಇಂಡಿಗೋ ವಿಮಾನದಲ್ಲಿ ಇಬ್ಬರು ಪ್ರಯಾಣಿಕರು ಸಿಬ್ಬಂದಿ ಎಚ್ಚರಿಕೆಗಳ ಹೊರತಾಗಿಯೂ ಮದ್ಯಪಾನ ಮಾಡಿ, ವಿಮಾನ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರನ್ನು ಅವಾಚ್ಯವಾಗಿ ನಿಂದಿಸಿರುವುದನ್ನು ನೆನಪಿಸಿಕೊಳ್ಳಬಹುದು.

Ashika S

Recent Posts

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

19 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

20 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

35 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

38 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

1 hour ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

1 hour ago