News Karnataka Kannada
Sunday, April 28 2024
ವಿಶೇಷ

ಇಂದು ವಿಶ್ವ ಆತ್ಮಹತ್ಯೆ ತಡೆ ದಿನ: ‘ಬದುಕು ತ್ಯಜಿಸುವ ಮುನ್ನ ಕ್ಷಣ ಯೋಚಿಸಿ’

World Suicide Prevention Day
Photo Credit : News Kannada

ಪ್ರಪಂಚದಾದ್ಯಂತ ಇತ್ತೀಚೆಗೆ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚುತ್ತಿವೆ. ಸಾಮಾನ್ಯ ಸಮಸ್ಯೆಗಳನ್ನೂ ಎದುರಿಸಲಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆತ್ಮಹತ್ಯೆ ಎನ್ನುವುದು ವ್ಯಕ್ತಿಗಳು ತಮ್ಮ ಜೀವನವನ್ನು ಕೊನೆಗೊಳಿಸಲು ತೆಗೆದುಕೊಳ್ಳುವ ಒಂದು ಗಂಭೀರ ನಿರ್ಧಾರ. ಆದರೆ ಬದುಕು ತ್ಯಜಿಸುವ ಮುನ್ನ ಕ್ಷಣ ಯೋಚಿಸುವುದು ತುಂಬಾ ಮುಖ್ಯ.  ಪ್ರತಿವರ್ಷ ಸೆಪ್ಟೆಂಬರ್‌ 10 ರಂದು ವಿಶ್ವ ಆತ್ಮಹತ್ಯಾ ತಡೆ ದಿನವನ್ನು ಆಚರಿಸಲಾಗುತ್ತದೆ. ಈ ದಿನ ವಿಶ್ವ ಆತ್ಮಹತ್ಯಾ ತಡೆ ದಿನದ ಆಚರಣೆ ಇದೆ.

ಇತಿಹಾಸ:
ಇಂಟರ್‌ನ್ಯಾಷನಲ್‌ ಅಸೋಸಿಯೇಷನ್‌ ಫಾರ್‌ ಸುಸೈಡ್‌ ವಿಶ್ವ ಆರೋಗ್ಯ ಸಂಸ್ಥೆಯ ಜೊತೆಗೂಡಿ ಪ್ರತಿವರ್ಷ ಸೆಪ್ಟೆಂಬರ್‌ 10 ರಂದು ಆತ್ಮಹತ್ಯೆ ತಡೆಗಟ್ಟುವ ಹಾಗೂ ಈ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲು ಕರೆ ಕೊಟ್ಟಿತ್ತು. 2003ರಲ್ಲಿ ಮೊದಲ ಬಾರಿ ಈ ಆಚರಣೆಗೆ ಚಾಲನೆ ಸಿಕ್ಕಿತು.

‘ಈ ದಿನ ಆತ್ಮಹತ್ಯೆಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯಲು ಮತ್ತು ಆತ್ಮಹತ್ಯೆಗಳನ್ನು ತಡೆಗಟ್ಟಲು ಸಾಧ್ಯ ಎಂಬ ಸಂದೇಶವನ್ನು ಪ್ರಸಾರ ಮಾಡಲು ʼಕ್ರಿಯೇಟ್‌ ಹೋಪ್‌ ಥ್ರೂ ಆಕ್ಷನ್‌ʼ ಮೂಲಕ ಪ್ರೋತ್ಸಾಹಿಸುವ ಕೆಲಸವನ್ನು ಮಾಡಲಾಗುತ್ತದೆ.

ಮಹತ್ವ:
ಜನರಲ್ಲಿ ಬದುಕಿನ ಬಗ್ಗೆ ವಿಶ್ವಾಸ ಮೂಡಿಸಿ ಆತ್ಮಹತ್ಯೆಯನ್ನು ತಡೆಯುವುದು ಹಾಗೂ ಆತ್ಮಹತ್ಯೆಯ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶ. ಜನರು ತಮ್ಮ ಕೆಟ್ಟ ನಿರ್ಧಾರದಿಂದ ಬದುಕಿಗೆ ಪೂರ್ಣವಿರಾಮ ಹಾಕಲು ಯೋಚಿಸುತ್ತಾರೆ. ಹಾಗಾಗಿ ಅವರಿಗೆ ಸ್ವಾಂತನ ಹೇಳಿ, ಧೈರ್ಯ ತುಂಬಿ, ವಿಶ್ವಾಸ ಮೂಡಿಸುವ ಮೂಲಕ ಆತ್ಮಹತ್ಯೆಯ ಯೋಚನೆಯಿಂದ ದೂರ ಮಾಡಬಹುದು.

ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ, ಪ್ರತಿ 40 ಸೆಕೆಂಡಿಗೆ ಒಬ್ಬರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರತಿವರ್ಷ 8 ಲಕ್ಷಕ್ಕೂ ಹೆಚ್ಚು ಜನರು ವಿವಿಧ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯ ಜನರು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಸುತ್ತಿದ್ದಾರೆ. ಅದರಲ್ಲೂ ಈ ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ 15 ರಿಂದ 29 ವರ್ಷ ವಯೋಮಾನದ ಯುವಜನರ ಸಂಖ್ಯೆಯೇ ಹೆಚ್ಚು ಎಂದು ವಿಶ್ವ ಸಂಸ್ಥೆ ಹೇಳಿದೆ.

ಭಾರತದಲ್ಲಿ ವಾರ್ಷಿಕವಾಗಿ 1ಲಕ್ಷ ಮಂದಿ ಆತ್ಮಹತ್ಯೆಗೆ ಒಳಗಾಗುತ್ತಿದ್ದು, ದೇಶ ಕೂಡ ಈ ಸಮಸ್ಯೆಯಿಂದ ಬಳಲುತ್ತಿದೆ. 2021ರಲ್ಲಿ ಭಾರತದಲ್ಲಿ ಒಟ್ಟಾರರೆ 1,64,033 ಮಂದಿ ಆತ್ಮಹತ್ಯೆಗೆ ಒಳಗಾಗುತ್ತಿದ್ದಾರೆ 2020ಕ್ಕೆ ಹೋಲಿಕೆ ಮಾಡಿದಾಗ ಇದರ ಸಂಖ್ಯೆ 7.2ರಷ್ಟು ಹೆಚ್ಚಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು