News Karnataka Kannada
Saturday, May 04 2024
ಸಾಂಡಲ್ ವುಡ್

ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಮತ್ತೊಮ್ಮೆ ರಕ್ಷಿತಾ ಪ್ರೇಮ್‌ ಭೇಟಿ

Rakshitha Prem visits the adithala of Kattaru Koragajja once again
Photo Credit : News Kannada

ಉಳ್ಳಾಲ: ಕುತ್ತಾರು ಕೊರಗಜ್ಜನ ಆದಿಸ್ಥಳ, ಭಂಡಾರ ಬೈಲು ಪಂಜಂದಾಯ, ಬಂಟ, ವೈದ್ಯನಾಥ ಕ್ಷೇತ್ರಕ್ಕೆ ಮೂರು ತಿಂಗಳಿಗೊಮ್ಮೆ ಬಂದೇ ಬರ್ತೀನಿ ಎಂದು ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.

ಅವರು ಶುಕ್ರವಾರ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅವರು ಕುತ್ತಾರು ಭಂಡಾರ ಬೈಲಿನ ಪಂಜಂದಾಯ, ಬಂಟ, ವೈದ್ಯನಾಥ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುತ್ತಾರಿನ ಕೊರಗಜ್ಜ ಮತ್ತು ಪಂಜಂದಾಯ, ಬಂಟ ಕ್ಷೇತ್ರದ ಕಾರಣೀಕ ಹೇಳಲು ಅಸಾಧ್ಯ. ಕೊರಗಜ್ಜನೇ ಇಲ್ಲಿಗೆ ಮೂರು ತಿಂಗಳಿಗೊಮ್ಮೆ ನನ್ನನ್ನ ಕರೆಸ್ಕೋತಾರೆ ಅಂದ್ಕೊಂಡಿದ್ದೇನೆ. ವಿಶೇಷವಾಗಿ ಭಂಡಾರ ಬೈಲಿನ ಪಂಜಂದಾಯ ದೈವದ ಕ್ಷೇತ್ರವು ಪ್ರಶಾಂತವಾಗಿ ಮನಸ್ಸಿಗೆ ನೆಮ್ಮದಿ ಕೊಡುತ್ತದೆ. ಹಾಗಾಗಿ ಕುತ್ತಾರಿಗೆ ಭೇಟಿ ನೀಡಿದಾಗ ಪಂಜಂದಾಯ ಕ್ಷೇತ್ರದಲ್ಲಿ ಕುಳಿತು ಹೋಗುತ್ತೇನೆ. ಹೆಚ್ಚಿನ‌ ಬೇಡಿಕೆ ಏನೂ ಇಡಲ್ಲ, ಎಲ್ಲವನ್ನೂ ಕೊಟ್ಟ ದೈವ, ದೇವತೆಗಳು ನನ್ನ ಕೈಬಿಡದಂತೆ ಪ್ರಾರ್ಥಿಸುತ್ತೀನಿ. ಇಲ್ಲಿಂದ ಪ್ರತೀ ಬಾರಿ ಕಟೀಲು, ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು