News Karnataka Kannada
Monday, April 29 2024
ಸಂಪಾದಕೀಯ

ನವದೆಹಲಿ: ಕರಾವಳಿ ಬಿಜೆಪಿ ಹೊಸ ಮುಖಗಳ ಪ್ರಯೋಗಶಾಲೆ

ಕಾಂಗ್ರೆಸ್  ಸರ್ಕಾರದ ವಿರುದ್ಧ ಎಕ್ಸ್ ಖಾತೆಯಲ್ಲಿ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ, ರಾಜ್ಯದಲ್ಲಿ ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿಯಾಗಿದೆ ಎಂದು ವ್ಯಂಗ್ಯವಾಡಿದೆ.
Photo Credit : Facebook

ನವದೆಹಲಿ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆಗೊಳಿಸಲಾಗಿದೆ. ಬಿಜೆಪಿ ಹಲವು ಪ್ರಯೋಗಗಳನ್ನು ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಮಾಡಲು ಮುಂದಾಗಿದೆ. ಹಲವು ಅನಿರೀಕ್ಷಿತ ಹೆಸರುಗಳು ಪಟ್ಟಿಯಲ್ಲಿ ಕಾಣಿಸಿಕೊಂಡಿವೆ.

ದೊಡ್ಡ ಮಟ್ಟದ ರಿಸ್ಕ್‌ ತೆಗೆದುಕೊಳ್ಳಲು ಬಿಜೆಪಿ ಮುಂದಾಗಿರುವುದು ಅಭ್ಯರ್ಥಿಗಳ ಪಟ್ಟಿಯಿಂದ ಸ್ಪಷ್ಟವಾಗುತ್ತದೆ. ಅಂತೆಯೇ ಕೆಲವು ರಾಜಕೀಯ ಘಟಾನುಘಟಿಗಳನ್ನು ಕಟ್ಟಿ ಹಾಕಲು ಸಮರ್ಥ ಹುರಿಯಾಳುಗಳನ್ನು ಕಣಕ್ಕಿಳಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ಆರ್‌. ಅಶೋಕ್‌, ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಅವರಂಥ ದಿಗ್ಗಜರನ್ನು ಬಿಜೆಪಿ ಕಣಕ್ಕಿಳಿಸಿದೆ. ಇದು ಎಲ್ಲ ಲೆಕ್ಕಾಚಾರವನ್ನು ಮೀರಿದ ನಡೆಯಾಗಿದ್ದು, ಈ ಸಲದ ಚುನಾವಣೆಯನ್ನು ಹೈವೋಲ್ಟೇಜ್‌ ಮಾಡಲಿದೆ. ವಿರೋಧ ಪಕ್ಷದ ನಾಯಕರು ತಮ್ಮ ಕ್ಷೇತ್ರಗಳಿಗೇ ಹೆಚ್ಚು ಗಮನಹರಿಸುವಂತೆ ಮಾಡುವ ತಂತ್ರಗಾರಿಕೆ ಇದು.

ರಾಜ್ಯದಲ್ಲಿ ಹೊಸ ತಲೆಮಾರಿನ ನಾಯಕತ್ವ ಬಂದಿದೆ ಎಂದು ಹೇಳುವ ಮೂಲಕ ಹೊಸ ಅಭ್ಯರ್ಥಿಗಳಿಗೆ ಆದ್ಯತೆ ನೀಡಿರುವ ಸುಳಿವನ್ನು ಸುದ್ದಿಗೋಷ್ಠಿಯಲ್ಲಿ ಧರ್ಮೇಂದ್ರ ಸಿಂಗ್ ನೀಡಿದ್ದಾರೆ.

ಟಿಕೆಟ್ ಘೋಷಣೆಗೂ ಮುನ್ನ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬೆಳವಣಿಗೆಗಳು ರಾಜ್ಯದಲ್ಲಿ ಹಲವು ಮಂದಿ ಹಾಲಿ ಶಾಸಕರಿಗೆ ಹಾಗೂ ಹಿರಿಯ ನಾಯಕರಿಗೆ ಈ ಬಾರಿ ಖೋಕ್ ನೀಡಲಾಗುತ್ತದೆ ಎಂಬ ಸುಳಿವು ನೀಡಿತ್ತು.

