News Karnataka Kannada
Friday, May 17 2024
ಗಾಂಧಿನಗರ

ಬಿಗ್​ಬಾಸ್​​ ಸ್ಪರ್ಧಿ ವಿನಯ್​ ಕೊಟ್ಟ ನೋವಿನ ಕುರಿತು ಗಂಭೀರ ಆರೋಪ ಮಾಡಿದ ನಟಿ

Photo Credit : News Kannada

ಬೆಂಗಳೂರು:  ಬಿಗ್​ಬಾಸ್​ ಸ್ಪರ್ಧಿ ವಿನಯ್​ ಕುರಿತು ನಟಿ ಇಳಾ ವಿಟ್ಲ ಆರೋಪ ಒಂದನ್ನು ಮಾಡಿದ್ದು, ಇದಕ್ಕೆ ನಟಿ ಸ್ವಪ್ನ ದೀಕ್ಷಿತ್​ ಸಹ ದನಿಗೂಡಿಸಿದ್ದಾರೆ. 8 ವರ್ಷಗಳ ಹಿಂದೆ ಅಂದರೆ 2015ರಲ್ಲಿ ಖಾಸಗಿ ವಾಹಿನಿ ಒಂದರಲ್ಲಿ ರಿಯಾಲಿಟಿ ಶೋ ಒಂದು ಪ್ರಸಾರವಾಗಿತ್ತು. ಅದರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ವಿನಯ್​ ತುಂಬಾ ಅಗ್ರೆಸ್ಸಿವ್​ ಆಗಿ ನಡೆದುಕೊಳ್ಳುತ್ತಿದ್ದರು ಎಂದು ನಟಿ ಇಳಾ ವಿಟ್ಲ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ನಾನೊಬ್ಳು ಆರ್ಟಿಸ್ಟ್ ಆಗಿ ರಿಯಾಲಿ ಟೀ ಶೋ ಗಳನ್ನ ಮಾಡಿದ್ದಕ್ಕೆ ಹಾಗೇ ಸಾಮಾನ್ಯವಾಗಿ ಬಿಗ್ ಬಾಸ್ ನೋಡ್ತಿರೋ ಕಾರಣ ವಿನಯ್ ಅವರನ್ನ ಹತ್ತಿರದಿಂದ ನೋಡಿ ಅನುಭವಿಸಿರೋದಕ್ಕೆ ಪೋಸ್ಟ್ ಮಾಡ್ತಿದೀನಿ. ನನಗೇನಾದ್ರೂ ಆದ್ರೆ ನಾನು ಸುಮ್ನೆ ಬಿಡಲ್ಲ ಸುಮ್ನೆ ಬಿಡಲ್ಲ ಅಂತಾನೆ ಇರ್ತಾರಲ್ವಾ, ಆದ್ರೆ ಏನ್ ಮಾಡ್ತಿದ್ರು ಅವರಿಂದ ಬೇರೆಯವರಿಗೆ ತೊಂದರೆ ಆದ್ರೆ ಏನ್ ಮಾಡ್ಬೇಕಿತ್ತು. ಆಟ ಅಂದ್ಮೇಲೆ ಹೆಚ್ಚು ಕಡಿಮೆ ಇದ್ದೇ ಇರುತ್ತೆ ಸ್ವಲ್ಪ ಸ್ವಲ್ಪ ಗಾಯಗಳು ಆಗುತ್ತೆ ಅದು ಸರ್ವೇಸಾಮಾನ್ಯ ಬೇರೆಯವರು ಯಕ್ಕುಟೋದ್ರು ಪರ್ವಾಗಿಲ್ಲ ನಾನು ಗೆಲ್ಲಲೇ ಬೇಕು ಅನ್ನೋ ಮನಸ್ಥಿತಿ ಇರೋದು ಯಾವತ್ತಿಗೂ ಉದ್ದಾರ ಆಗಿಲ್ಲ.

ಯಾಲಿಟಿ ಶೋ ನೇ ಹಾಗೆ ಏನು ಮಾಡಕ್ಕಾಗಲ್ಲ ಇಷ್ಟ ಇದ್ರೆ ಹೋಗ್ಬೇಕು ಇಲ್ಲ ಅಂದ್ರೆ ಸುಮ್ನಿರಬೇಕು ಬಿಗ್ ಬಾಸ್ ಅಂದ್ರೆ ನನಗೆ ಮೊದಲಿಂದಾನು ಇಷ್ಟ ನಮ್ಮ ಕಿರುತೆರೆ ಹೆಮ್ಮೆ. ಮೊದ್ಲು ಕಿರುತೆರೆ ಅಂತ ತಾತ್ಸಾರ ಮಾಡಿದವರನ್ನು ಕಿರುತೆರೆಗೆ ಕರ್ಕೊಂಡು ಬಂದಿರುವ ಹೆಮ್ಮೆಯ ಶೋ ಕಿಚ್ಚ ಸುದೀಪ್ ಅವರು ಹೇಳುವ ಬುದ್ಧಿ ಮಾತು ನಮ್ಮ ಜೀವನಕ್ಕೂ ಅನ್ವಯಿಸುತ್ತೆ ಬಿಗ್ ಬಾಸ್ ಗೆ ಹೋಗ್ಬೇಕು ಅಂತೇನಿಲ್ಲ ಸುಮ್ನೆ ಕೇಳಿಸಿಕೊಂಡರೆ ಸಾಕಾಗುತ್ತೆ. ಇದೇ ವಿನಯ್ ಸೂಪರ್ ಜೋಡಿ ಟೈಮಲ್ಲಿ ನನ್ನ ಕಣ್ಣೆದುರಿಗೆ ಪ್ಲಾನ್ ಮಾಡ್ಕೊಂಡುಬಂದು ನಮ್ಮತ್ರ ಹೇಳ್ತಾ ಇದ್ರು ನನಗೇನಾದ್ರೂ ಆದ್ರೆ ನಾನ್ ಯಾರನ್ನು ಸುಮ್ಮನೆ ಬಿಡಲ್ಲ ಅಂತ ಹೆದ್ರಿಸೋದು.

ಆಮೇಲೆ ಅಂತ ಕೆಲಸ ಅವರೇ ಮಾಡೋದು. ಅವತ್ತು ವಿನಯ್ ಜೊತೆ ನಮ್ಮೆಜಮಾನ್ರು ಆಡಿದಾಗ ಆಟದಲ್ಲಿ ದವಡೆ ಹಲ್ಲು ಮುರಿದ್ರು ಅಷ್ಟು ಸಾಲದು ಅಂತ ರಿಬ್ಬು ಫ್ಯಾಕ್ಚರ್ ಮಾಡಿದ್ರು, ಆದ್ರೂ ಅವರಿಗೆ ನಾವು ಒಂದು ಮಾತು ಏನು ಹೇಳಿಲ್ಲ,, ಶೋ ಮುಗಿದ್ ಮೇಲೆ ನೋವು ಜಾಸ್ತಿ ಆಯ್ತು, ಆರು ತಿಂಗಳು ಸರಿಯಾಗಿ ಕೆಲಸ ಮಾಡಕ್ಕಾಗ್ದೆ ಆರ್ಯನ್ಸರು ಒದ್ದಾಡಿದ್ದಾರೆ ಡಾಕ್ಟ್ರು ಏನು ಮಾಡಬಾರದು ರೆಸ್ಟ್ ಮಾಡಿ ಅಂತ ಹೇಳಿದ್ರು ಅವತ್ತು ನಾನು ಎಷ್ಟು ಕಣ್ಣೀರು ಹಾಕ್ತ ಕೂತಿದ್ದೆ ಅನ್ನೋದು ಭಗವಂತನಿಗೆ ಮಾತ್ರ ಗೊತ್ತು.

ಇದೇ ಪರಿಸ್ಥಿತಿ ಅವರಿಗೆ ಬಂದಿದ್ರೆ ಏನ್ ಮಾಡ್ತಿದ್ರು ನಾವು ಕಲಾವಿದರು ಆಗಿ ಹೋಗಿರೋ ಘಟನೆಗಳಿಗೆ ರಿಯಾಕ್ಷನ್ ಕೊಡೋದು,, ದುರಹಂಕಾರದ ಮಾತುಗಳನ್ನ ಆಡೋದು ಒಬ್ಬರಿಗೊಬ್ರು ಜಗಳ ಮಾಡ್ಕೊಂಡು ಲೈಫ್ ಹಾಳ್ ಮಾಡ್ಕೊಳೋದು ಬೇಡ ಎಲ್ಲರೂ ಚೆನ್ನಾಗಿರ್ಲಿ ಅಂತ ಸುಮ್ನೆ ಇದ್ವಿ ಅದ್ರಲ್ಲೂ ಅವರ ತಾಯಿ ತುಂಬಾ ಒಳ್ಳೆ ಮನಸ್ಸು ಇರೋರು ಯಾರ್ ಗೆದ್ರು ಪರ್ವಾಗಿಲ್ಲ ಎಲ್ಲಾ ನನ್ನ ಮಕ್ಕಳೇ ಅಂತ ಹೇಳಿರೋ ಮಾತು ಈಗಲೂ ನನಗೆ ನೆನಪಿದೆ. ಸೋ ಸ್ವಲ್ಪ ದಿನ ನೋವಿರುತ್ತೆ,ಆಮೇಲೆ ಇರೋದೇ ಜೀವನ ಅಂತ ಸುಮ್ಮನೆ ಇದ್ವಿ ಯಾಕೆಂದ್ರೆ ನಮ್ಮಿಂದಾಗಿ ಎಲ್ಲ ಫ್ಯಾಮಿಲಿಯವರು ಅನುಭವಿಸುವುದು ಒಳ್ಳೆ ಲಕ್ಷಣ ಅಲ್ಲ ಎಂದು ಕಿಡಿಕಾರಿದ್ದಾರೆ.

ಅವರ ಫ್ಯಾಮಿಲಿ ಮಾತ್ರ ಚೆನ್ನಾಗಿರಬೇಕು ಉಳಿದವರು ಯಕ್ಕುಟ್ ಹೋದ್ರು ಅವರಿಗೆ ತೊಂದರೆ ಇಲ್ಲಅನ್ಸುತ್ತೆ, ಈ ತರ ಹೆದ್ರಿಸೋರಿಗೆ ನಂದೊಂದು ಮಾತು, ಒಂದು ವೇಳೆ ನೀವೇನಾದ್ರೂ ಮಾಡಿದ್ರೆ ಬೇರೆಯವರು ಕಡ್ಲೆಪುರಿ ತಿನ್ಕೊಂಡು ಕೂತಿರ್ತಾರಾ. ಗೊತ್ತಿಲ್ಲದೆ ಆಟದಲ್ಲಿ ಏನೋ ಒಂದಾದರೆ ಈ ಮನುಷ್ಯನ ಯೋಗ್ಯತೆನೆ ಇಷ್ಟು ಹಾಳಾಗೋಗ್ಲಿ ಅಂತ ಬಿಡಬಹುದು ಆಟದಿಂದ ಹೊರಗೆ ಬಂದ ಮೇಲೆನೂ ಇವ್ರು ನಾ ನಿನ್ನ ಹೊರಗ್ ಹೋದ್ಮೇಲೆ ಸುಮ್ನೆ ಬಿಡಲ್ಲ ನಾನು ಸುಮ್ಮನೆ ಬಿಡಲ್ಲ ಅಂದ್ರೆ ಎದುರುಗಡೆಯವರು ಕೈಕಟ್ಟಿ ಕೂತ್ಕೊಂಡಿರ್ತಾರಾ, ಐಯೋ ದೇವ್ರೇ ಅವರು ಅದಕ್ಕಿಂತ ದೊಡ್ಡ ರೌಡಿಗಳಾಗಿರುತ್ತಾರೆ ಬಿಡ್ತಾರಾ ಎಂದು ಪ್ರಶ್ನಿಸಿದ್ದಾರೆ.

ಇವರೆಲ್ಲ ಲೈಫ್ ಹಾಳ್ ಮಾಡ್ಕೊಳಕ್ ಬಂದಿದ್ದಾರಾ ಜೀವನ ಮಾಡ್ಕೊಳ್ಳೋಕೆ ಬಂದಿದ್ದರೋ ಒಂದು ಅರ್ಥ ಆಗ್ತಿಲ್ಲ ಫ್ಯಾಮಿಲಿ ಮುಖ್ಯ ಅಂತ 50ಸರಿ ಹೇಳ್ತಿರಲ್ಲ, ಒಂದು ವೇಳೆ ನೀವೇನಾದರೂ ಮಾಡಿದ್ರಿ ಅಂತ ಇಟ್ಕೊಳಿ ಎದ್ರುಗಡೆ ಅವ್ರು ನಿಮ್ಮನ್ ಏನೋ ಒಂದು ಮಾಡ್ತಾರೆ ಅಲ್ಲಿಗೆ ಯಾರಿಂದ ಯಾರು ಫ್ಯಾಮಿಲಿ ಹಾಳ್ ಮಾಡುದ್ರು ಅಷ್ಟು ತಲೆ ಇಲ್ವಾ ಇವರಿಗೆ ಖರ್ಮ,ಎಲ್ಲಾ ಆದ್ಮೇಲೆ ಏನು ಗೊತ್ತಿಲ್ಲದಂಗೆ ಸಾರಿ ಸರ್ ಸಾರಿ ಸರ್ ಅಂತ ಹೇಳೋದು ಅಷ್ಟೇ ನಾನು ಬದಲಾಗಿದ್ದಾರೆ ಅನ್ಕೊಂಡಿದ್ದೆ ಯಾಕೆಂದ್ರೆ ಒಬ್ಬ ಮನುಷ್ಯ ಅಂದಮೇಲೆ ತಪ್ಪು ಮಾಡೋದು ಸಹಜ ಒಂದು ಸಲ ಮಾಡಿದ್ಮೇಲೆ ಮತ್ತೆ ಅದೇ ತಪ್ಪನ್ನು,ಇವರು ಬದಲಾಗಲ್ಲ ಯಾಕೆಂದ್ರೆ ಇಂಥ ಬಿಗ್ ಬಾಸ್ ಅಂತ ಶೋದಲ್ಲೂನು ಕಂಟ್ರೋಲ್ ಇಲ್ದೆ ಮಾತಾಡ್ತಿದ್ದಾರೆ ಅಂದ್ರೆ ಹೊರಗಡೆ ಹೇಗಿರಬಹುದು ಅಷ್ಟೇ ನನ್ನ ಪ್ರಶ್ನೆ, ಭಾಗವಂತ ಇನ್ನಾದರೂ ಒಳ್ಳೆ ಬುದ್ದಿ ಕೊಡ್ಲಿ ಎಂದು ಆಶಿಸಿದ್ದಾರೆ.

ನನ್ ಜೀವನದಲ್ಲಿ ನಾನು ಯಾರಿಗೂ ಹೆದರೋ ಮಾತಿಲ್ಲ ನನ್ ಯಾರ್ ಸುದ್ದಿಗೂ ಹೋಗಲ್ಲ ಯಾಕೆಂದ್ರೆ ಎಲ್ಲರ ಫ್ಯಾಮಿಲಿ ನು ಚೆನ್ನಾಗಿರಬೇಕು ಹೋಗುವಾಗ ಏನು ತಗೊಂಡ್ ಹೋಗಲ್ಲ ನಾವು ಅಂತ ತಿಳ್ಕೊಂಡಿರೋಳು ಬದುಕಿರೋದು ಇಷ್ಟು ದಿನ ಪ್ರೀತಿ ವಿಶ್ವಾಸ ನಂಬಿಕೆ ಇಂದಾನೆ ಜೀವನ ಮಾಡಬೇಕು ಅನ್ನೋದು,ನನ್ ಸುದ್ದಿಗೆ ಬಂದ್ರೆ ಡು ಆರ್ ಡೈ ಕೆಟ್ಟ ಕೆಲಸ ಮಾಡಿ ನೂರು ದಿನ ಬದುಕುವುದಕ್ಕಿಂತ ಒಳ್ಳೆ ಕೆಲಸ ಮಾಡಿ ಒಂದಿನ ಬದುಕೋದು ಗ್ರೇಟ್ ಮನ್ಸಲ್ಲಿರೋದನ್ನ ಹೇಳಲೇಬೇಕು ಆಗಲೇ ನಂಗೆ ಸಮಾಧಾನ ಎಂದು ಸಾಮಾಜಿಕ ಜಾಲತಾಣದಲ್ಲಿ ನಟಿ ಇಳಾ ವಿಟ್ಲ ಬರೆದುಕೊಂಡಿದ್ದಾರೆ.

https://www.facebook.com/profile.php?id=100018580271331

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು