ಬೆಂಗಳೂರು: ಮಾಜಿ ಸಂಸದೆ, ಚಿತ್ರನಟಿ ರಮ್ಯಾ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರತಿನಿಧಿಸುವ ಚೆನ್ನಪಟ್ಟಣ ಅಥವಾ ಕಂದಾಯ ಸಚಿವ ಆರ್. ಅಶೋಕ್ ಅವರ ಪದ್ಮನಾಭನಗರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.
2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ನ ಪುಟ್ಟರಾಜು ವಿರುದ್ಧ ರಮ್ಯಾ ಸೋಲು ಅನುಭವಿಸಿದ್ದರು. ಕಾಂಗ್ರೆಸ್ನ ರಾಷ್ಟ್ರೀಯ ಸಾಮಾಜಿಕ ಜಾಲತಾಣ ತಂಡದಲ್ಲೂ ಕೆಲಕಾಲ ಕಾರ್ಯನಿರ್ವಹಿಸಿದ್ದರು.