ಬೆಂಗಳೂರು: ಸನಾತನ ಧರ್ಮದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಪರ ವಿರೋಧ ಚರ್ಚೆಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಹಿರಿಯ ನಟ ಅನಂತನಾಗ್ ಮಾತನಾಡಿದ್ದಾರೆ.
ಸನಾತನ ಧರ್ಮದ ಮಹತ್ವ ಅರಿಯದೇ ಅದರ ಬಗ್ಗೆ ಕೆಟ್ಟದಾಗಿ ಟೀಕೆ ಮಾಡುತ್ತಾರೆ. ಅಜ್ಮಾನದಿಂದ ಮಾತನಾಡುವವರನ್ನು ತಿದ್ದುವ ಕೆಲಸ ನಡೆಯಬೇಕು ಎಂದು ಹೇಳಿದ್ದಾರೆ.
ಭಾರತೀಯ ವಿದ್ಯಾಭವನ ಮತ್ತು ಸುಚಿತ್ರ ಫಿಲಂ ಸೊಸೈಟಿ ಆಯೋಜಿಸಿದ್ದ ಮೂರು ದಿನಗಳ ಅನಂತ್ ನಾಗ್ ಉತ್ಸವದಲ್ಲಿ ಅವರು ಮಾತನಾಡಿದರು, ಸಾವಿರಾರು ವರ್ಷಗಳಿಂದ ಸನಾತನ ಧರ್ಮ ಬೆಳೆದು ಬಂದಿದೆ. ಹಲವು ಮೈಲಿಗಲ್ಲುಗಳನ್ನು ಸಾಧಿಸಿದೆ. ಈ ಧರ್ಮದ ಬಗ್ಗೆ ನನಗೆ ಭಕ್ತಿ, ಗೌರವ, ಪ್ರೀತಿಯಿದೆ.
ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಈಗ ಎಲ್ಲಿ ನೋಡಿದರೂ ಸನಾತನ ಧರ್ಮವನ್ನು ಅವಹೇಳನ ಮಾಡಲಾಗುತ್ತಿದೆ. ಇದು ಆತಂಕವನ್ನುಂಟು ಮಾಡಿದೆ. ಕೈಲಾಗದವರು ಮೈ ಪರಚಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಸನಾತನ ಧರ್ಮದ ಕುರಿತು ಅರಿವು ಮೂಡಿಸುವ ಕೆಲಸ ನಡೆಯಬೇಕು ಎಂದರು.
ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…