Categories: ವಿಶೇಷ

ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ

ಭಾರತ ಸ್ವಾತಂತ್ರ್ಯ ಸಂಗ್ರಾಮದ ಸೇನಾನಿಗಳ ಸಾಲಿನಲ್ಲಿ ಪ್ರಮುಖವಾಗಿ ನಿಲ್ಲುವ, ಗಾಂಧಿ-ಅಂಬೇಡ್ಕರ್‌-ನೆಹರು ಅವರಷ್ಟೇ ಸ್ಮರಣೀಯರಾಗಿರುವ ನೇತಾಜಿ ಸುಭಾಷ್‌ ಚಂದ್ರಬೋಸ್‌ ಈಗಲೂ ಭಾರತದ ಜನಮಾನಸದಲ್ಲಿ ಜೀವಂತ. ತೀರಾ ಇತ್ತೀಚಿನವರೆಗೂ ಅವರು ಬದುಕಿದ್ದರು ಎಂದು ಒಂದಿಷ್ಟು ಜನ ನಂಬಿದ್ದರು.

ನೇತಾಜಿ ಅವರು 1897 ಜನವರಿ 23 ರಂದು ಒಡಿಶಾದಲ್ಲಿ ಜನಿಸುತ್ತಾರೆ.  ಭಾರತದ ಕ್ರಾಂತಿಕಾರಿ ಹೋರಾಟಗಾರರಲ್ಲಿ ಪ್ರಮುಖರು ಇವರು. ಇವರನ್ನು ನೇತಾಜಿ ಎಂದೇ ಕರೆಯಲಾಗುತ್ತದೆ. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಇವರು ಕೂಡಾ ಒಬ್ಬರು. ಇವರ ತಂದೆ ಜಾನಕೀನಾಥ ಬೋಸ್, ತಾಯಿ ಪ್ರಭಾವತಿ. ಈ ದಂಪತಿಗಳಿಗೆ 14 ಜನ ಮಕ್ಕಳು. ಅದರಲ್ಲಿ ಸುಭಾಷ್ ಚಂದ್ರ ಬೋಸ್ ಅವರು 9 ನೇಯವರು. ಇವರು ಎಮಿಲಿ ಶೆಂಕ್ಲ್ ಅವರನ್ನು ಜೀವನ ಸಂಗಾತಿಯಾಗಿ ಸ್ವೀಕರಿಸಿದ್ದರು. ಇವರಿಗೆ ಅನಿತಾ ಬೋಸ್ ಫಾಫ್ ಎಂಬ ಮಗಳಿದ್ದು, ಇವರು ಜರ್ಮನಿಯಲ್ಲಿ ಜನಪ್ರಿಯ ಅರ್ಥಶಾಸ್ತ್ರಜ್ಞರಾಗಿದ್ದರು.

ಇವರು ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಒಂದೊಂದು ಸಂದೇಶಗಳು ಜನರಲ್ಲಿ ಹೋರಾಟದ ಕಿಚ್ಚನ್ನ ಹುಟ್ಟುಹಾಕಿದ್ದವು. ಅದರಲ್ಲಿ ‘ನನಗೆ ನೀವು ರಕ್ತವನ್ನು ನೀಡಿ, ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ‘ ಎಂಬ ಸಂದೇಶ ಸ್ವಾತಂತ್ರ್ಯ ಪೂರ್ವದಲ್ಲೇ ಅನೇಕ ಜನರು ಸ್ವಾತಂತ್ರ್ಯಕ್ಕಾಗಿ ಹೋರಾಟದಲ್ಲಿ ಸೇರುವಂತೆ ಮಾಡಿತ್ತು.

ನೇತಾಜಿ ಅವರು,  1920 ರಲ್ಲಿ ಐಸಿಎಸ್ ಪದವಿ ಪಡೆದರು. ವಿದೇಶಿ ನೌಕರಿ ಒಲ್ಲೆ ಎಂದು ಗಳಿಸಿದ್ದ ಐಸಿಎಸ್ ಪದವಿಯನ್ನು ಬ್ರಿಟಿಷರಿಗೆ ಮರಳಿಸಿದ್ದರು.
ಶ್ರೀಘ್ರ ಸ್ವಾತಂತ್ರ್ಯಕ್ಕಾಗಿ ಬೋಸ್ ಅವರು ಮಂಡಿಸುತ್ತಿದ್ದ ವಾದಗಳು ಮತ್ತು ಅವರ ನಿಲುವುಗಳನ್ನ ಕಾಂಗ್ರೆಸ್‌ ನ ಮಂದಗಾಮಿ ಗುಂಪಿಗೆ ಅಸಹನಿಯವಾಗಿತ್ತು. ಸ್ವತಃ ಗಾಂಧೀಜಿ ಅವರೇ ಹಲವು ಬಾರಿ ಬೋಸ್ ರನ್ನು  ಟೀಕಿಸಿದ್ದರು. ಆದರೆ ಬೋಸ್‌ ರಿಗಿದ್ದ ರಾಜಕೀಯ ಚಿಂತನೆಯ ವೈಶಾಲ್ಯತೆ ಆ ಕಾಲದ ಯಾರೊಬ್ಬ ನಾಯಕರಲ್ಲೂ ಇರಲಿಲ್ಲ. ಆಸ್ಟ್ರೀಯಾ, ಇಂಗ್ಲೆಂಡ್, ಜರ್ಮನಿ, ಜಪಾನ್ ಸೇರಿದಂತೆ ಹಲವು ದೇಶಗಳನ್ನು ಸುತ್ತಿದ್ದ ಬೋಸ್ ಅವರು, ಉತ್ತಮ ರಾಜಕೀಯ ಜ್ಞಾನವನ್ನು ಹೊಂದಿದ್ದರು.

