ಮನೋಜ್ ಅಭಿನಯದ ʻಧರಣಿʼ  ಸಿನಿಮಾದ ಪೋಸ್ಟರ್ ಬಿಡುಗಡೆ

ಬೆಂಗಳೂರು: ನಾಯಕನಟ ಮನೋಜ್ ಅವರ ಹುಟ್ಟುಹಬ್ಬಕ್ಕೆ ʻಧರಣಿʼ  ಸಿನಿಮಾದ ಕಲಾತ್ಮಕ ಪೋಸ್ಟರ್ ಬಿಡುಗಡೆಗೊಂಡಿದೆ.

ಒಂದು ಕಡೆ ಹೀರೋ ಮನೋಜ್, ಮತ್ತೊಂದು ಬದಿಯಲ್ಲಿ ಕಾಳಗಕ್ಕೆ ಅಣಿಯಾದ ಕೋಳಿಯನ್ನು ಹೊಂದಿರುವ ಈ ಪೋಸ್ಟರ್ ವಿನ್ಯಾಸ ಎಲ್ಲರ ಗಮನ ಸೆಳೆದಿದೆ. ರಾಷ್ಟೀಯ ಮಟ್ಟದಲ್ಲಿ ಹೆಸರು ಮಾಡಿರುವ ಕಲಾವಿದ ಟಿ.ಎಫ್. ಹಾದಿಮನಿ ಈ ಪೋಸ್ಟರನ್ನು ರಚಿಸಿದ್ದಾರೆ.

ಎ ಕ್ಯೂಬ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ʻಧರಣಿʼ ಚಿತ್ರಕ್ಕೆ ಶಶಾಂಕ್ ಶೇಷಗಿರಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಅರುಣ್ ಸುರೇಶ್ ಛಾಯಾಗ್ರಹಣವಿದೆ. ಸುಧೀರ್ ಶ್ಯಾನುಭೋಗ್ ಸಿನಿಮಾವನ್ನು ನಿರ್ದೇಶಿಸಿದ್ದಾರೆ.

ಮೇಲ್ನೋಟಕ್ಕೆ ಕೋಳಿ ಪಂದ್ಯದ ಸುತ್ತ ತೆರೆದುಕೊಳ್ಳುವ ಕಥೆ ಈ ಚಿತ್ರದಲ್ಲಿದ್ದರೂ, ಈ ವರೆಗೆ ಯಾರೂ ಹೇಳದ ಅನೇಕ ವಿಚಾರಗಳು ಅಡಕಗೊಂಡಿವೆ.

ಈ ಚಿತ್ರದಲ್ಲಿ ಮನೋಜ್ ಗೆ  ನಾಯಕಿಯಾಗಿ ಹೊಸ ಪ್ರತಿಭೆ ರವೀಕ್ಷಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಜೊತೆಗೆ ಸಂಪತ್ ಮೈತ್ರೇಯ, ಫ್ರೆಂಚ್ ಬಿರಿಯಾನಿ ಖ್ಯಾತಿಯ ಮಹಂತೇಶ್, ಸ್ಪಂದನಾ ಪ್ರಸಾದ್, ಸತ್ಯರಾಜ್ ಮೊದಲಾದವರ ತಾರಾಗಣವಿದೆ.

ನೆಲದ ಕಥೆಯನ್ನೇ ಪ್ರಧಾನವಾಗಿರಿಸಿಕೊಂಡು ರೂಪುಗೊಳ್ಳುತ್ತಿರುವ ಸಿನಿಮಾ ಧರಣಿ.  ಇದರಲ್ಲಿ  ಬರೋಬ್ಬರಿ ಐದು ಫೈಟ್ಗಳನ್ನು ಹೊಂದಿದೆ. ಈ ಐದೂ ಸಾಹಸ ಸನ್ನಿವೇಶಗಳು ಒಂದಕ್ಕಿಂತಾ ಒಂದು ಭಿನ್ನವಾಗಿವೆ.

 

Ashika S

Recent Posts

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

8 mins ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

2 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

2 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

2 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

3 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

3 hours ago