ಗಾಂಧಿನಗರ

ಜೂ.23 ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ ಅಗ್ರಸೇನಾ

ಮೈಸೂರು: ಕೌಟುಂಬಿಕ ಕಥಾಹಂದರ ಹೊಂದಿರುವ ಅಗ್ರಸೇನಾ ಚಲನಚಿತ್ರ ಜೂ.23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದು ಇಡೀ ಕುಟುಂಬ ಕುಳಿತು ನೋಡಬಹುದಾದ ಚಲನಚಿತ್ರವಾಗಿರುವ ಕಾರಣ ಪ್ರೇಕ್ಷಕರು ಪ್ರೋತ್ಸಾಹಿಸಬೇಕೆಂದು ನಿರ್ಮಾಪಕಿ ಮಮತಾ ಜಯರಾಂರೆಡ್ಡಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಿತ್ರದಲ್ಲಿ ಐದು ಹಾಡುಗಳಿದ್ದು, ಖ್ಯಾತ ಗಾಯಕರು ಹಾಡಿದ್ದಾರೆ. ಈ ಚಲನಚಿತ್ರದಲ್ಲಿ ಕತೆಯೇ ಮುಖ್ಯ ಪಾತ್ರ ವಹಿಸುತ್ತದೆ. ಕೌಟುಂಬಿಕ ಸಂಬಂಧ, ಭಾವನೆಗಳು ಹದಗೆಡುತ್ತಿರುವ ಈ ದಿನಗಳಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಉದ್ದೇಶ ಚಿತ್ರದ್ದಾಗಿದೆ ಎಂದರು.

ಮೈಸೂರು, ಬೆಂಗಳೂರು, ಮಂಡ್ಯ, ಕೋಲಾರ ಸೇರಿದಂತೆ ರಾಜ್ಯದ ವಿವಿಧೆಡೆ ಚಿತ್ರೀಕರಣ ಮಾಡಲಾಗಿದೆ. ಉತ್ತಮ ಚಿತ್ರ ನಿರ್ಮಾಣ ಮಾಡಿದಲ್ಲಿ ಜನರು ವೀಕ್ಷಿಸುತ್ತಾರೆಂಬ ವಿಶ್ವಾಸದಿಂದ ಚಿತ್ರ ನಿರ್ಮಿಸಲಾಗಿದೆ ಎಂದರು.

ನಾಯಕ ನಟ ಅಮರ್ ವಿರಾಜ್ ಮಾತನಾಡಿ, ಚಿತ್ರ ಕೌಟುಂಬಿಕ ಕತೆ ಹೊಂದಿದ್ದು, ಕುಟುಂಬ ಸಮೇತ ಎಲ್ಲರೂ ಕುಳಿತು ನೋಡಬಹುದಾದ ಚಿತ್ರವಾಗಿದೆ. ಸಂಬಂಧದ ಬೆಲೆಯನ್ನು ಚಿತ್ರದಲ್ಲಿ ತೋರಿಸಲಾಗಿದೆ. ಸಾಹಸ ದೃಶ್ಯಗಳು ಅತ್ಯುತ್ತಮವಾಗಿ ಮೂಡಿಬಂದಿವೆ. ಎಂ.ಎಸ್.ತ್ಯಾಗರಾಜ್ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳು ಈಗಾಗಲೇ ಜನಪ್ರಿಯವಾಗಿವೆ. ಹೊಸಬರ ಚಿತ್ರಗಳು ಚೆನ್ನಾಗಿದ್ದರೆ ಪ್ರೇಕ್ಷಕರು ನೋಡೇ ನೋಡುತ್ತಾರೆ. ಕುಟುಂಬ ಸಮೇತ ನೋಡುವ ಚಿತ್ರವಾದ್ದರಿಂದ ನಮ್ಮ ಚಿತ್ರ ಯಶಸ್ವಿಯಾಗುತ್ತದೆ ಎಂದು ವಿಶ್ವಾಸವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಹ ನಿರ್ದೇಶಕ ವೆಂಕಟ್ ಹಾಜರಿದ್ದರು.

Sneha Gowda

Recent Posts

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

37 seconds ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

14 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

17 mins ago

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

29 mins ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

31 mins ago

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

36 mins ago