ಬೆಂಗಳೂರು: ಏಪ್ರಿಲ್ 10ರಂದು ‘ರಾಮನ ಅವತಾರ’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಲಿದೆ. ಅದರ ಸಲುವಾಗಿ ಕುತೂಹಲ ಮೂಡಿಸಲು ರಿಷಿ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ.
ಅದೇ ರೀತಿ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭ ಆಗಿದೆ. ಎಲ್ಲ ಪಕ್ಷಗಳೂ ಭರ್ಜರಿಯಾಗಿ ಪ್ರಚಾರ ನಡೆಸುತ್ತಿವೆ. ಇಂಥ ಸಮಯದಲ್ಲಿ ಕನ್ನಡದ ನಟ ರಿಷಿ ಅವರು ವಿಧಾನಸೌಧ ಮಾರಿ, ಅದರಿಂದ ಬರುವ ಹಣದಲ್ಲಿ ಜನರ ಸಾಲ ತೀರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಅವರು ಇಷ್ಟೆಲ್ಲ ಹೇಳಿರುವುದು ‘ರಾಮನ ಅವತಾರ’ ಸಿನಿಮಾದಲ್ಲಿನ ಪಾತ್ರದ ಬಗ್ಗೆ ಅಷ್ಟೇ. ಸೋಶಿಯಲ್ ಮೀಡಿಯಾದಲ್ಲಿ ರಿಷಿ ಹಂಚಿಕೊಂಡಿರುವ ವಿಡಿಯೋ ಸಖತ್ ಇಂಟರೆಸ್ಟಿಂಗ್ ಆಗಿದೆ.
ನಾನೇನಾದರೂ ಅಧಿಕಾರಕ್ಕೆ ಬಂದರೆ ವಿಧಾನಸೌಧ ಮಾರುತ್ತೇನೆ. ಎಲ್ಲರಿಗೂ ವರ್ಕ್ ಫ್ರಮ್ ಹೋಮ್ ಇದೆ. ನಮ್ಮಂಥ ರಾಜಕಾರಣಿಗಳಿಗೆ ಬೆಂಗಳೂರಿನಲ್ಲಿ ಅಷ್ಟು ದೊಡ್ಡ ಆಫೀಸ್ ಯಾಕೆ ಬೇಕು? ವಿಧಾನಸೌಧ ಮಾರಿ, ಅದರಿಂದ ಬಂದ ದುಡ್ಡಲ್ಲಿ ನಮ್ಮೆಲ್ಲರ ಸಾಲ ತೀರಿಸುತ್ತೇನೆ. ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಉಚಿತವಾಗಿ ಮಾಡಿಸುತ್ತೇನೆ. ನನ್ನಂಥ ಹೊಸ ನಾಯಕ ಬೇಕು ಅಂದರೆ ನನಗೆ ನೀವು ವೋಟ್ ಹಾಕಬೇಕು’ ಎಂದು ರಿಷಿ ಈ ವಿಡಿಯೋದಲ್ಲಿ ಹೇಳಿದ್ದಾರೆ.
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.