ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಷ್ ನಟನೆಯ ಬ್ಯಾಡ್ ಮ್ಯಾನರ್ಸ್ ಸಿನಿಮಾ ಶೂಟಿಂಗ್ ಅಕ್ಟೋಬರ್ 5 ರಿಂದ ಪುನಾರಂಭವಾಗಲಿದೆ.
ಆ್ಯಕ್ಷನ್ ಕಮರ್ಷಿಯಲ್ ಸಿನಿಮಾದ ಚಿತ್ರೀಕರಣವನ್ನು ಈ ವರ್ಷದ ಆರಂಭದಲ್ಲಿ ಪ್ರಾರಂಭಿಸಿತ್ತು. ಆದರೆ ಕೋವಿಡ್ ಕಾರಣದಿಂದಾಗಿ ಶೂಟಿಂಗ್ ಸ್ಥಗಿತಗೊಂಡಿತ್ತು. ರವಿ ವರ್ಮ ಕೊರಿಯೋಗ್ರಾಪ್ ಮಾಡಿರುವ ಪೈಟಿಂಗ್ ದೃಶ್ಯದ ಶೂಟಿಂಗ್ ಪೂರ್ಣಗೊಂಡಿತ್ತು.
ಸದ್ಯ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಕಲಾವಿದರು ಮತ್ತು ಸಿನಿಮಾ ಸಿಬ್ಬಂದಿ ಶೂಟಿಂಗ್ ಗೆ ಮರಳಲು ರೆಡಿಯಾಗಿದ್ದಾರೆ.
ಮುಂಬರುವ ಶೆಡ್ಯೂಲ್ ನಲ್ಲಿ ಪ್ರಿಯಾಂಕಾ ಕುಮಾರ್ ಸೆಟ್ ಗೆ ಸೇರಲಿದ್ದಾರೆ, ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ನಲ್ಲಿ ಅಭಿಷೇಕ್ ಜೊತೆ ಮೊದಲ ಬಾರಿಗೆ ಸ್ಯಾಂಡಲ್ ವುಡ್ ನಲ್ಲಿ ನಟಿಸುತ್ತಿದ್ದಾರೆ. ರಚಿತಾ ರಾಮ್ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ.
ಈ ಮೊದಲು ಅಮರ್ ಸಿನಿಮಾದಲ್ಲಿ ನಟಿಸಿದ್ದ ಅಭಿಷೇಕ್ ಅಂಬರೀಷ್ ಎರಡನೇ ಸಿನಿಮಾ ಇದಾಗಿದೆ. ಕೆಎಂ ಸುಧೀರ್ ನಿರ್ಮಾಣದ ಸಿನಿಮಾಗೆ ಮಾಸ್ತಿ ಸಂಭಾಷಣೆ ಬರೆದಿದ್ದಾರೆ. ಶೇಖರ್ ಎಸ್ ಛಾಯಾಗ್ರಹಣವಿದೆ.
ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…
ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…
ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ.
ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…
ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…
ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…