ಬೆಂಗಳೂರು: ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ 47ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳಿಗೆ ಮೊತ್ತೊಂದು ಸರ್ಪ್ರೈಸ್ ಕೊಟ್ಟಿದ್ದಾರೆ ದರ್ಶನ್. ಅವರ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಸಾವಿರಾರು ಸಂಖ್ಯೆಯಲ್ಲಿ ದರ್ಶನ್ ನಿವಾಸದ ಎದುರು ಅಭಿಮಾನಿಗಳು ಜಮಾಯಿಸಿದ್ರು. ಚಳಿಯನ್ನೂ ಲೆಕ್ಕಿಸದೇ ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಅಭಿಮಾನಿಗಳು ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಹಾರೈಕೆ ತಿಳಿಸಿದ್ದರು.
ಮಿಲನ ಪ್ರಕಾಶ್ ನಿರ್ದೇಶನದ ಡೆವಿಲ್ ಸಿನಿಮಾದ ಫಸ್ಟ್ ಲುಕ್ ವೇದಿಕೆಯಲ್ಲಿ ಬಿಡುಗಡೆ ಮಾಡಲಾಯ್ತು. ಚಾಲೆಂಜಿಂಗ್ ಸ್ಟಾರ್ ಹೊಸ ಅವತಾರಕ್ಕೆ ಅಭಿಮಾನಿಗಳು ಜೈಕಾರ ಕೂಗಿದರು.
ಬೆಳಗ್ಗೆಯೂ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದು, ಪೊಲೀಸ್ ಬಿಗಿ ಭದ್ರತೆ ವಹಿಸಲಾಗಿದೆ. ಉಳಿದಂತೆ ದರ್ಶನ್ ನೋಡಲು ಆಗಮಿಸಲಿರೋ ಸಾವಿರಾರು ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
ವಿಶೇಷ ಏನಂದ್ರೆ ಈ ವರ್ಷವೂ ಯಾವುದೇ ಕೇಕ್, ಹಾರ, ತುರಾಯಿ ತರದಂತೆ ಅಭಿಮಾನಿಗಳಿಗೆ ದಚ್ಚು ಮನವಿ ಮಾಡಿದ್ದರು. ಬದಲಿಗೆ ಅನಾಥಾಶ್ರಮ, ವೃದ್ಧಾಶ್ರಮಕ್ಕೆ ಸಹಾಯವಾಗುವಂತೆ ಅಕ್ಕಿ, ಬೇಳೆ, ಎಣ್ಣೆ ತರಲು ತಿಳಿಸಿದ್ದರು. ಅದರಂತೆ ಫ್ಯಾನ್ಸ್ ದವಸ- ಧಾನ್ಯಗಳನ್ನು ತಂದಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