ಕರಾವಳಿಯಲ್ಲಿ ವಿವಿಧ ಪ್ರಯೋಗ: ಕರಾವಳಿ ಪೈಕಿ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ದೊಡ್ಡ ಮಟ್ಟದ ಪ್ರಯೋಗಕ್ಕೆ ಮುಂದಾಗಿದೆ. ಮುಖ್ಯವಾಗಿ ಉಡುಪಿಯಿಂದ ಹಾಲಿ ಶಾಸಕ ರಘುಪತಿ ಭಟ್‌ ಅವರಿಗೆ ಟಿಕೆಟ್‌ ತಪ್ಪಿರುವುದು ಆಶ್ಚರ್ಯ ಉಂಟುಮಾಡಿದೆ. ಅವರ ಬದಲು ಮೊಗವೀರ ಮುಖಂಡ ಯಶ್‌ಪಾಲ್‌ ಸುವರ್ಣ ಅವರಿಗೆ ಟಿಕೆಟ್‌ ಸಿಕ್ಕಿದೆ.

ಕುಂದಾಪುರದಿಂದ ಚುನಾವಣೆ ನಿವೃತ್ತಿ ಘೋಷಿಸಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಅಪೇಕ್ಷೆಯಂತೆ ಅವರ ಶಿಷ್ಯ ಕಿರಣ್‌ ಕುಮಾರ್‌ ಕೊಡ್ಗಿಯವರಿಗೆ ಟಿಕೆಟ್‌ ಸಿಕ್ಕಿದೆ. ಕಾಪುವಿನಲ್ಲಿ ಲಾಲಾಜಿ ಮೆಂಡನ್‌ ಟಿಕೆಟ್‌ ವಂಚಿತರಾಗಿದ್ದು, ಗುರ್ಮೆ ಸುರೇಶ್‌ ಶೆಟ್ಟಿಯವರಿಗೆ ಟಿಕೆಟ್‌ ನೀಡಲಾಗಿದೆ. ಬೈಂದೂರು ಟಿಕೆಟ್‌ ಮೊದಲ ಪಟ್ಟಿಯಲ್ಲಿ ಘೋಷಣೆಯಾಗದಿರುವುದು ಈ ಕ್ಷೇತ್ರ ಬಿಜೆಪಿ ಪಾಲಿಗೆ ಜಟಿಲವಾಗಿದೆ ಎನ್ನುವುದರ ಸೂಚನೆ.

ಸುಳ್ಯ, ಪುತ್ತೂರು ಮಹಿಳೆಯರಿಗೆ: ದಕ್ಷಿಣ ಕನ್ನಡದಲ್ಲಿ ಸುಳ್ಯ ಮತ್ತು ಪುತ್ತೂರಿನಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸಲಾಗಿದೆ. ಸುಳ್ಯ ಮೀಸಲು ಕ್ಷೇತ್ರದಲ್ಲಿ ಸಚಿವ ಅಂಗಾರ ಬದಲಾಗಿ ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್‌ ನೀಡಲಾಗಿದೆ. ಪುತ್ತೂರಿನಿಂದ ಆಶಾ ತಿಮ್ಮಪ್ಪ ಅವರನ್ನು ಕಣಕ್ಕಿಳಿಸಲಾಗಿದೆ. ಈ ಎರಡು ಕ್ಷೇತ್ರಗಳ ಬಗ್ಗೆ ಹಿಂದಿನಿಂದಲೂ ಅಪಸ್ವರಗಳಿದ್ದವು. ಇಲ್ಲಿ ಮಹಿಳೆಯರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಹೊಸ ಪ್ರಯೋಗ ಮಾಡಿದೆ. ಉಳಿದಂತೆ ಬೆಳ್ತಂಗಡಿಯಿಂದ ಹರೀಶ್‌ ಪೂಂಜ, ಮೂಡಬಿದಿರೆಯಿಂದ ಉಮಾನಾಥ ಕೋಟ್ಯಾನ್‌, ಮಂಗಳೂರಿನಿಂದ ಸುರೇಶ್‌ ಕುಂಪಲ, ಮಂಗಳೂರು ನಗರ ಉತ್ತರದಿಂದ ಭರತ್‌ ಶೆಟ್ಟಿ, ಮಂಗಳೂರು ನಗರ ದಕ್ಷಿಣದಿಂದ ವೇದವ್ಯಾಸ ಕಾಮತ್‌, ಬಂಟ್ವಾಳದಿಂದ ರಾಜೇಶ್‌ ನಾಯ್ಕ್‌ ಟಿಕೆಟ್‌ ಪಡೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು