ಕನ್ನಡ ಚಿತ್ರರಂಗದ “ಸುಪ್ರೀಂ ಹೀರೋ’ ಖ್ಯಾತಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ನಾಯಕನಾಗಿ ಅಭಿನಯಿಸಿರುವ ಚೊಚ್ಚಲ ಚಿತ್ರ “ಸೀತಾಯಣ’ ಇಂದು ಬಿಡುಗಡೆಯಾಗುತ್ತಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿರುವ “ಸೀತಾಯಣ’ ಚಿತ್ರದ ಮೂಲಕ ಅಕ್ಷಿತ್ ಶಶಿಕುಮಾರ್ ಲವರ್ ಬಾಯ್ ಕಂ ಆಯಕ್ಷನ್ ಹೀರೋ ಆಗಿ ಸ್ಯಾಂಡಲ್ ವುಡ್ ಮತ್ತು ಟಾಲಿವುಡ್ಗೆ ಏಕಕಾಲದಲ್ಲಿ ಎಂಟ್ರಿಕೊಡುತ್ತಿದ್ದಾರೆ. ತಮ್ಮ ಮೊದಲ ಸಿನಿಮಾ ಮತ್ತದರ ಬಿಡುಗಡೆಯ ಬಗ್ಗೆ ಮಾತನಾಡಿದ ಅಕ್ಷಿತ್ ಕೆಲ ವಿಷಯಗಳನ್ನು ಹಂಚಿಕೊಂಡರು.
ಇನ್ನು “ಸೀತಾಯಣ’ ಚಿತ್ರದಲ್ಲಿ ನಾಯಕ ಅಕ್ಷಿತ್ ಶಶಿಕುಮಾರ್ಗೆ ನಾಯಕಿಯಾಗಿ ಅನಹಿತಾ ಭೂಷಣ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ವಿಕ್ರಂ ಶರ್ಮಾ, ಶರ್ಮಿತಾ ಗೌಡ, ಮಧು ಸೂದನ್, ಮೇಘನಾ ಗೌಡ, ಅಜಯ್ ಘೋಷ್, ಹಿತೇಶ್, ವಿಧೆಯುಲೇಖ ರಮನ್, ಬಿತ್ರಿಸತ್ತಿ, ಕೃಷ್ಣ ಭಗವಾನ್, ಅನಂತ ಬಾಬು, ಗುಂಡು ಸುದರ್ಶನ್, ಮಧುಮಣಿ, ಅಪ್ಪರಾವ್, ಲೋಬೋ ಮತ್ತಿತರರು ಇತರ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಪ್ರಭಾಕರ್ ಆರಿಪ್ಕಾ ನಿರ್ದೇಶನ “ಸೀತಾಯಣ’ ಚಿತ್ರವನ್ನು “ಕಲರ್ ಕ್ಲೌಡ್ಸ್ ಎಂಟರ್ಟೈನ್ಮೆಂಟ್’ ಬ್ಯಾನರ್ನಲ್ಲಿ ಲಲಿತಾ ರಾಜಲಕ್ಷ್ಮೀ ನಿರ್ಮಿಸಿದ್ದಾರೆ. ಒಟ್ಟಾರೆ ಅಕ್ಷಿತ್ ಶಶಿಕುಮಾರ್ ಚೊಚ್ಚಲ ಚಿತ್ರ “ಸೀತಾಯಣ’ ಹೇಗಿರಲಿದೆ ಎಂಬುದು ಇದೇ ವಾರಾಂತ್ಯಕ್ಕೆ ಗೊತ್ತಾಗಲಿದೆ.