ವಾಷಿಂಗ್ಟನ್: ವಿಕರಣಶೀಲ ನೀರು ಸೋರಿಕೆ ಅಮೇರಿಕದಲ್ಲಿ ಆತಂಕ

ವಾಷಿಂಗ್ಟನ್: ಅಮೆರಿಕದ ಮಧ್ಯಪಶ್ಚಿಮ ರಾಜ್ಯವಾದ ಮಿನ್ನೇಸೋಟದ ಮೊಂಟಿಸೆಲ್ಲೋದಲ್ಲಿನ ಪರಮಾಣು ವಿದ್ಯುತ್ ಸ್ಥಾವರದಿಂದ ಸುಮಾರು 400,000 ಗ್ಯಾಲನ್ ವಿಕಿರಣಶೀಲ ನೀರು ಸೋರಿಕೆಯಾಗಿದೆ ಎಂಬ ವಿಷಯ ಬಹಿರಂಗವಾಗಿದೆ.

ಮೊಂಟೆಸೆಲ್ಲೊ ಪರಮಾಣು ಸ್ಥಾವರದಲ್ಲಿ ಟ್ರಿಟಿಯಂನಿಂದ ಕಲುಷಿತವಾಗಿರುವ ನೀರಿನ ಬಿಡುಗಡೆಯಾಗಿರುವ ಬಗ್ಗೆ ರಾಜ್ಯ ಏಜೆನ್ಸಿಗಳು ಮೇಲ್ವಿಚಾರಣೆ ನಡೆಸುತ್ತಿವೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಂತರ್ಜಲ ಗುಣಮಟ್ಟ ಮೇಲ್ವಿಚಾರಣೆಯ ಸಮಯದಲ್ಲಿ ಅಸಾಮಾನ್ಯ ಫಲಿತಾಂಶಗಳನ್ನು ಕಂಡುಕೊಂಡ ನಂತರ ನವೆಂಬರ್ 2022 ರ ಕೊನೆಯಲ್ಲಿ ಮಿನ್ನೇಸೋಟ ಡ್ಯೂಟಿ ಆಫೀಸರ್ ಮತ್ತು ಯುಎಸ್ ನ್ಯೂಕ್ಲಿಯರ್ ರೆಗ್ಯುಲೇಟರಿ ಕಮಿಷನ್‌ಗೆ ಸೋರಿಕೆಯಾಗಿರುವ ಬಗ್ಗೆ ವರದಿ ಮಾಡಲಾಗಿದೆ.

ವಿಕಿರಣಶೀಲ ನೀರಿನ ಸೋರಿಕೆ ವಿಷಯ ನಾಲ್ಕು ತಿಂಗಳ ಬಳಿಕ ತಿಳಿದುಬಂದಿದ್ದು, ಸಾರ್ವಜನಿಕ ಸುರಕ್ಷತೆ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಸೋರಿಕೆಯನ್ನು ಈಗಾಗಲೇ ನಿಲ್ಲಿಸಲಾಗಿದ್ದು, ಮಿಸಿಸಿಪ್ಪಿ ನದಿ ಅಥವಾ ನೀರಿನ ಮೂಲಗಳನ್ನು ತಲುಪಿಲ್ಲ ಎಂದು MPCA ಸುದ್ದಿ ಪ್ರಕಟಣೆಯಲ್ಲಿ ತಿಳಿಸಿದೆ. ಟ್ರಿಟಿಯಮ್ ಹೈಡ್ರೋಜನ್‌ನ ನೈಸರ್ಗಿಕ ವಿಕಿರಣಶೀಲ ರೂಪವಾಗಿದೆ. ಇದು ಪರಮಾಣು ವಿದ್ಯುತ್ ಸ್ಥಾವರಗಳಿಂದ ವಿದ್ಯುತ್ ಉತ್ಪಾದನೆಯ ಉಪಉತ್ಪನ್ನವಾಗಿದೆ.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

54 mins ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

1 hour ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

2 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

2 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

2 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

2 hours ago