ಅಚ್ಚರಿಯ ವಿಚಾರ ತೆರೆದಿಟ್ಟ ನವರಸ ನಾಯಕ ಜಗ್ಗೇಶ್

ಜನಪ್ರಿಯ ನಟ ಜಗ್ಗೇಶ್  ತಮ್ಮ ಬದುಕಿನ ಪ್ರತಿ ಹಂತದಲ್ಲಿ ಗುರು ರಾಯರನ್ನು ಜಗ್ಗೇಶ್​ ಸ್ಮರಿಸಿಕೊಳ್ಳುತ್ತಾರೆ. ಯಾಕೆಂದರೆ, ಸಾಮಾನ್ಯ ಹಳ್ಳಿ ಹುಡುಗನೊಬ್ಬ ನಂತರ ‘ನವರಸ ನಾಯಕ’  ಆಗುವ ಮಟ್ಟಕ್ಕೆ ಬೆಳೆಯಲು ರಾಯರ ಕೃಪೆಯೇ ಕಾರಣ ಎಂದು ಅವರು ಬಲವಾಗಿ ನಂಬಿದ್ದಾರೆ. ಆ ನಂಬಿಕೆಯ ಬೀಜವನ್ನು ಪ್ರತಿಯೊಬ್ಬರ ಮನದಲ್ಲೂ ಅವರು ಬಿತ್ತುತ್ತಾರೆ. ತಮ್ಮ ಬದುಕಿನಲ್ಲಿ ರಾಘವೇಂದ್ರ ಸ್ವಾಮಿಗಳ ಪವಾಡ ಯಾವೆಲ್ಲ ರೀತಿ ನಡೆದಿದೆ ಎಂಬುದನ್ನು ಜಗ್ಗೇಶ ಆಗಾಗ ತಿಳಿಸಿಕೊಡುತ್ತಾರೆ. ಈಗ ಅಂಥದ್ದೇ ಒಂದು ಪ್ರಸಂಗವನ್ನು ಅವರು ನೆನಪಿಸಿಕೊಂಡಿದ್ದಾರೆ. ಅದು ಬರೋಬ್ಬರಿ 40 ವರ್ಷಗಳ ಹಿಂದಿನ ಘಟನೆ. ಅದನ್ನು ಈಗ ಜಗ್ಗೇಶ್​ ಮೆಲುಕು ಹಾಕಿದ್ದಾರೆ. ಅವರ ಬರಹ ಇಲ್ಲಿದೆ..

‘ಬಹಳ ವರ್ಷದ ನಂತರ ನಾನು ಮಂತ್ರಾಲಯದಲ್ಲಿ ಉಳಿಯುತ್ತಿದ್ದ ಹುಬ್ಬಳ್ಳಿ ಧರ್ಮ ಛತ್ರಕ್ಕೆ ಭೇಟಿಕೊಟ್ಟೆ. 1980-81ರಲ್ಲಿ ಸಿನಿಮಾರಂಗದಲ್ಲಿ ನನಗೆ ಅವಕಾಶ ಸಿಗುತ್ತಿರಲಿಲ್ಲ. ಒಂದು ದಿನ ಛಾಯಾಗ್ರಹಕ ಹಾಗು ಗುರುಗಳು ಸುಂದರನಾಥ ಸುವರ್ಣ ಅಂಬರೀಶರವರ ‘ಗಜೇಂದ್ರ’ ಚಿತ್ರದಲ್ಲಿ ಅವಕಾಶಕ್ಕಾಗಿ ಸಹನಿರ್ದೇಶಕ ಡಿ. ಬಾಬು ಅವರಿಗೆ ಕೇಳಿಕೊಂಡರು. ಆದರೆ ನನ್ನ ದೌರ್ಭಾಗ್ಯ ಅವಕಾಶ ಸಿಗಲಿಲ್ಲ. ನೊಂದು ನಡೆದು ಬರುವಾಗ ಕೆಂಚಾಂಭ ಲಾಡ್ಜ್ ಬಳಿ ಒಬ್ಬ ಜೋತಿಷಿ ಕಂಡು ಕೇಳಿದಾಗ ನಿನಗೆ ಈ ಪ್ರಪಂಚದಲ್ಲಿ ಸಹಾಯ ಮಾಡೋದು ಒಬ್ಬರೇ, ಅದು ರಾಯರು ಎಂದರು’ ಎಂದು ಜಗ್ಗೇಶ್​ ಬರಹ ಆರಂಭಿಸಿದ್ದಾರೆ.

‘ಮನೆಗೆ ಬಂದಾಗ ಅಮ್ಮ ತುಳಸಿಕಟ್ಟೆ ಬಳಿ ಕೂತಿದ್ದವಳು ನನ್ನ ಕಂಡು ಲೇ ಮಗನೆ ನಿನಗೆ ಒಳ್ಳೆಯದು ಆಗಬೇಕು ಎಂದರೆ ರಾಯರ ಬಳಿ ಹೋಗು ಎಂದು ತನ್ನ ಎಲೆ-ಅಡಿಕೆ ಕಡ್ಡಿಪುಡಿಗಾಗಿ ಕೂಡಿಟ್ಟ ಹಣ 500 ರೂಪಾಯಿ ನನಗೆ ಕೊಟ್ಟಳು ಆಶ್ಚರ್ಯವಾಯಿತು. ಮರುಚಿಂತಿಸದೆ ಮಂತ್ರಾಲಯಕ್ಕೆ ಹೊರಟು, ಇರಲು ಈ ಜಾಗ ಆಯ್ಕೆ ಮಾಡಿಕೊಂಡೆ. ಆಗ ದಿನಕ್ಕೆ 25ಪೈಸ. 3 ತಿಂಗಳು ಇಲ್ಲಿ ಉಳಿದು ರಾಯರ ಸೇವೆ ಮಾಡಿ ಮನೆಗೆ ಬಂದ ತಕ್ಷಣ ಕೆ.ವಿ. ಜಯರಾಮ್ ಅವರ ‘ಶ್ವೇತಗುಲಾಭಿ’ ಚಿತ್ರದಲ್ಲಿ ಮುಖ್ಯ ಖಳನಟ ಆಗುವ ಅವಕಾಶ ಸಿಕ್ಕಿತು. ಅಲ್ಲಿಂದ ನನ್ನ ಬದುಕಲ್ಲಿ ನಂಬಲಾಗದ ರಾಯರ ಪವಾಡ ನಡೆದು ಸಾಮಾನ್ಯ ಹಳ್ಳಿಹುಡುಗ ನವರಸನಾಯಕನಾದೆ’ ಎಂದು ಜಗ್ಗೇಶ್​ ಬರೆದುಕೊಂಡಿದ್ದಾರೆ.

‘ಮುಂದೆ ನಾನು ಪರಿಮಳಾನ ಮದುವೆಯಾಗಿ ಅವಳನ್ನು ಕರೆತಂದು ಇಲ್ಲಿ 1 ತಿಂಗಳು ವಾಸಮಾಡಿದೆ. ಇದೆ ಜಾಗದಲ್ಲಿ ಒಬ್ಬ ಸಂತ ಸಿಕ್ಕು ಪರಿಮಳಾನಿಗೆ ನಿನ್ನ ಗಂಡ ಮುಂದೆ ಬಹಳ ದೊಡ್ಡ ಸಾಧಕನಾಗುತ್ತಾನೆ ಎಂದಾಗ ಜೋರಾಗಿ ನಕ್ಕುಬಿಟ್ಟಳು ಅಂದು. ಇಂದು ಅದನ್ನು ನೆನೆದರೆ ಹೇಗಪ್ಪ ಇದೆಲ್ಲ ಎನ್ನುತ್ತಾಳೆ. ರಾಯರ ಕಾರುಣ್ಯ ಹಾಗೆ ರಾಯರನ್ನು ಅನನ್ಯವಾಗಿ ನಂಬಿ ಕಾಯವಾಚಮನ ಶುದ್ಧಾತ್ಮನಾಗಿ ಉಳಿದರೆ ಬೇಡಿದ್ದು ನೀಡೋ ಕಾಮಧೇನು’ ಎಂದು ಆ ರಾಯರ ಕೃಪೆಯನ್ನು ಜಗ್ಗೇಶ್​ ಸ್ಮರಿಸಿದ್ದಾರೆ.

‘ಕೊರೊನಾ ಸಂಕಷ್ಟ ಬಂದಾಗಿನಿಂದ ಸಂಕಲ್ಪ ಸೇವೆ ಮಾಡಲು ಆಗಲಿಲ್ಲ. ಎರಡೂವರೆ ವರ್ಷದ ಮೇಲೆ ಮತ್ತೆ ಬಂದು ಮಂತ್ರಾಲಯ ನೆಲದಲ್ಲಿ ರಾಯರ ಸೇವೆ ಮಾಡುತ್ತಿರುವೆ. ನಿಮ್ಮ ಜೊತೆ ಹಂಚಿಕೊಳ್ಳಬೇಕು ಎಂದು ಮನಸಾಯಿತು, ಲಗತ್ತಿಸಿಬಿಟ್ಟೆ. ನನ್ನ ಭಾವನೆ… ಸಹಸ್ರದೋಷವಿರಲಿ ಬದುಕಲ್ಲಿ ಕಾಯವಾಚಮನ ರಾಯರ ನಂಬಿ ನಿಮ್ಮ ಬೆನ್ನಹಿಂದೆ ನಿಲ್ಲುವರು. ಮಂತ್ರಾಲಯಕ್ಕೆ ಬರಲು ಆಗದಿದ್ದರೆ ಚಿಂತೆಯಿಲ್ಲ. ನಿಮ್ಮ ಬಡಾವಣೆಯ ರಾಯರಮಠವೆ ಸಾಕು. ನಿಮ್ಮ ಕೂಗಿಗೆ ರಾಯರು ಕಣ್ಣುಬಿಡುತ್ತಾರೆ. ಶುಭಮಸ್ತು…’ ಎಂದು ಜಗ್ಗೇಶ್​ ಬರೆದುಕೊಂಡಿದ್ದಾರೆ.

Gayathri SG

Recent Posts

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

10 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

26 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

50 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

1 hour ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

1 hour ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

1 hour ago