ಬೆಂಗಳೂರು: ಗೌಡ್ರ ಹುಡುಗನನ್ನು ಹುಡುಕಿ ಕೊಡಿ ಮದುವೆಯಾಗಲು ರೆಡಿ ಎಂದ ನಟಿ ರಮ್ಯಾ

ಬೆಂಗಳೂರು: ನನಗೆ ಸೂಕ್ತ ವರನನ್ನು ಹುಡುಕಿ ಕೊಡಿ. ನನಗೂ ಹುಡುಕಿ… ಹುಡುಕಿ ಸಾಕಾಗಿದೆ ಎಂದು ನಟಿ ರಮ್ಯಾ ಹೇಳಿದ್ದಾರೆ. ಅಭಿಮಾನಿಗಳು ಮಂಡ್ಯ ಚುನಾವಣಾ ಪ್ರಚಾರದ ವೇಳೆ ಕೇಳಿದ ಪ್ರಶ್ನೆಗೆ ರಮ್ಯಾ ಮೇಲಿನಂತೆ ಉತ್ತರಿಸಿದ್ದಾರೆ.

ನನಗೆ ಮೊದಲು ಹುಡುಗನನ್ನು ಹುಡುಕಿ. ಗೌಡರ ಹುಡುಗ ಸಿಕ್ತಾರೆ ಅಂದ್ರೆ ನೋಡಿ. ನನಗೆ ಒಬ್ಬರೂ ಕಾಣುತ್ತಿಲ್ಲ ಎಂದು ಹೇಳಿದ್ದಾರೆ. ನನಗೂ ಹುಡುಗನನ್ನು ನೋಡಿ ನೋಡಿ ಸಾಕಾಗಿದೆ. ಬೇಕಿದ್ದರೆ ನೀವೇ ಸ್ವಯಂವರ ಏರ್ಪಾಟು ಮಾಡಿ, ಮದುವೆ ಆಗುತ್ತೇನೆ ಎಂದು ಹೇಳಿದ್ದಾರೆ. ನಾನು ಯಾವಾಗಲೂ ಮಂಡ್ಯದವಳು. ನಾನು ಗೌಡತಿ ಎಂಬುದನ್ನು ಯಾರೂ ಕಿತ್ತುಕೊಳ್ಳಲು ಆಗಲ್ಲ. ನಮ್ಮ ತಾಯಿ ಊರು ಮಂಡ್ಯ, ನಮ್ಮ ತಂದೆ ಸತ್ತಿದ್ದು ಇಲ್ಲೇ, ನನ್ನ ಅಭ್ಯರ್ಥಿ ಮಾಡಿದ್ದು ಇಲ್ಲೇ, ಮಂಡ್ಯ ಜಿಲ್ಲೆಯ ಜನರು ನನಗೆ ಬೆಂಬಲ‌ ನೀಡಿದ್ದಾರೆ. ಈ ಅಭಿಮಾನವನ್ನು ನಾನು ಯಾವತ್ತೂ ಮರೆಯಲ್ಲ, ಇದು ಕಮ್ಮಿಯೂ ಆಗಲ್ಲ. ಮಂಡ್ಯ ಸಂಬಂಧ ಕೇವಲ‌ ರಾಜಕೀಯವಾಗಿ ಅಲ್ಲ, ನನಗೆ ಮಂಡ್ಯ ಕುಟುಂಬದ ರೀತಿ ಎಂದ ರಮ್ಯಾ, ನಾನು ಮಂಡ್ಯಕ್ಕೆ ಬಂದುಹೋಗುತ್ತಾ ಇರುತ್ತೇನೆ ಎಂದು ರಮ್ಯಾ ಹೇಳಿಕೊಂಡಿದ್ದಾರೆ.

Ashika S

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

4 hours ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

4 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

4 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

5 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

5 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

6 hours ago