ಇನ್ನು ಕಾಂಗ್ರೆಸ್ ಡೋಲಾಯಮಾನ ನೀತಿಗಳಿಗೆ ಬೇಸತ್ತು ಚಿತ್ತರಂಜನ್ ದಾಸ್ ಅವರು ಸ್ವರಾಜ್ಯಪಕ್ಷ ವನ್ನು ಸ್ಥಾಪನೆ ಮಾಡಿದರು. ಬೋಸ್ ಅವರು ಚಿತ್ತರಂಜನ್ ದಾಸ್ ಅವರ ಜತೆಗೆ ಎಲ್ಲಾ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದರು. ದಾಸ್ ಅವರು ಸ್ಥಾಪಿಸಿದ್ದ ‘ಫಾವರ್ಡ್’ ದಿನಪತ್ರಿಕೆಯ ನಿರ್ವಹಣೆಯ ಜವಬ್ದಾರಿಯನ್ನು ಬೋಸ್ ಅವರು ನಿಭಾಯಿಸಿದ್ದರು.

ಮೊದಲು ಪಕ್ಷವಾಗಿ ಕಟ್ಟಿದ ಆಜಾದ್ ಹಿಂದ್ ಸೇನೆ (ಐಎನ್ಎ) ಮುಂದೆ ಸೈನ್ಯವಾಗಿ ರೂಪಗೊಂಡಿತು. ಈ ಸೇನೆಗೆ ನಿವೃತ್ತ ಯುದ್ದ ಕೈದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಈ ಸೇನೆ ಪಾದರಸದಂತೆ ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ವಿಸ್ತರಿಸಿತ್ತು. ಅನೇಕ ಜನರು ಸ್ವರಾಜ್ಯ ಹೋರಾಟಕ್ಕೆ ಅಗಾಧ ಬೆಂಬಲ ಸೂಚಿಸಿದ್ದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಸತತ ಎರಡು ಬಾರಿ ಕಾರ್ಯ ನಿರ್ವಹಿಸಿರು. ಮುಂದೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ನೇತಾಜಿಯವರು ಭಾರತೀಯ ರಾಷ್ಟ್ರೀಯ ಸೇನೆ ಯನ್ನು ಸ್ಥಾಪಿಸಿದರು.  ಕಾಂಗ್ರೆಸ್‍ನ ಬಲಹೀನ ನಾಯಕತ್ವ, ದುರ್ಬಲ ಒಪ್ಪಂದಗಳು, ಸ್ವಾಭಿಮಾನಶೂನ್ಯ ವರ್ತನೆಗೆ ಪ್ರತಿಯಾಗಿ ಆತ್ಮಾಭಿಮಾನದ ಸ್ವರಾಜ್ಯಹೋರಾಟಕ್ಕೆ ಬಲತುಂಬಿದವರು ನೇತಾಜಿ. ಇವರು ಟೈವಾನ್ ನಲ್ಲಿ 1945 ಆಗಸ್ಟ್ 18 ರಂದು ವಿಮಾನ ಅಪಘಾತದಲ್ಲಿ ಮರಣ ಹೊಂದಿದರು ಎಂದು ಹೇಳಲಾಗುತ್ತಿದ್ದು, ಈ ಘಟನೆ ವಿವಾದಿತವಾಗಿಯೇ ಉಳಿದಿದೆ. ಏಕೆಂದರೆ, ಸೇನಾನಿ ಸುಭಾಷ್‌ಚಂದ್ರ ಬೋಸ್‌ ಅವರ ಸಾವು ಇಂದಿಗೂ ನಿಗೂಢವಾಗಿ ಉಳಿದಿದೆ.

ಇನ್ನು ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ವಿಚಾರ ಘೋಷಿಸಿದ್ರು ನೇತಾಜಿ ಬೋಸ್ ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅವರ ಪ್ರತಿಮೆಯನ್ನು ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಷ್ಠಾಪಿಸಲಾಗುವುದು ಎಂದು ಪ್ರಕಟಿಸಿದರು. ಇದರ ಬೆನ್ನಲ್ಲೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಉದ್ಘಾಟಿಸಿದ್ದಾರೆ.

Ashitha S

Recent Posts

ಮುಂಬೈನಲ್ಲಿ ಹೋರ್ಡಿಂಗ್ ಬಿದ್ದು ಮೂವರು ಸಾವು: 59 ಜನರಿಗೆ ಗಾಯ

ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…

17 mins ago

ಸಚಿವ ಹೆಚ್‌.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

40 mins ago

ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್‌ಗಳನ್ನು…

52 mins ago

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಂಬಿಕಾ ವಿದ್ಯಾಲಯದ ಸಾಧನೆ: ನೂರು ಶೇಕಡಾ ಫಲಿತಾಂಶ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…

60 mins ago

ನಾಡ ಜನರ ಬದುಕು ನಂದಾದೀಪವಾಗಲು ನಂದಿ ಬಸವೇಶ್ವರ ತೊಟ್ಟಿಲು ತೂಗಿದ ಗಡಿನಾಡ ನಾರಿಯರು

ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…

2 hours ago

ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಯುವಕನೊಬ್ಬನಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಣ್ಣೂರ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.

3 hours ago