ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಧನ್ಯವಾದ ಹೇಳಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರ ಅಪ್ಪು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಪುನೀತ್ ರಾಜ್ಕುಮಾರ್ ನಿಧನದ ನಂತರ ಇಡೀ ರಾಜ್ಯ ದುಃಖದಲ್ಲಿ ಮುಳುಗಿತ್ತು.
ಅವರ ಅಂತಿಮ ದರ್ಶನ ಪಡೆಯೋಕೆ ಲಕ್ಷಾಂತರ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದರು. ಒಂದು ಲೆಕ್ಕಾಚಾರದ ಪ್ರಕಾರ 25 ಲಕ್ಷಕ್ಕೂ ಅಧಿಕ ಮಂದಿ ಪುನೀತ್ ಅಂತಿಮ ದರ್ಶನ ಪಡೆದಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಯಾರೂ ಗಲಾಟೆ ಮಾಡಿಲ್ಲ. ತುಂಬಾನೇ ಶಾಂತರೀತಿಯಿಂದ ಅಂತಿಮ ದರ್ಶನ ಕಾರ್ಯಕ್ರಮವನ್ನು ನಡೆಸಿಕೊಡಲಾಗಿತ್ತು. ಇದಕ್ಕೆ ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಧನ್ಯವಾದ ಹೇಳಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರ ಕೇಳಿ ಅಪ್ಪು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಪುನೀತ್ ಅಕ್ಟೋಬರ್ 29ರಂದು ಹೃದಯಾಘಾತದಿಂದ ನಿಧನ ಹೊಂದಿದ್ದರು.