ಕಾಂತಾರ ಚಿತ್ರಕ್ಕೆ ಐತಿಹಾಸಿಕ ಕೊಡಲಿ ನೀಡಲು ಮುಂದಾದ ಕಾಸರಗೋಡಿನ ರಾಜಮನೆತನ

ಕಾಸರಗೋಡು: ಕಾಂತಾರ ಪ್ರೀಕ್ವೆಲ್ ಭಾರಿ ಕುತೂಹಲ ಮೂಡಿಸಿದೆ. ಈಗಾಗಲೇ ಚಿತ್ರಕ್ಕೆ ಅದ್ಧೂರಿಯಾಗಿ ಮುಹೂರ್ತ ನಡೆದಿದೆ. ಕಾಂತಾರದಲ್ಲಿ ತುಳುನಾಡಿನ ಆರಾಧ್ಯ ದೈವ ಪಂಜುರ್ಲಿಯನ್ನು ಮೂಲ ಕಥಾವಸ್ತುವನ್ನಾಗಿಟ್ಟು ಚಿತ್ರದ ಕಥೆಯನ್ನು ಹಣೆಯಲಾಗಿದೆ. ಆದರೆ ಮುಂಬರುವ ಕಾಂತಾರ ಪ್ರೀಕ್ವೆಲ್‌ನಲ್ಲಿ ನಿರ್ದೇಶಕ- ನಟ ರಿಷಬ್ ಶೆಟ್ಟಿ ದೈವಾರಾಧನೆಯ ಜೊತೆಗೆ ತುಳುನಾಡಿನ ಚರಿತ್ರೆಯನ್ನು ತೋರಿಸಲು ಹೊರಟಿದ್ದಾರೆ.

ತುಳುನಾಡಿನ ಚರಿತ್ರೆ ಎಂದ ಮೇಲೆ ತುಳುನಾಡಿನ ಸೃಷ್ಠಿಕರ್ತ ಪರಶುರಾಮನ ಕಥೆ ಇಲ್ಲದೇ ಹೋದಲ್ಲಿ ತುಳುನಾಡಿನ ಚರಿತ್ರೆ ಅಪೂರ್ಣವೇ. ಪರಶುರಾಮ ತನ್ನ ತಂದೆಯ ಸಾವಿಗೆ‌ ಸೇಡು ತೀರಿಸಲು ಇಡೀ ಕ್ಷತ್ರಿಯ ವಂಶವನ್ನು ಬಲಿ ತೆಗೆಯಲು ಬಳಸಿದ್ದ ಚಂದ್ರಾಯುಧದಂತಹದೇ ಕೊಡಲಿಯೊಂದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಚಿಪ್ಪಾರು ಅರಮನೆಯಲ್ಲಿದೆ.

ಈ ಸುಮಾರು 400 ರಿಂದ 450 ವರ್ಷ ಇತಿಹಾಸವಿರುವ ಈ ಚಂದ್ರಾಯುಧದ ಹಿಡಿಯನ್ನು ಗಂಧದ ಹುಡಿಯನ್ನು ಬಳಸಿ ಮಾಡಲಾಗಿದೆ. 450 ವರ್ಷ ಕಳೆದರೂ ಇಂದಿಗೂ ಅತ್ಯಂತ ಗಟ್ಟಿಮುಟ್ಟಾಗಿ ಇರುವ ಈ ಆಯುಧವನ್ನು ಚಿಪ್ಪಾರು ರಾಜಮನೆತನದ ಮಂದಿ ಇಂದಿಗೂ ಉಳಿಸಿಕೊಂಡಿದ್ದಾರೆ.

ಪರಶುರಾಮ ಬಳಸಿದ್ದಾರೆ ಎನ್ನಲಾದ ಈ ಆಯುಧವನ್ನು ತುಳುನಾಡಿನ ಚರಿತ್ರೆಯ ಚಿತ್ರಕಥೆಯಿರುವ ಕಾಂತಾರ ಪ್ರೀಕ್ವೆಲ್‌ಗೆ ಕೊಡುವುದಾಗಿ ಹೇಳಿದ್ದಾರೆ. ನಿರ್ದೇಶಕ ರಿಷಬ್ ಶೆಟ್ಟಿ ಬಯಸಿದಲ್ಲಿ ಈ ಆಯುಧವನ್ನು ನೀಡಿ ಸಹಕರಿಸಲು ಚಿಪ್ಪಾರು ಮನೆತನದ ಹಿರಿಯರಾದ ತಿರುಮಲ ಬಳ್ಳಾಲ್ ಉತ್ಸುಕರಾಗಿದ್ದಾರೆ. ರಾಜ ಮನೆತನದ ಹಿರಿಯರು ಈ ಆಯುಧವನ್ನು ಕಾಡುಪ್ರಾಣಿಗಳ ಬೇಟೆಯಾಡಲು ಬಳಸುತ್ತಿದ್ದರು ಎನ್ನುವ ಮಾಹಿತಿಯನ್ನು ತಿರುಮಲ ಬಳ್ಳಾಲರು ನೀಡುತ್ತಾರೆ.

ಪ್ರಾಚೀನ ವಸ್ತುಗಳ ಸಂಗ್ರಹಗಾರರೂ ಆಗಿರುವ ತಿರುಮಲ ಬಳ್ಳಾಲರು ತಮ್ಮ ಹಿರಿಯರು ಬಳಸುತ್ತಿದ್ದ ಹಲವು ಮರದ, ಲೋಹದ ಮತ್ತು ಮಣ್ಣಿನ ಪರಿಕರಗಳನ್ನೂ ತಮ್ಮ ಸಂಗ್ರಹದಲ್ಲಿ ಜೋಡಿಸಿಟ್ಟುಕೊಂಡಿದ್ದಾರೆ.

Ashika S

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

13 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

35 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

41 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

59 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

1 hour ago