1997ರಲ್ಲಿ ತೆರೆಕಂಡ ದಿನೇಶ್ ಬಾಬು ನಿರ್ದೇಶನದ ನಟ ರಮೇಶ್ ಅರವಿಂದ್ ವೃತ್ತಿ ಬದುಕಿಗೆ ದೊಡ್ಡ ತಿರುವು ಕೊಟ್ಟ ‘ಅಮೃತವರ್ಷಿಣಿ’ ಸಿನಿಮಾ ಬಿಡುಗಡೆಯಾಗಿ 25 ವರ್ಷ ಕಳೆದಿದ್ದು, ಈ ಹಿನ್ನೆಲೆಯಲ್ಲಿ ರಮೇಶ್ ಅರವಿಂದ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಂತಸವನ್ನು ಹಂಚಿಕೊಂಡಿದ್ದಾರೆ.
ಸುಹಾಸಿನಿ , ಶರತ್ ಬಾಬು, ನಿವೇದಿತಾ ಜೈನ್ ಅಭಿನಯಿಸಿದ್ದ ಈ ಚಿತ್ರ ಮ್ಯೂಸಿಕಲ್ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ‘ತುಂತುರು’, ‘ಭಲೇ ಭಲೇ ಚಂದದ ಚೆಂದುಳ್ಳಿ ಹೆಣ್ಣು ನೀನು’, ‘ಈ ಸುಂದರ ಬೆಳದಿಂದಳ’ ಈ ಹಾಡುಗಳು ಈಗಲೂ ಬೆಂಬಿಡದೇ ಕಾಡುವಂತಹ ಹಾಡುಗಳಿವು. ಇವತ್ತಿಗೂ ಈ ಚಿತ್ರದ ಹಾಡುಗಳು ಅನೇಕರಿಗೆ ಫೇವರಿಟ್ ಆಗಿ ಉಳಿದಿದೆ.
ಅಮೃತವರ್ಷಿಣಿ ಗೆ ಇಂದು 25 ವರ್ಷ !-ಜಯಶ್ರೀದೇವಿ, ದಿನೇಶ್ಬಾಬು, ಸುಹಾಸಿನಿ, ಶರತ್ಬಾಬು, ನಿವೇದಿತಾ, ದೇವಾ, ಕಲ್ಯಾಣ್, ಚಿತ್ರಾ ಮತ್ತು ನಮ್ಮ ಪ್ರೀತಿಯ ಎಸ್ಪಿಬಿ ಸರ್ ಅವರಿಗೆ ನಾನು ಋಣಿ. And a big thanks to You-each&everyone of you for uninterrupted love all these years to me🙏🏻 pic.twitter.com/n9e9sCcJUP
— Ramesh Aravind (@Ramesh_aravind) January 29, 2022
‘ಅಮೃತ ವರ್ಷಿಣಿ’ ಚಿತ್ರಕ್ಕೆ 25 ವರ್ಷ ತುಂಬಿರುವ ಸಂತಸದಲ್ಲಿ ರಮೇಶ್ ಅರವಿಂದ್, ‘ಅಮೃತವರ್ಷಿಣಿಗೆ ಇಂದು 25 ವರ್ಷ! ಜಯಶ್ರೀ ದೇವಿ, ದಿನೇಶ್ ಬಾಬು, ಸುಹಾಸಿನಿ, ಶರತ್ ಬಾಬು, ನಿವೇದಿತಾ, ದೇವಾ, ಕಲ್ಯಾಣ್, ಚಿತ್ರಾ ಮತ್ತು ನಮ್ಮ ಪ್ರೀತಿಯ ಎಸ್ಪಿಬಿ ಸರ್ ಅವರಿಗೆ ನಾನು ಋಣಿ. ಇಷ್ಟು ವರ್ಷ ನನ್ನ ಮೇಲೆ ಪ್ರೀತಿ ತೋರಿದ ಪ್ರತಿಯೊಬ್ಬರಿಗೂ ಧನ್ಯವಾದಗಳು’ ಎಂದು ಹೇಳಿ ಬ್ಲ್ಯಾಕ್ ಅಂಡ್ ವೈಟ್ ಫೋಟೋ ಮೂಲಕ ತಮ್ಮ ಸಂತೋಷವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. 1997ರಲ್ಲಿ ಬಿಡುಗಡೆಯಾದ ‘ಅಮೃತವರ್ಷಿಣಿ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ದಿನೇಶ್ ಬಾಬು ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದರು. ಭಾರತಿ ದೇವಿ ಅವರ ಚಿನ್ನಿ ಚಿತ್ರ ಬ್ಯಾನರ್ ಅಡಿ ಚಿತ್ರ ನಿರ್ಮಾಣವಾಗಿತ್ತು. ಚಿತ್ರಕ್ಕೆ ದೇವಾ ಅವರು ಹಿನ್ನೆಲೆ ಸಂಗೀತ ಸಂಯೋಜಿಸಿದ್ದು, ದಿನೇಶ್ ಬಾಬು ಛಾಯಾಗ್ರಹಣವಿತ್ತು. ‘ಅಮೃತವರ್ಷಿಣಿ’ ಚಿತ್ರದಲ್ಲಿ ರಮೇಶ್ ಅರವಿಂದ್ ನೆಗೆಟಿವ್ ಶೇಡ್ನಲ್ಲಿ ಕಾಣಿಸಿಕೊಂಡಿದ್ದು, ಈ ಪಾತ್ರ ಅವರಿಗೆ ಹೆಚ್ಚು ಖ್ಯಾತಿಯನ್ನು ತಂದುಕೊಟ್ಟಿತ್ತು. ಈ ಚಿತ್ರವು ರಾಜ್ಯ ಪ್ರಶಸ್ತಿ ಹಾಗೂ ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು. ‘ಅಮೃತ ವರ್ಷಿಣಿ’ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗೆ ಡಬ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿತ್ತು.