ಸಾಂಡಲ್ ವುಡ್

ರಾಜ್ಯದಾದ್ಯಂತ 13 ಸಿನಿಮಾ ಯಶಸ್ವಿ ಪ್ರದರ್ಶನ

ಮೈಸೂರು: ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಮನರಂಜನಾ ಎಳೆ ಒಳಗೊಂಡಿರುವ 13 ಎಂಬ ಶೀರ್ಷಿಕೆಯ ಚಲನಚಿತ್ರ ಈಗಾಗಲೇ  ರಾಜ್ಯಾದ್ಯಂತ ಬಿಡುಗಡೆಗೊಂಡು ಉತ್ತಮ ಪ್ರದರ್ಶನ ಕಂಡಿದೆ. ಹೀಗಾಗಿ ಪ್ರೇಕ್ಷಕರ ಬೇಡಿಕೆ ಹೆಚ್ಚಿರುವ ಕಾರಣ ಇನ್ನೂ 50ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ನಿರ್ದೇಶಕ ಕೆ.ನರೇಂದ್ರ ಬಾಬು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 13 ಕೋಟಿ ಹವಾಲ ಹಣ ಸಾಗಿಸುವ ಒಂದು ಗುಂಪು ಹಾಗೂ ಓರ್ವ ದಂಪತಿ, ಪತ್ತೆದಾರಿ ಸಂವಾದ ಮತ್ತು ರೋಚಕ ತಿರುವುಗಳನ್ನು ಈ ಚಲನಚಿತ್ರ ಒಳಗೊಂಡಿದೆ. ಪ್ರಮುಖ ಪಾತ್ರದಲ್ಲಿ ಹಿರಿಯ ನಟರಾದ ರಾಘವೇಂದ್ರ ರಾಜ್‌ಕುಮಾರ್, ಶ್ರುತಿ, ಪ್ರಮೋದ್‌ಶೆಟ್ಟಿ ಇನ್ನಿತರರು ಇದ್ದಾರೆಂದರು.

ನಟ ರಾಘವೇಂದ್ರ ರಾಜ್‌ಕುಮಾರ್ ಮಾತನಾಡಿ, ಕಾವೇರಿ ವಿಚಾರವಾಗಿ ಸ್ಯಾಂಡಲ್‌ವುಡ್ ನಟರ ಮೌನದ ಕುರಿತು ಮಾತನಾಡಿ,ನೆಲ ಜಲ ಭಾಷೆ ವಿಚಾರಕ್ಕೆ ನಮ್ಮ ಪ್ರಾಣ ಕೊಡಲು ಸಿದ್ಧ ಎಂದು ನಮ್ಮ ತಂದೆ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಇಡೀ ಕುಟುಂಬ, ಸಿನಿಮಾ ಇಂಡಸ್ಟ್ರಿ ರೈತರೊಂದಿಗೆ ನಿಲ್ಲುತ್ತೇವೆ. ಜತೆಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದರು.

ನಾವು ಕೇವಲ ಸಿನಿಮಾ ಮಾಡಲು ಮಾತ್ರ ಸೀಮಿತವಾಗಿಲ್ಲ. ನೆಲ, ಜಲ, ಭಾಷೆಗೆ ಕಷ್ಟ ಬಂದಾಗ ನಾವು ಹೋಗಲೇಬೇಕು.  ಅಂತಹ ಸಂದರ್ಭ ಬಂದಾಗ ಕರೆ ಬರುತ್ತದೆ. ಫಿಲ್ಮ್ ಚೇಂಬರ್‌ನಿಂದ ಕರೆ ಬಂದಾಗ ನಾವು ಹೋರಾಟ ಮಾಡುತ್ತೇವೆ. ಒಬ್ಬರೇ ಹೋರಾಡಿದರೆ ಹೆಸರು ಮಾಡಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎನ್ನುತ್ತಾರೆ. ಫಿಲ್ಮ್ ಚೇಂಬರ್‌ನಿಂದ ಬರುವ ಕರೆಗೆ ನಾವುಕಾಯುತ್ತಿದ್ದೇವೆ. ಅಲ್ಲಿ ಹೋರಾಟದ ರೂಪುರೇಷೆ ಸಿದ್ಧ ಪಡಿಸುತ್ತೇವೆ. ಆ ದಿನಕ್ಕೆ ಕಾಯುತ್ತಿದ್ದೇವೆ ಎಂದು ಹೇಳಿದರು.

ಗೋಷ್ಠಿಯಲ್ಲಿ ನಿರ್ಮಾಪಕ ಮಂಜುನಾಥ್ ಗೌಡ, ನಟ ಪ್ರಮೋದ್‌ಶೆಟ್ಟಿ ಹಾಗೂ ಇನ್ನಿತರರು ಹಾಜರಿದ್ದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

26 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

48 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago