‘ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾದ ಟೀಸರ್ ಬಿಡುಗಡೆ

ಬೆಂಗಳೂರು:  ‘ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾದ ಟೀಸರ್​ ಅನ್ನು ಖ್ಯಾತ ನಟ ವಸಿಷ್ಠ ಸಿಂಹ ಅವರು ಬಿಡುಗಡೆ ಮಾಡಿದ್ದಾರೆ. ಸಿನಿಮಾದ  ಟೀಸರ್ ನೋಡಿ ಪ್ರೇಕ್ಷಕರು ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ.

ಮಲಗಿರುವ ವ್ಯಕ್ತಿಯ ಬೆನ್ನಿನ ಮೇಲೆ ಇನ್ನೂ ಮೂವರು ಒಬ್ಬರ ಮೇಲೊಬ್ಬರಂತೆ ನಿಂತುಕೊಂಡಿರುವುದು ಈ ಟೀಸರ್​ನಲ್ಲಿ ಹೈಲೈಟ್​ ಆಗಿದೆ. ಅದರ ಹಿಂದಿರುವ ಕಥೆ ಏನು ಎಂಬುದನ್ನು ತಿಳಿಯಲು ಪೂರ್ತಿ ಸಿನಿಮಾ ನೋಡಬೇಕು.

ಟೀಸರ್ ಬಿಡುಗಡೆ ಮಾಡಿ ‘ಒಳ್ಳೆಯ ಸಂದೇಶದ ಜೊತೆಗೆ, ಸಮಾಜದಲ್ಲಿ ನಡೆದಿರುವ ವಿಷಯಗಳನ್ನು ಪರೆದೆ ಮೇಲೆ ತೋರಿಸಿರುವುದು ಟೀಸರ್​ನಲ್ಲಿ ಕಾಣಿಸಿದೆ. ಇಂತಹ ಚಿತ್ರಗಳು ಜನರಿಗೆ ಹೆಚ್ಚು ತಲುಪಬೇಕು’ ಎಂದು ವಸಿಷ್ಠ ಸಿಂಹ ಹೇಳಿದ್ದಾರೆ.

ಅದೇ ರೀತಿ, ‘ಸೂಪರ್ ಸ್ಟಾರ್’ ರಜನಿಕಾಂತ್ ಅವರ ಸಿನಿಮಾಗೆ ನಿರ್ದೇಶನ ಮಾಡಿರುವ ತಮಿಳಿನ ಪಾ. ರಂಜಿತ್ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ್ದಾರೆ.

‘ಎ2’ ಮ್ಯೂಸಿಕ್​ ಮೂಲಕ ಬಿಡುಗಡೆ ಆಗಿರುವ ಈ ಸಿನಿಮಾ ಯಾವುದೇ ಗ್ರಾಫಿಕ್ಸ್ ಬಳಸದೆ ರಿಯಲಿಸ್ಟಿಕ್​ ಆಗಿ ಚಿತ್ರೀಕರಣ ಮಾಡಿದೆ.

ಈ ಸಿನಿಮಾದಲ್ಲಿ ಹೀರೋ ಆಗಿ ವಿವಾನ್ ಕೆ.ಕೆ. ನಟಿಸಿದ್ದಾರೆ. ನಾಯಕಿಯಾಗಿ ಅನುಷಾ ರೈ ಅಭಿನಯಿಸಿದ್ದಾರೆ. ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಯಶ್‌ಶೆಟ್ಟಿ, ಚಕ್ರವರ್ತಿ ಚಂದ್ರಚೂಡ್, ಬಾಲ ರಾಜವಾಡಿ, ವರ್ಧನ್, ಪ್ರದೀಪ್‌ ಪೂಜಾರಿ, ರಾಮ್‌ ಪವನ್ ಶೆಟ್ಟಿ, ರಾಮ್‌ ನಾಯಕ್, ಅರ್ಜುನ್‌ ಪಾಳೆಗಾರ, ಪದ್ಮಿನಿ ಶೆಟ್ಟಿ, ಹೊಂಗಿರಣ ಚಂದ್ರು ಮುಂತಾದವರು ನಟಿಸಿದ್ದಾರೆ.

ಎ.ಆರ್. ಸಾಯಿರಾಮ್ ಅವರು ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ.  ರವಿಕುಮಾರ್ ಸನಾ ಅವರ ಛಾಯಾಗ್ರಹಣ, ಕುಂಗ್​ಫು ಚಂದ್ರು ಅವರು ಸಾಹಸ ನಿರ್ದೇಶನ ಹಾಗೂ ಕ್ಯಾಪ್ಟನ್ ಕಿಶೋರ್ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. ಐದು ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಅವರು ಸಂಗೀತ ನೀಡಿದ್ದಾರೆ. ಕಿನ್ನಾಳ್‌ರಾಜ್ ಅವರು ಸಾಹಿತ್ಯ ಬರೆದಿದ್ದಾರೆ.

Ashika S

Recent Posts

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

5 mins ago

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

16 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

24 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

40 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

47 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

1 hour ago