News Karnataka Kannada
Friday, May 03 2024
ಸಾಂಡಲ್ ವುಡ್

ನೇಹಾ ಕೊಲೆ ಪ್ರಕರಣ: ಆರೋಪಿಯನ್ನ ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್

ಧಾರವಾಡದಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ಸ್ಯಾಂಡಲ್​​ವುಡ್​ ತಾರೆಯರೂ ಸಹ ಈ ಘಟನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
Photo Credit : NewsKarnataka

ಬೆಂಗಳೂರು: ಧಾರವಾಡದಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ಸ್ಯಾಂಡಲ್​​ವುಡ್​ ತಾರೆಯರೂ ಸಹ ಈ ಘಟನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ನಟಿ ರಚಿತಾ ರಾಮ್​ ಕೂಡ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೇಹಾ ಫೋಟೋ ಹಂಚುವ ಮೂಲಕ ನ್ಯಾಯಕ್ಕಾಗಿ ಧ್ವನಿ ಎತ್ತಿದ್ದಾರೆ.

ಜಾತಿ, ಧರ್ಮ ಯಾವುದೇ ಆಗಿರಲಿ ಮೊದಲು ನಾವು ಮಾನವರು. ನಾನು ಈ ಪೋಸ್ಟ್​ ಹಾಕಲು ಕಾರಣ ಆಕೆಗೆ ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ. ಸರ್ಕಾರಕ್ಕೆ ನನ್ನ ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ #Wewantjustice ಎಂದು ಇನ್​​ಸ್ಟಾಗ್ರಾಂನ  ತಮ್ಮ ಖಾತೆಯಲ್ಲಿ  ಬರೆದುಕೊಂಡಿದ್ದಾರೆ.

 

View this post on Instagram

 

A post shared by Rachitaa Ram (@rachita_instaofficial)

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು