News Karnataka Kannada
Tuesday, April 30 2024
ಸಾಂಡಲ್ ವುಡ್

ರಾಜ್ಯದಾದ್ಯಂತ 13 ಸಿನಿಮಾ ಯಶಸ್ವಿ ಪ್ರದರ್ಶನ

13 films screened successfully across the state
Photo Credit : By Author

ಮೈಸೂರು: ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಮನರಂಜನಾ ಎಳೆ ಒಳಗೊಂಡಿರುವ 13 ಎಂಬ ಶೀರ್ಷಿಕೆಯ ಚಲನಚಿತ್ರ ಈಗಾಗಲೇ  ರಾಜ್ಯಾದ್ಯಂತ ಬಿಡುಗಡೆಗೊಂಡು ಉತ್ತಮ ಪ್ರದರ್ಶನ ಕಂಡಿದೆ. ಹೀಗಾಗಿ ಪ್ರೇಕ್ಷಕರ ಬೇಡಿಕೆ ಹೆಚ್ಚಿರುವ ಕಾರಣ ಇನ್ನೂ 50ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ನಿರ್ದೇಶಕ ಕೆ.ನರೇಂದ್ರ ಬಾಬು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 13 ಕೋಟಿ ಹವಾಲ ಹಣ ಸಾಗಿಸುವ ಒಂದು ಗುಂಪು ಹಾಗೂ ಓರ್ವ ದಂಪತಿ, ಪತ್ತೆದಾರಿ ಸಂವಾದ ಮತ್ತು ರೋಚಕ ತಿರುವುಗಳನ್ನು ಈ ಚಲನಚಿತ್ರ ಒಳಗೊಂಡಿದೆ. ಪ್ರಮುಖ ಪಾತ್ರದಲ್ಲಿ ಹಿರಿಯ ನಟರಾದ ರಾಘವೇಂದ್ರ ರಾಜ್‌ಕುಮಾರ್, ಶ್ರುತಿ, ಪ್ರಮೋದ್‌ಶೆಟ್ಟಿ ಇನ್ನಿತರರು ಇದ್ದಾರೆಂದರು.

ನಟ ರಾಘವೇಂದ್ರ ರಾಜ್‌ಕುಮಾರ್ ಮಾತನಾಡಿ, ಕಾವೇರಿ ವಿಚಾರವಾಗಿ ಸ್ಯಾಂಡಲ್‌ವುಡ್ ನಟರ ಮೌನದ ಕುರಿತು ಮಾತನಾಡಿ,ನೆಲ ಜಲ ಭಾಷೆ ವಿಚಾರಕ್ಕೆ ನಮ್ಮ ಪ್ರಾಣ ಕೊಡಲು ಸಿದ್ಧ ಎಂದು ನಮ್ಮ ತಂದೆ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಇಡೀ ಕುಟುಂಬ, ಸಿನಿಮಾ ಇಂಡಸ್ಟ್ರಿ ರೈತರೊಂದಿಗೆ ನಿಲ್ಲುತ್ತೇವೆ. ಜತೆಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದರು.

ನಾವು ಕೇವಲ ಸಿನಿಮಾ ಮಾಡಲು ಮಾತ್ರ ಸೀಮಿತವಾಗಿಲ್ಲ. ನೆಲ, ಜಲ, ಭಾಷೆಗೆ ಕಷ್ಟ ಬಂದಾಗ ನಾವು ಹೋಗಲೇಬೇಕು.  ಅಂತಹ ಸಂದರ್ಭ ಬಂದಾಗ ಕರೆ ಬರುತ್ತದೆ. ಫಿಲ್ಮ್ ಚೇಂಬರ್‌ನಿಂದ ಕರೆ ಬಂದಾಗ ನಾವು ಹೋರಾಟ ಮಾಡುತ್ತೇವೆ. ಒಬ್ಬರೇ ಹೋರಾಡಿದರೆ ಹೆಸರು ಮಾಡಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎನ್ನುತ್ತಾರೆ. ಫಿಲ್ಮ್ ಚೇಂಬರ್‌ನಿಂದ ಬರುವ ಕರೆಗೆ ನಾವುಕಾಯುತ್ತಿದ್ದೇವೆ. ಅಲ್ಲಿ ಹೋರಾಟದ ರೂಪುರೇಷೆ ಸಿದ್ಧ ಪಡಿಸುತ್ತೇವೆ. ಆ ದಿನಕ್ಕೆ ಕಾಯುತ್ತಿದ್ದೇವೆ ಎಂದು ಹೇಳಿದರು.

ಗೋಷ್ಠಿಯಲ್ಲಿ ನಿರ್ಮಾಪಕ ಮಂಜುನಾಥ್ ಗೌಡ, ನಟ ಪ್ರಮೋದ್‌ಶೆಟ್ಟಿ ಹಾಗೂ ಇನ್ನಿತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು