ಬೆಂಗಳೂರು: ವಿಜಯ ರಾಘವೇಂದ್ರ ಅವರು ನಿಧಾನವಾಗಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು ಇವರು ಅಭಿನಯಿಸಿದ ‘ಕೇಸ್ ಆಫ್ ಕೊಂಡಾಣ’ ಸಿನಿಮಾ ಜನವರಿ 26ರಂದು ರಿಲೀಸ್ ಆಗಲಿದೆ.
‘ಕೇಸ್ ಆಫ್ ಕೊಂಡಾಣ’ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ಜೊತೆಯಾಗಿ ಭಾವನಾ ಮೆನನ್ ಕಾಣಿಸಿಕೊಂಡಿದ್ದಾರೆ. ದೇವಿಪ್ರಸಾದ್ ಶೆಟ್ಟಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಗಗನ್ ಬಡೇರಿಯಾ ಸಂಗೀತ ನೀಡಿದ್ದಾರೆ. ವಿಶ್ವ ಜಿತ್ ರಾವ್ ಛಾಯಾಗ್ರಹಣ ಮಾಡಿದ್ದಾರೆ. ಭವಾನಿ ಶಂಕರ್ ಆನೆಕಲ್ಲು ಕಲಾ ನಿರ್ದೇಶನ ಹಾಗೂ ಶಶಾಂಕ್ ನಾರಾಯಣ್ ಸಂಕಲನವಿದೆ. ಜೋಗಿ ಸಂಭಾಷಣೆ ಬರೆದಿದ್ದಾರೆ.
ಈ ಮೊದಲುದೇವಿಪ್ರಸಾದ್ ಶೆಟ್ಟಿ ‘ಸೀತಾರಾಮ್ ಬಿನೋಯ್’ ಹೆಸರಿನ ಸಿನಿಮಾ ಮಾಡಿದ್ದರು. ಈಗ ಅವರು ಇನ್ವೆಸ್ಟಿಗೇಷನ್ ಜಾನರ್ನ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಚಿತ್ರವನ್ನು ಸಾತ್ವಿಕ್ ಹೆಬ್ಬಾರ್ ನಿರ್ಮಾಣ ಮಾಡಿದ್ದು,ಖುಷಿ ರವಿ ಹಾಗೂ ರಂಗಾಯಣ ರಘು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.