ಬೆಂಗಳೂರು: ದರ್ಶನ್ ಅಭಿನಯದ ಕಾಟೇರ ಸಿನಿಮಾ ಈಗಾಗಲೇ ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿದೆ. 3 ದಿನದಲ್ಲಿ 50 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಕಂಡಿರುವ ಸಿನಿಮಾ, ದಿನದಿಂದ ದಿನಕ್ಕೆ ಪ್ರದರ್ಶನದ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ.
ಡಿಸೆಂಬರ್ 29ರಂದು ಬಿಡುಗಡೆಯಾದ ಸಿನಿಮಾ ದರ್ಶನ್ ವೃತ್ತಿ ಜೀವನದಲ್ಲೇ ಇದು ದೊಡ್ಡ ಮಟ್ಟದ ಹಿಟ್ ಆಗುವ ಎಲ್ಲಾ ಸೂಚನೆ ಸಿಕ್ಕಿದೆ. ಕಲೆಕ್ಷನ್ ವಿಚಾರದಲ್ಲಿ ಕೂಡ ಮತ್ತೊಂದು ಮೈಲಿಗಲ್ಲು ಸಾಧಿಸುವ ಸಾಧ್ಯತೆ ಇದೆ.
ವಿದೇಶದಲ್ಲೂ ರಿಲೀಸ್ಗೆ ಸಿದ್ಧತೆ: ಕಾಟೇರ ಚಿತ್ರತಂಡ ಈಗ ವಿದೇಶದಲ್ಲೂ ದೊಡ್ಡ ಮಟ್ಟದ ಬಿಡುಗಡೆಗೆ ಸಜ್ಜಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ “ಕಾಟೇರಾ ಜನವರಿ 6 ರಂದು ದುಬೈನಲ್ಲಿ ಪ್ರೀಮಿಯರ್ ಆಗಲಿದೆ, ಹೆಚ್ಚುವರಿಯಾಗಿ, ಜರ್ಮನಿ, ಯುಕೆ, ಯುಎಸ್ಎ, ಕೆನಡಾ ಮತ್ತು ಐರ್ಲೆಂಡ್ ಸೇರಿದಂತೆ ಸುಮಾರು 9 ದೇಶಗಳಲ್ಲಿ ಬಿಡುಗಡೆ ಮಾಡುಲು ಸಜ್ಜಾಗಿದೆ. ಬಿಡುಗಡೆ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.” ಎಂದು ಹೇಳಿದ್ದಾರೆ.
ರಾಕ್ಲೈನ್ ವೆಂಕಟೇಶ್ ಕಾಟೇರಾವನ್ನು ಡಬ್ ಮಾಡಿ ಶೀಘ್ರದಲ್ಲೇ ಬಹು ಭಾಷೆಗಳಲ್ಲಿ ಬಿಡುಗಡೆ ಮಾಡಲು ಯೋಜಿಸಿದ್ದಾರೆ.
ರಾಕ್ಲೈನ್ ಎಂಟರ್ಟೈನ್ಮೆಂಟ್ ಅಡಿಯಲ್ಲಿ ತರುಣ್ ಕಿಶೋರ್ ಸುಧೀರ್ ನಿರ್ದೇಶಿಸಿದ ಈ ಕಮರ್ಷಿಯಲ್ ಎಂಟರ್ಟೈನರ್ ರೈತರ ಸಮಸ್ಯೆಗಳ ಬಗ್ಗೆ ಮಾತನಾಡುವ ಸಿನಿಮಾ ಆಗಿದೆ.
ನಗರದ ವೀರಾಪೂರ ಓಣಿಯಲ್ಲಿ ಬಡ ಕುಟುಂಬಕ್ಕೆ ಸೇರಿದ ಅಂಜಲಿ ಮೋಹನ ಅಂಬಿಗೇರ ಕೊಲೆ ವಿರೋಧಿಸಿ ಕರ್ನಾಟಕ ರಾಜ್ಯ ಭೋವಿ (ವಡ್ಡರ)…
ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಧಾವಿಸುತ್ತಿದ್ದ ಸ್ಕೂಟರ್ಗೆ ಕಲ್ಲಾಪು ಜಂಕ್ಷನ್ ನಲ್ಲಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಮತ್ತೊಂದು ಸ್ಕೂಟರ್ ಢಿಕ್ಕಿ ಹೊಡೆದ…
ಶಿಕ್ಷಕರು ಮತ್ತು ಸಾರ್ವಜನಿಕರು ಒಗ್ಗಟ್ಟಿನಿಂದ ಶ್ರಮಿಸಿದರೆ, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನು ಮೀರಿಸುವಂತೆ ಬೆಳೆಯುತ್ತವೆ. ಇದಕ್ಕೆ ಪಟ್ಟಣದ ಸರ್ಕಾರಿ ಪ್ರೌಢಶಾಲೆ…
ಜೊಮ್ಯಾಟೊದಿಂದ ಆರ್ಡರ್ ಮಾಡಿದ ಪನೀರ್ ಬಿರಿಯಾನಿಯಲ್ಲಿ ಚಿಕನ್ ಪೀಸ್ ಸಿಕ್ಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಅಂಜಲಿ ಕೊಲೆಗೆ ಪೊಲೀಸರೆ ಹೊಣೆ ಅವರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ಅಂಜಲಿ…
ಮೂರು ಬಾರಿ ಶಾಸಕನಾಗಿದ್ದ ತಮಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ…